AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಷ್ಟ ಎಂದು ಪೊಲೀಸ್ ಠಾಣೆಗೆ ಹೋದ್ರೆ, ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ: ದೂರು ದಾಖಲು

ಕಷ್ಟ ಎಂದು ಪೊಲೀಸ್ ಠಾಣೆಗೆ ಹೋದ ಮಹಿಳೆಗೆ ಪೇದೆಯೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಮಲಾಪುರ ಠಾಣೆ ಕಾನ್ಸ್​ಟೇಬಲ್ ಬಸವರಾಜ ಎಂಬುವವರು ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ಘಟನೆ ಸಂಬಂಧ ಅದೇ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

ಕಷ್ಟ ಎಂದು ಪೊಲೀಸ್ ಠಾಣೆಗೆ ಹೋದ್ರೆ, ಪೇದೆಯಿಂದಲೇ ಮಹಿಳೆಗೆ ಲೈಂಗಿಕ ಕಿರುಕುಳ: ದೂರು ದಾಖಲು
ಕಮಲಾಪುರ ಠಾಣೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು|

Updated on:Jan 14, 2024 | 9:56 AM

Share

ಕಲಬುರಗಿ, ಜ.14: ಜನರನ್ನು ರಕ್ಷಣೆ ಮಾಡಬೇಕಿದ್ದ ಆರಕ್ಷಕರೇ ಭಕ್ಷಕರಾದರೆ ಜನ ಯಾರ ಬಳಿ ಹೋಗಬೇಕು? ಕಲಬುರಗಿ ಜಿಲ್ಲೆ ಕಮಲಾಪುರ ಠಾಣೆಯ (Kamalapur Police Station) ಕಾನ್ಸ್​ಟೇಬಲ್ ಇಡೀ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಹ ಕೃತ್ಯ ಎಸಗಿದ್ದಾನೆ. ಕಷ್ಟ ಎಂದು ಪೊಲೀಸ್ ಠಾಣೆಗೆ ಹೋದ ಮಹಿಳೆಗೆ ಪೇದೆಯೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಮಲಾಪುರ ಠಾಣೆ ಕಾನ್ಸ್​ಟೇಬಲ್ ಬಸವರಾಜ ಎಂಬುವವರು ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ಘಟನೆ ಸಂಬಂಧ ಕಲಬುರಗಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

ಪ್ರತಿ ದಿನ ಜಗಳ, ಹೊಡೆದಾಟ, ವಿಪರಿತ ಕುಡಿತದಿಂದ ಗಂಡನ ಕಾಟಕ್ಕೆ ಬೇಸತ್ತಿದ್ದ ಮಹಿಳೆ ದೂರು ನೀಡಲು ಕಮಲಾಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ನ್ಯಾಯಕ್ಕಾಗಿ ಪೊಲೀಸರ ಮುಂದೆ ಕೈ ಚಾಚಿದ್ದರು. ಮಹಿಳೆಯ ಅಸಹಾಯಕತೆಯನ್ನು ನೋಡಿದ ಕಾನ್ಸ್​ಟೇಬಲ್ ಬಸವರಾಜ ಆಕೆಯ ಕಣ್ಣೀರೊರೆಸುವ ನೆಪದಲ್ಲಿ ಮಹಿಳೆಯ ಪರಿಚಯ ಮಾಡಿಕೊಂಡಿದ್ದ. ಬಳಿಕ ನನ್ನ ಜೊತೆ ಒಂದು ರಾತ್ರಿ ಮಲಗು ನಿನ್ನ ಸಮಸ್ಯೆ ಬಗೆಹರಿಸುತ್ತೇನೆ ಎಂದು ಮಹಿಳೆ ಬಳಿ ಹೇಳಿದ್ದ. ಅಷ್ಟೇ ಅಲ್ಲದೆ ಪ್ರತಿನಿತ್ಯ ವಾಟ್ಸಾಪ್ ಮೆಸೇಜ್ ಮಾಡಿ ಕಿರುಕುಳ‌ ನೀಡುತ್ತಿದ್ದ. ಸದ್ಯ ಕಿರುಕುಳ ತಾಳಲಾರದೆ ಕಲಬುರಗಿ ಮಹಿಳಾ ಠಾಣೆಯಲ್ಲಿ ಕಾನ್ಸ್​ಟೇಬಲ್ ಬಸವರಾಜ ವಿರುದ್ದ ಮಹಿಳೆ ದೂರು ದಾಖಲಿಸಿದ್ದಾರೆ. ಕಮಲಾಪುರ ಠಾಣೆಯಲ್ಲಿ ಐಪಿಸಿ ಸೆ.345a ಹಾಗು 506 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಕೊಟ್ಟಿಗೆಗೆ ಬೆಂಕಿ ಬಿದ್ದು 9 ಜಾನುವಾರು, 20 ಮೇಕೆ, ಕುರಿ ಸಾವು

ಸ್ಯಾಂಡಲ್ ಸೋಪ್ ನಕಲಿ ಜಾಲ ಪತ್ತೆ

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಸಿ, ಮಾರಾಟ ಮಾಡ್ತಿದ್ದ ಜಾಲವನ್ನ ಪೊಲೀಸರು ಭೇದಿಸಿದ್ದಾರೆ. ಹೈದರಾಬಾದ್​​ನ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬುವವರನ್ನ ವಶಕ್ಕೆ ಪಡೆದಿರೋ ಪೊಲೀಸರು, ಸುಮಾರು 2ಕೋಟಿ ಮೌಲ್ಯದ ವಸ್ತುಗಳನ್ನ ವಶಕ್ಕೆ ಪಡೆದಿದ್ದಾರೆ. ಸಚಿವ ಎಂ.ಬಿ.ಪಾಟೀಲ್​​ಗೆ ನಕಲಿ ಸೋಪ್ ಮಾರಾಟದ ಬಗ್ಗೆ ಬಂದಿದ್ದ ಕರೆ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ನಕಲಿ ಜಾಲ ಪತ್ತೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:49 am, Sun, 14 January 24

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್