AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ. ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. […]

ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆಯೇ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 8:10 PM

Share

ಶಿವಮೊಗ್ಗ: ಮೈಕ್ರೋ ಫೈನಾನ್ಸ್​ನಲ್ಲಿ ಸಾಲ ಪಡೆದ ಮಹಿಳೆಯಿಂದ ಕಿರುಕುಳ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಮಹಿಳೆಯರ ನಡುವೆಯೇ ಗಲಾಟೆಯಾಗಿದ್ದು, ಸ್ತ್ರೀಯರ ಜಗಳ ಬಿಡಿಸಲು ಹೋದ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿದ್ದಾರೆ.

ಫೈನಾನ್ಸ್​ನಲ್ಲಿ ಸಾಲಪಡೆದ ಮಹಿಳೆಯರಿಗೆ ಕಿರುಕುಳ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಮಹಿಳೆಯರು ಧರಣಿ ನಡೆಸುತ್ತಿದ್ರು. ಆಗ ಪ್ರತಿಭಟನಾಕಾರರ ಗುಂಪಿಗೆ ಸೇರಿ ಕೆಲ ಮಹಿಳೆಯರು ಗಲಾಟೆ ಮಾಡಿದ್ದಾರೆ. ಇದನ್ನು ಗಮನಿಸಿದ ಪ್ರತಿಭಟನಾನಿರತ ಮಹಿಳೆಯರು ಆ ಮಹಿಳಾ ಗುಂಪನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಗಲಾಟೆ ಬಿಡಿಸಲು ಹೋದ ಜಯನಗರ ಪೊಲೀಸ್ ಠಾಣೆಯ ಮಹಿಳಾ ಪೇದೆ ಸವಿತಾ ಮಫ್ತಿಯಲ್ಲಿದ್ದದ್ದು ತಿಳಿಯದೆ ಹಲ್ಲೆ ಮಾಡಿದ್ದಾರೆ. ಮಹಿಳಾ ಪೊಲೀಸ್ ಮೇಲೆ ಹಲ್ಲೆ ಮಾಡಿದ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು