AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಶುಶ್ರೂಕಿ, ಚಾಲಕ ಸಮಯಪ್ರಜ್ಞೆಗೆ ಶ್ಲಾಘನೆ

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಶುಶ್ರೂಕಿ, ಚಾಲಕ ಸಮಯಪ್ರಜ್ಞೆಗೆ ಶ್ಲಾಘನೆ
ಆಂಬ್ಯುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
Follow us
TV9 Web
| Updated By: ಆಯೇಷಾ ಬಾನು

Updated on: Dec 31, 2023 | 8:36 AM

ಚಿಕ್ಕಮಗಳೂರು, ಡಿ. 31: ತುಂಬುಗರ್ಭಿಣಿಯನ್ನು ಹೆರಿಗೆಗೆಂದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಆಕೆ ಆಂಬ್ಯುಲೆನ್ಸ್​ನಲ್ಲೇ (Ambulance) ಗಂಡು ಮಗುವಿಗೆ ಜನ್ಮ (Birth) ನೀಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಬೆಳಗೋಡು ಗ್ರಾಮದ ಮಹಿಳೆಯನ್ನ ಹೆರಿಗೆಗೆಂದು 108 ಆಂಬ್ಯುಲೆನ್ಸ್​ನಲ್ಲಿ ಮೂಡಿಗೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಳಗೋಡು ಗ್ರಾಮದ ಮಹಿಳೆಯನ್ನ 108 ಆಂಬ್ಯುಲೆನ್ಸ್​ನಲ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಹಿಳೆಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಸ್ಪತ್ರೆ ತಲುಪಲು ಇನ್ನೂ 15 ಕಿ.ಮೀ. ದೂರವಿರುವಾಗಲೇ ಆಕೆಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಗಂಗಾಧರನಾಯ್ಕ ವಾಹನವನ್ನು ಅತಿವೇಗವಾಗಿ ಚಲಾಯಿಸಿದ್ದಾರೆ. ಆದರೆ, ಗರ್ಭೀಣಿ ಮಹಿಳೆಯನ್ನ ಆಸ್ಪತ್ರೆಗೆ ತಲುಪಿಸಲು ಮುಂದಾದರೂ ನೋವು ತಡೆಯಲಾಗದೆ ಮಹಿಳೆ ಕೂಗಾಡಿದ್ದಾಳೆ. ಆಗ ಬೇರೆ ದಾರಿ ಕಾಣದೆ ಶುಶ್ರೂಕಿ ಮಂಜುಳಾ ಆಂಬ್ಯುಲೆನ್ಸ್​ನಲ್ಲೇ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆ ಮಗುವಿಗೆ ಜನ್ಮ ನೀಡುತ್ತಿದ್ದಂತೆ ಚಾಲಕ ವಾಹನವನ್ನು ನಿಲ್ಲಿಸಿದ್ದು ಮಹಿಳೆಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ಸಾಗಿಸಲಾಗಿತು. ತಾಯಿ ಮಗು ಆರೋಗ್ಯವಾಗಿದ್ದಾರೆಂದು ಮಹಿಳೆಯ ಜೊತೆಗಿದ್ದ ಅವರ ಪತಿ ಮಾಹಿತಿ ನೀಡಿದ್ದಾರೆ. 108 ಆಂಬ್ಯುಲೆನ್ಸ್​ನಲ್ಲಿ ಮಹಿಳೆಯ ಜೊತೆಗಿದ್ದ ಶುಶ್ರೂಕಿ ಮಂಜುಳಾ ಮತ್ತು ಚಾಲಕ ಗಂಗಾಧರ್ ಅವರ ಸಮಯ ಹಾಗೂ ಕರ್ತವ್ಯಪ್ರಜ್ಞೆಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್​ ಇಲಾಖೆ

ಸಫಾರಿ ವೇಳೆ ಹುಲಿ, ಆನೆ ಮರಿ ದರ್ಶನ

ಕಬಿನಿ ಹಿನ್ನೀರಿನ ಸಫಾರಿ ವೇಳೆ ಹುಲಿ, ಆನೆ ಮರಿ ದರ್ಶನವಾಗಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರು ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಹುಲಿ, ಆನೆ ಮರಿ ವಿಹಾರ ಮಾಡ್ತಿದ್ವು. ಹುಲಿಯೂ ಹೊಂಡದಲ್ಲಿ ನೀರು ಕುಡಿಯುತ್ತಿತ್ತು. ಅತ್ತ ಆನೆಯೂ ಮರಿ ಜೊತೆ ವಾಕಿಂಗ್ ಮಾಡ್ತಿತ್ತು. ಈ ಅಪರೂಪದ ದೃಶ್ಯಗಳನ್ನ ಪ್ರವಾಸಿಗರು ಮೊಬೈಲ್‌ನಲ್ಲಿ ಸೆರೆಹಿಡಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್