AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮಗಳು ಡಾಕ್ಟರ್ ಆಗಿದ್ರೂ ನನ್ನ ಅಣ್ಣನ ಉಳಿಸಲಾಗಲಿಲ್ಲ.. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿ ಕಣ್ಣೀರಿಟ್ಟ ಸಹೋದರಿ

ಕೊರೊನಾ ಸೋಂಕಿಗೆ ಚಿಕಿತ್ಸೆ ಸಿಗದೆ ಯಲಹಂಕದ 50 ವರ್ಷದ ವೈದ್ಯ ನಿನ್ನೆ ಮೃತಪಟ್ಟಿದ್ದ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೆ, ಬೇರೆ ಆಸ್ಪತ್ರೆಗೂ ಕಳಿಸದ ಹಿನ್ನೆಲೆ ನನ್ನ ಅಣ್ಣ ಮೃತಪಟ್ಟಿದ್ದಾರೆ ಎಂದು ಸುಮತಿ ಆರೋಪಿಸಿದ್ದಾರೆ. ಕೆ.ಸಿ.ಜನರಲ್ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನನ್ನ ಮಗಳು ಡಾಕ್ಟರ್ ಆಗಿದ್ರೂ ನನ್ನ ಅಣ್ಣನ ಉಳಿಸಲಾಗಲಿಲ್ಲ.. ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿ ಕಣ್ಣೀರಿಟ್ಟ ಸಹೋದರಿ
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
|

Updated on: Apr 18, 2021 | 1:08 PM

ಬೆಂಗಳೂರು: ‘ನನ್ನ ಮಗಳು ಡಾಕ್ಟರ್ ಆಗಿದ್ರೂ ನನ್ನ ಅಣ್ಣನ ಉಳಿಸಲಾಗಲಿಲ್ಲ’ ಕಾರ್ಪೊರೇಟರ್ ರೆಫರ್ ಮಾಡಿದ್ರೂ, ಪರಿ ಪರಿಯಾಗಿ ಬೇಡಿಕೊಂಡ್ರೂ ಚಿಕಿತ್ಸೆ ಸಿಗಲಿಲ್ಲ ಎಂದು ಕೊರೊನಾಗೆ ಬಲಿಯಾದ ವ್ಯಕ್ತಿಯ ಸಹೋದರಿ ಕಣ್ಣೀರಿಟ್ಟಿದ್ದಾರೆ. ಮಹಾಮಾರಿ ಕೊರೊನಾ ಯಾರನ್ನೂ ಬಿಡುತ್ತಿಲ್ಲ. ಸಿಕ್ಕ ಸಿಕ್ಕವರ ದೇಹ ಸೇರುತ್ತಿದೆ. ಜನರನ್ನು ಹೆದರಿಸಿ ತನ್ನ ಕಪಿಮುಷ್ಟಿಯಲ್ಲಿ ಬಂಧಿಸಿಟ್ಟಿದೆ.

ಕೊರೊನಾ ಸೋಂಕಿಗೆ ಚಿಕಿತ್ಸೆ ಸಿಗದೆ ಯಲಹಂಕದ 50 ವರ್ಷದ ವೈದ್ಯ ನಿನ್ನೆ ಮೃತಪಟ್ಟಿದ್ದ. ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೆ, ಬೇರೆ ಆಸ್ಪತ್ರೆಗೂ ಕಳಿಸದ ಹಿನ್ನೆಲೆ ನನ್ನ ಅಣ್ಣ ಮೃತಪಟ್ಟಿದ್ದಾರೆ ಎಂದು ಸುಮತಿ ಆರೋಪಿಸಿದ್ದಾರೆ. ಕೆ.ಸಿ.ಜನರಲ್ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಏನೂ ಸಿದ್ಧತೆ ಮಾಡಿಕೊಳ್ಳದೆ ಸಬೂಬು ಹೇಳುತ್ತಿದೆ. ಸೂಕ್ತ ಸಿದ್ಧತೆ ಮಾಡಿಕೊಳ್ಳಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅಣ್ಣನನ್ನು ಕಳೆದುಕೊಂಡ ತಂಗಿ ಕಣ್ಣೀರು ಹಾಕಿದ್ದಾರೆ. ಕನಿಷ್ಟ ಸೌಲಭ್ಯ ಸಹ ವಹಿಸೋಕೆ ಆಗಿಲ್ಲವಾ ಆಸ್ಪತ್ರೆಗೆ. ನನ್ನ ಮಗಳು ಡಾಕ್ಟರ್ ಆಗಿದ್ರೂ ನನ್ನ ಅಣ್ಣನ ಉಳಿಸಲಾಗಲಿಲ್ಲ. ಕಾರ್ಪೊರೇಟರ್ ರೆಫರ್ ಮಾಡಿ ಕಳುಹಿಸಿದ್ರೂ ಟ್ರೀಟ್ ಮೆಂಟ್ ಸಿಗಲಿಲ್ಲವೆಂದು ಕೆ.ಸಿ ಜನರಲ್ ಆಸ್ಪತ್ರೆ ಮೇಲೆ‌ ಮಹಿಳೆ ಕಿಡಿಕಾರಿದ್ದಾರೆ. ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗ್ತೀವಿ ಅಂದ್ರೂ ಡಿಸ್ಚಾರ್ಜ್ ಮಾಡಲಿಲ್ಲ. ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಅಣ್ಣ ಮೃತಪಟ್ಟಿದ್ದಾರೆ. ಐದು ದಿನಗಳ ಹಿಂದೆ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಸಂಜೆ ಅಣ್ಣ ಮೃತಪಟ್ಟಿದ್ದಾರೆ. ಸರ್ಕಾರ ಏನು ಸಿದ್ದತೆ ಮಾಡಿಕೊಳ್ಳದೆ ಸಬೂಬು ಹೇಳ್ತಾ ಇದೆ ಅಷ್ಟೆ. ದಯವಿಟ್ಟು ಸೂಕ್ತ ಸಿದ್ದತೆ ಮಾಡಿಕೊಳ್ಳಿ ಅಂತ ಸರ್ಕಾರಕ್ಕೆ ಮಹಿಳೆ ಮನವಿ ಮಾಡಿಕೊಂಡಿದ್ದಾರೆ. ಸುಮನಹಳ್ಳಿ ಚಿತಾಗಾರದ ಬಳಿ ಅಣ್ಣನನ್ನು ಕಳೆದುಕೊಂಡ ಸುಮತಿ ಕಣ್ಣೀರಿಡುತ್ತ ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ ವಿಶೇಷ ಕಠಿಣ ಕ್ರಮ ಅನಿವಾರ್ಯ; ಆರೋಗ್ಯ ಸಚಿವ ಡಾ.ಸುಧಾಕರ್

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ