AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ
ನದಿಗೆ ಜಿಗಿದ ಮಹಿಳೆಯನ್ನು ರಕ್ಷಿಸಲಾಗಿದೆ.
TV9 Web
| Edited By: |

Updated on: Jun 27, 2021 | 10:44 PM

Share

ಶಿವಮೊಗ್ಗ: ಸಿಂಗಂದೂರು ಲಾಂಚ್ ಚಲಿಸುತ್ತಿರುವಾಗಲೇ ಮಹಿಳೆಯೋರ್ವಳು ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕರೂರು ಗ್ರಾಮದ ರೇಣುಕಾ (48) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಅವರನ್ನು ತಕ್ಷಣವೇ ಜಾಗೃತಗೊಂಡ ಲಾಂಚ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಈವರೆಗೂ ಇಂತಹದ್ದೊಂದು ಘಟನೆ ಸಿಗಂದೂರು ಲಾಂಜ್​ನಲ್ಲಿ ನಡೆದಿರಲಿಲ್ಲ ಎಂದು ಸ್ಥಳೀಯರಾದ ಜಿ. ಟಿ ಸತ್ಯನಾರಾಯಣ ಎಂಬುವವರು ಹಂಚಿಕೊಂಡಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಕ್ಷಣದಲ್ಲಿ ಸಮಯ ಪ್ರಜ್ಞೆ ಮೆರೆದು ಲಾಂಚ್​ನ್ನು ನಿಯಂತ್ರಣ ತೆಗೆದುಕೊಂಡು ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ಅವರುಗಳು ಅತಿ ಹತ್ತಿರ ಕ್ರಮಿಸಿ ಸುರಕ್ಷಿತ ಸಾಧನ ತಲುಪಿಸಿದ್ದಾರೆ. ಜತೆಗೆ ನದಿಗೆ ಹಾರಿ ಕೊನೆ ಕ್ಷಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸ್ಥಳೀಯ ಯುವಕ ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರು, ಸುಧಾಕರ್ ಮುಂತಾದವರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

(Woman tries to suicide in Sigandur launch in Sharavati river)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು