AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: 70 ಲಕ್ಷ ವಂಚಿಸಿ ಪರಾರಿಯಾಗಿದ್ದ ಮಹಿಳೆ ಪೊಲೀಸರ ವಶಕ್ಕೆ

ಹೋಮ, ವಿಶೇಷ ಪೂಜೆ ಮಾಡುತ್ತಾ ತನ್ನ ಅಕ್ಕಪಕ್ಕದಲ್ಲಿರುವ ಮಹಿಳೆಯರ ವಿಶ್ವಾಸ ಗಳಿಸಿದ್ದಳು. ಅಲ್ಲದೇ ದೇವರ ಹೆಸರಿನಲ್ಲಿ ಬಾಗಿನ, ಅರಿಶಿನ ಕುಂಕುಮ, ಗಿಫ್ಟ್​ಗಳನ್ನ ಕೊಡುತ್ತಿದ್ದಳು. ಒಡವೆಗಳನ್ನ ಗಿರವಿ ಇಡಿಸಿ ಹಣ ಪಡೆದಿದ್ದ ಹೇಮಾಲತಾ, ಕೆಲವರಿಗೆ ಮೈಕ್ರೋ ಫೈನಾನ್ಸ್​ಗಳಲ್ಲಿ ಸಾಲ ಕೊಡಿಸಿ ಗುಳುಂ ಮಾಡಿದ್ದಾಳೆ.

ಮೈಸೂರು: 70 ಲಕ್ಷ ವಂಚಿಸಿ ಪರಾರಿಯಾಗಿದ್ದ ಮಹಿಳೆ ಪೊಲೀಸರ ವಶಕ್ಕೆ
ವಂಚಿಸಿ ಪರಾರಿಯಾಗಿದ್ದ ಹೇಮಾಲತಾ
TV9 Web
| Edited By: |

Updated on: Jul 14, 2021 | 8:56 AM

Share

ಮೈಸೂರು: ಮಹಿಳೆಯರಿಗೆ ವಂಚಿಸಿ ಪರಾರಿಯಾಗಿದ್ದ ಹೇಮಾಲತಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉದಯಗಿರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಹೇಮಾಲತಾ ಪೂಜೆ ಮತ್ತು ಬಾಗಿನದ ಹೆಸರಿನಲ್ಲಿ ಮಹಿಳೆಯರ ವಿಶ್ವಾಸ ಗಳಿಸಿ ವಂಚಿಸುತ್ತಿದ್ದಳು ಎಂಬ ಆರೋಪ ಕೇಳಿಬಂದಿದ್ದು, ಸುಮಾರು 70 ಲಕ್ಷ ರೂ. ಹಣವನ್ನು ವಂಚಿಸಿ ಪರಾರಿಯಾಗಿದ್ದಳು. 5 ವರ್ಷಗಳ ಹಿಂದೆ ಸಾತಗಳ್ಳಿಯ ಸಾಯಿಬಾಬಾ ದೇಗುಲದ ಬಳಿ ಬಾಡಿಗೆ ಮನೆಯಲ್ಲಿ ಈಕೆ ವಾಸವಿದ್ದಳು.

ಹೋಮ, ವಿಶೇಷ ಪೂಜೆ ಮಾಡುತ್ತಾ ತನ್ನ ಅಕ್ಕಪಕ್ಕದಲ್ಲಿರುವ ಮಹಿಳೆಯರ ವಿಶ್ವಾಸ ಗಳಿಸಿದ್ದಳು. ಅಲ್ಲದೇ ದೇವರ ಹೆಸರಿನಲ್ಲಿ ಬಾಗಿನ, ಅರಿಶಿನ ಕುಂಕುಮ, ಗಿಫ್ಟ್​ಗಳನ್ನ ಕೊಡುತ್ತಿದ್ದಳು. ಒಡವೆಗಳನ್ನ ಗಿರವಿ ಇಡಿಸಿ ಹಣ ಪಡೆದಿದ್ದ ಹೇಮಾಲತಾ, ಕೆಲವರಿಗೆ ಮೈಕ್ರೋ ಫೈನಾನ್ಸ್​ಗಳಲ್ಲಿ ಸಾಲ ಕೊಡಿಸಿ ಗುಳುಂ ಮಾಡಿದ್ದಾಳೆ. 15ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಈಕೆಯ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶ್ವ ಸಂಸ್ಥೆಯ ಕಾರ್ಮಿಕ ಕಾರ್ಡ್ ನೀಡೋದಾಗಿ ಮಹಿಳೆಯರಿಗೆ ವಂಚನೆ ಹಳ್ಳಿಗಾಡಿನ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ವಂಚಿಸುತ್ತಿದ್ದ ವ್ಯಕ್ತಿಗೆ ಗದಗದ ಮಸಾರಿ ಪ್ರದೇಶದಲ್ಲಿ ಜನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಜುಲೈ 10ಕ್ಕೆ ನಡೆದಿದೆ. ಕಾರ್ಮಿಕ ಕಾರ್ಡ್ ಮಾಡಿಸಿದರೆ ವಿಶ್ವ ಸಂಸ್ಥೆಯಿಂದ ಹಣ ಬರುತ್ತೆ. ಅಂತಹ ಕಾರ್ಮಿಕ ಕಾರ್ಡ್ ತಾನು ನೀಡೋದಾಗಿ ಮಹಿಳೆಯರಿಗೆ ಆ ವ್ಯಕ್ತಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಕುಮಾರ್ ಎಂಬ ವ್ಯಕ್ತಿಗೆ ಸ್ಥಳೀಯರು ಸೇರಿಕೊಂಡು ಬಾರಿಸಿದ್ದಾರೆ. ಚಿತ್ರದುರ್ಗ ಮೂಲದ ಡೆವಲೆಪ್ ಲೈವ್ಲಿವುಡ್ ಫರ್ಮ್ ಸಂಸ್ಥೆಯ ಮೂಲಕ ಸ್ವರದ ಎಂಟರ್ಪ್ರೈಸ್ ರಚಿಸಿಕೊಂಡು ಹಳ್ಳಿಯ ಮಹಿಳೆಯರಿಗೆ ಕುಮಾರ್ ವಂಚಿಸುತ್ತಿದ್ದ ಎನ್ನಲಾಗಿದೆ.

ಇದನ್ನೂ ಓದಿ

ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಜನರ ವಿರುದ್ಧ ಎಫ್‌ಐಆರ್

ತುಂಡು ಭೂಮಿಗಾಗಿ ಶ್ಯೂರಿಟಿ ಹಾಕಿದ್ದವನನ್ನೇ ಕೊಂದ ಸ್ನೇಹಿತರು, ಐವರು ಆರೋಪಿಗಳು ಅರೆಸ್ಟ್

(woman was arrested by police for cheating on women in mysuru)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ