AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ.

Viral News: ಸಿಗಂದೂರು ಲಾಂಚ್ ಚಲಿಸುವಾಗಲೇ ಶರಾವತಿ ನದಿಗೆ ಜಿಗಿದ ಮಹಿಳೆ; ವೀರೋಚಿತ ರಕ್ಷಣೆ
ನದಿಗೆ ಜಿಗಿದ ಮಹಿಳೆಯನ್ನು ರಕ್ಷಿಸಲಾಗಿದೆ.
TV9 Web
| Edited By: |

Updated on: Jun 27, 2021 | 10:44 PM

Share

ಶಿವಮೊಗ್ಗ: ಸಿಂಗಂದೂರು ಲಾಂಚ್ ಚಲಿಸುತ್ತಿರುವಾಗಲೇ ಮಹಿಳೆಯೋರ್ವಳು ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಶರಾವತಿ ಹಿನ್ನೀರಿನ ಹೊಳೆಬಾಗಿಲಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಕರೂರು ಗ್ರಾಮದ ರೇಣುಕಾ (48) ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದು, ಅವರನ್ನು ತಕ್ಷಣವೇ ಜಾಗೃತಗೊಂಡ ಲಾಂಚ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಈವರೆಗೂ ಇಂತಹದ್ದೊಂದು ಘಟನೆ ಸಿಗಂದೂರು ಲಾಂಜ್​ನಲ್ಲಿ ನಡೆದಿರಲಿಲ್ಲ ಎಂದು ಸ್ಥಳೀಯರಾದ ಜಿ. ಟಿ ಸತ್ಯನಾರಾಯಣ ಎಂಬುವವರು ಹಂಚಿಕೊಂಡಿದ್ದಾರೆ.

ಸ್ವಿಫ್ಟ್​ ಕಾರಿನಲ್ಲಿ ಏಕಾಂಗಿಯಾಗಿ ಸಿಗಂದೂರಿಗೆ ಬಂದಿದ್ದ ಮಹಿಳೆ ಸಿಗಂದೂರು ಚೌಡೇಶ್ವರಿ ದರ್ಶನ ಪಡೆದಿದ್ದಾರೆ. ಆದರೆ ಯಾರೂ ಎಣಿಸದ ರೀತಿಯಲ್ಲಿ ಲಾಂಚ್​ನಲ್ಲಿ ತೆರಳುವಾಗ ಏಕಾಏಕಿ ನದಿಗೆ ಹಾರಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆತ್ಮಹತ್ಯೆ ಕ್ಷಣದಲ್ಲಿ ಸಮಯ ಪ್ರಜ್ಞೆ ಮೆರೆದು ಲಾಂಚ್​ನ್ನು ನಿಯಂತ್ರಣ ತೆಗೆದುಕೊಂಡು ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ಅವರುಗಳು ಅತಿ ಹತ್ತಿರ ಕ್ರಮಿಸಿ ಸುರಕ್ಷಿತ ಸಾಧನ ತಲುಪಿಸಿದ್ದಾರೆ. ಜತೆಗೆ ನದಿಗೆ ಹಾರಿ ಕೊನೆ ಕ್ಷಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಸ್ಥಳೀಯ ಯುವಕ ಪ್ರಕಾಶ್ ಬೆಳಮಕ್ಕಿ, ಪ್ರಶಾಂತ್ ಸಿಗಂದೂರು, ಸುಧಾಕರ್ ಮುಂತಾದವರು ಮಹಿಳೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: 

ಪ್ರವಾಸಿಗರಿಗಾಗಿ ಹೊನ್ನಾವರ-ಗೇರಸೊಪ್ಪಾ ಜಲಯಾನ ಯೋಜನೆ; ಇತಿಹಾಸದ ಕಾಲಗರ್ಭದಿಂದ ಇಲ್ಲಿಯವರೆಗೆ..

ವಿಯೆಟ್ನಾಂ ಯೋಗ: ಬುದ್ಧನ ನಾಡಲ್ಲಿ ಯೋಗ ಕಲಿಸುವ ಕರ್ನಾಟಕದ ಯೋಗ ಶಿಕ್ಷಕರು ಬರೆಯುತ್ತಾರೆ..

(Woman tries to suicide in Sigandur launch in Sharavati river)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್