AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ
ನದಿಗೆ ಜಿಗಿದ ಮಹಿಳೆಯನ್ನು ರಕ್ಷಿಸಲಾಗಿದೆ.
TV9 Web
| Edited By: |

Updated on: Jun 27, 2021 | 10:44 PM

Share

ಶಿವಮೊಗ್ಗ: ಸಿಂಗಂದೂರು ಲಾಂಚ್ ಚಲಿಸುತ್ತಿರುವಾಗಲೇ ಮಹಿಳೆಯೋರ್ವಳು ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕರೂರು ಗ್ರಾಮದ ರೇಣುಕಾ (48) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಅವರನ್ನು ತಕ್ಷಣವೇ ಜಾಗೃತಗೊಂಡ ಲಾಂಚ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಈವರೆಗೂ ಇಂತಹದ್ದೊಂದು ಘಟನೆ ಸಿಗಂದೂರು ಲಾಂಜ್​ನಲ್ಲಿ ನಡೆದಿರಲಿಲ್ಲ ಎಂದು ಸ್ಥಳೀಯರಾದ ಜಿ. ಟಿ ಸತ್ಯನಾರಾಯಣ ಎಂಬುವವರು ಹಂಚಿಕೊಂಡಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಕ್ಷಣದಲ್ಲಿ ಸಮಯ ಪ್ರಜ್ಞೆ ಮೆರೆದು ಲಾಂಚ್​ನ್ನು ನಿಯಂತ್ರಣ ತೆಗೆದುಕೊಂಡು ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ಅವರುಗಳು ಅತಿ ಹತ್ತಿರ ಕ್ರಮಿಸಿ ಸುರಕ್ಷಿತ ಸಾಧನ ತಲುಪಿಸಿದ್ದಾರೆ. ಜತೆಗೆ ನದಿಗೆ ಹಾರಿ ಕೊನೆ ಕ್ಷಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸ್ಥಳೀಯ ಯುವಕ ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರು, ಸುಧಾಕರ್ ಮುಂತಾದವರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

(Woman tries to suicide in Sigandur launch in Sharavati river)

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!