ಯಾದಗಿರಿ: ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಮಹಿಳೆಯೊಬ್ಬರು ಜನ್ಮ ನೀಡಿರುವ ಘಟನೆ ನಡೆದಿದೆ. ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಪತಿ ಜೊತೆ ರೈಲಿನಲ್ಲಿ ಬೆಂಗಳೂರಿಗೆ ಗೀತಾ ಹೊರಟಿದ್ದರು. ಪ್ರಯಾಣದ ಮಾರ್ಗ ಮಧ್ಯೆ ಗೀತಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಹೊರಟಿದ್ದರು. ಕೂಡಲೆ ಗೀತಾಗೆ ಅಂಗನವಾಡಿ ಕಾರ್ಯಕರ್ತೆಯರು ಹೆರಿಗೆ ಮಾಡಿಸಿದ್ದಾರೆ. ಸದ್ಯ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
ಸಾಧು ಶ್ರೀನಾಥ್
Updated on:
Dec 10, 2019 | 12:41 PM
ಯಾದಗಿರಿ: ಚಲಿಸುತ್ತಿರುವ ರೈಲಿನಲ್ಲಿ ಮಗುವಿಗೆ ಮಹಿಳೆಯೊಬ್ಬರು ಜನ್ಮ ನೀಡಿರುವ ಘಟನೆ ನಡೆದಿದೆ. ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಪತಿ ಜೊತೆ ರೈಲಿನಲ್ಲಿ ಬೆಂಗಳೂರಿಗೆ ಗೀತಾ ಹೊರಟಿದ್ದರು. ಪ್ರಯಾಣದ ಮಾರ್ಗ ಮಧ್ಯೆ ಗೀತಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಹೊರಟಿದ್ದರು. ಕೂಡಲೆ ಗೀತಾಗೆ ಅಂಗನವಾಡಿ ಕಾರ್ಯಕರ್ತೆಯರು ಹೆರಿಗೆ ಮಾಡಿಸಿದ್ದಾರೆ. ಸದ್ಯ ಗೀತಾ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
Published On - 12:10 pm, Tue, 10 December 19
sadhu srinath
ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ!
ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು