AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ

ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ, ಅವರ ಸಾವಿಗೆ ವಿಕ್ಟೋರಿಯಾ ವೈದ್ಯರೇ ಕಾರಣ ಎಂದು ಕಣ್ಣೀರಿಟ್ಟ ಮಹಿಳೆ
ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧಿನ ಗಾಯಾಳು ಖೈದಿ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Apr 25, 2021 | 2:13 PM

Share

ಬೆಂಗಳೂರು: ಮಹಾಮಾರಿ ಕೊರೊನಾ ನಡುವೆ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ನನ್ನ ಗಂಡನಿಗೆ ಕೈಕಾಲು ಕಟ್ಟಿ ಹಾಕಿ ಟ್ರೀಟ್ಮೆಂಟ್ ಕೊಟ್ಟಿದ್ದಾರೆ. ಕೈಕಾಲು ಕಟ್ಟಿಹಾಕಿ ಟ್ರೀಟ್ಮೆಂಟ್ ಕೊಡುವ ಅಗತ್ಯವೇನಿತ್ತು? ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ.

ಪೀಪಲ್ ಟ್ರೀ ಆಸ್ಪತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ್ದೆವು. ಆಗ ಕೊರೊನಾ ಪಾಸಿಟಿವ್ ಬಂತು. ಎಷ್ಟೇ ಪ್ರಯತ್ನಿಸಿದರೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗಲೇ ಇಲ್ಲ. 3 ದಿನಗಳ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದೆವು. ವಿಕ್ಟೋರಿಯಾದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿದ ವೇಳೆ ರಿಪೋರ್ಟ್ ನೆಗೆಟಿವ್ ಬಂದಿತ್ತು. ಆದ್ರೆ ಅಲ್ಲಿನ ಸಿಬ್ಬಂದಿ ಹೇಗಿದ್ರೂ ಕೊವಿಡ್ ವಾರ್ಡ್ಗೆ ಬಂದಿದ್ದೀರಿ ಚಿಕಿತ್ಸೆ ಪಡೆಯಿರಿ ಎಂದು ಒತ್ತಾಯಪೂರ್ವಕವಾಗಿ ಕೂಡಿಟ್ಟು ಚಿಕಿತ್ಸೆ ನೀಡಿದ್ದಾರೆ. ಆದರೆ ಯಾವ ರೀತಿ ಚಿಕಿತ್ಸೆ ನೀಡಿದರು ಎಂದು ಮಾಹಿತಿಯಿಲ್ಲ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ನನ್ನ ಪತಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆಯನ್ನೇ ನೀಡಿಲ್ಲ. ಆಸ್ಪತ್ರೆಗೆ ದಾಖಲಾಗುವಾಗ ಸ್ಮಾರ್ಟ್ಫೋನ್ ಬೇಡ ಅಂದಿದ್ರು. ಕೀ ಪ್ಯಾಡ್ ಸೆಟ್ ಮಾತ್ರ ಬಳಸಲು ಅವಕಾಶ ಎಂದಿದ್ದರು. ವಾರ್ಡ್ಗೆ ಹೋದ ಮೇಲೆ ಉಸಿರಾಟದ ಸಮಸ್ಯೆ ಕಾಣಿಸಿತ್ತು. ಅಲ್ಸರ್ ಆಗಿದ್ದರಿಂದ ಮಾತಾಡಲು ಆಗುತ್ತಿಲ್ಲ ಎಂದು ನನ್ನ ಪತಿ ಹೇಳಿದ್ರು. ಚಿಕಿತ್ಸೆಯನ್ನೇ ನೀಡದೆ ಕೂಡಿಟ್ಟು ಸಾಯಿಸಿದ್ದಾರೆ. ನನ್ನ ಗಂಡನ ಸಾವಿಗೆ ವಿಕ್ಟೋರಿಯಾ ಆಸ್ಪತ್ರೆಯವರೇ ಕಾರಣ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಕಣ್ಣೀರು ಇಟ್ಟಿದ್ದಾರೆ.

ಇದನ್ನೂ ಓದಿ: ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ