AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ
ನದಿಗೆ ಜಿಗಿದ ಮಹಿಳೆಯನ್ನು ರಕ್ಷಿಸಲಾಗಿದೆ.
TV9 Web
| Edited By: |

Updated on: Jun 27, 2021 | 10:44 PM

Share

ಶಿವಮೊಗ್ಗ: ಸಿಂಗಂದೂರು ಲಾಂಚ್ ಚಲಿಸುತ್ತಿರುವಾಗಲೇ ಮಹಿಳೆಯೋರ್ವಳು ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕರೂರು ಗ್ರಾಮದ ರೇಣುಕಾ (48) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಅವರನ್ನು ತಕ್ಷಣವೇ ಜಾಗೃತಗೊಂಡ ಲಾಂಚ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಈವರೆಗೂ ಇಂತಹದ್ದೊಂದು ಘಟನೆ ಸಿಗಂದೂರು ಲಾಂಜ್​ನಲ್ಲಿ ನಡೆದಿರಲಿಲ್ಲ ಎಂದು ಸ್ಥಳೀಯರಾದ ಜಿ. ಟಿ ಸತ್ಯನಾರಾಯಣ ಎಂಬುವವರು ಹಂಚಿಕೊಂಡಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಕ್ಷಣದಲ್ಲಿ ಸಮಯ ಪ್ರಜ್ಞೆ ಮೆರೆದು ಲಾಂಚ್​ನ್ನು ನಿಯಂತ್ರಣ ತೆಗೆದುಕೊಂಡು ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ಅವರುಗಳು ಅತಿ ಹತ್ತಿರ ಕ್ರಮಿಸಿ ಸುರಕ್ಷಿತ ಸಾಧನ ತಲುಪಿಸಿದ್ದಾರೆ. ಜತೆಗೆ ನದಿಗೆ ಹಾರಿ ಕೊನೆ ಕ್ಷಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸ್ಥಳೀಯ ಯುವಕ ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರು, ಸುಧಾಕರ್ ಮುಂತಾದವರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

(Woman tries to suicide in Sigandur launch in Sharavati river)

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್