AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನನೊಂದ ಯುವತಿಯಿಂದ ಆತ್ಮಹತ್ಯೆಗೆ ಯತ್ನ, 17ನೇ ಮಹಡಿಯಿಂದ ಬೀಳ್ತಿದ್ದಾಕೆಯ ರಕ್ಷಣೆ

ಆನೇಕಲ್: ಮನನೊಂದು 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಬಚಾವ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಏಪ್ರಿಲ್ 24ರಂದು ಶುಕ್ರವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಶುಭ ಎಂಬ ಯುವತಿ ತಾಯಿಯ ವರ್ಷದ ಕಾರ್ಯಕ್ಕಾಗಿ ಲಾಕ್​ಡೌನ್​ಗೂ ಮುನ್ನ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್‌ ಸನ್‌ರೈಸ್ ಅಪಾರ್ಟೆಂಟ್​ನ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ಲಾಕ್​ಡೌನ್ ಆದ ಹಿನ್ನೆಲೆಯಲ್ಲಿ ತನ್ನ ಊರಿಗೂ ಹೋಗಲಾರದೆ ಮನನೊಂದಿದ್ದಾಳೆ. ಅಲ್ಲದೆ ಕೆಲ ವರ್ಷಗಳ […]

ಮನನೊಂದ ಯುವತಿಯಿಂದ ಆತ್ಮಹತ್ಯೆಗೆ ಯತ್ನ, 17ನೇ ಮಹಡಿಯಿಂದ ಬೀಳ್ತಿದ್ದಾಕೆಯ ರಕ್ಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 26, 2020 | 7:45 AM

Share

ಆನೇಕಲ್: ಮನನೊಂದು 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ಬಚಾವ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಬಳಿ ನಡೆದಿದೆ. ಏಪ್ರಿಲ್ 24ರಂದು ಶುಕ್ರವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೆಹಲಿ ಮೂಲದ ಶುಭ ಎಂಬ ಯುವತಿ ತಾಯಿಯ ವರ್ಷದ ಕಾರ್ಯಕ್ಕಾಗಿ ಲಾಕ್​ಡೌನ್​ಗೂ ಮುನ್ನ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್‌ ಸನ್‌ರೈಸ್ ಅಪಾರ್ಟೆಂಟ್​ನ ತನ್ನ ಸಂಬಂಧಿಕರ ಮನೆಗೆ ಬಂದಿದ್ದಳು. ಲಾಕ್​ಡೌನ್ ಆದ ಹಿನ್ನೆಲೆಯಲ್ಲಿ ತನ್ನ ಊರಿಗೂ ಹೋಗಲಾರದೆ ಮನನೊಂದಿದ್ದಾಳೆ. ಅಲ್ಲದೆ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದ ತಾಯಿಯ ನೆನಪು ಆಕೆಗೆ ಕಾಡುತ್ತಿತ್ತು. ಹೀಗಾಗಿ ಮೆಂಟಲಿ ಅಪ್​ಸೆಟ್‌ ಆಗಿದ್ದವಳು ಸಾಯಲು ಮುಂದಾಗಿದ್ದಾಳೆ.

ಅಪಾರ್ಟ್ಮೆಂಟ್​ನ 17ನೇ ಮಹಡಿಗೆ ಹೋಗಿದ್ದಾಳೆ. ನಂತರ ಭಯವಾಗಿ ಕಿಟಕಿಯ ಕೆಳಭಾಗದ ಛಾವಣಿ ಮೇಲೆ ಹೆದರಿ ಕುಳಿತುಕೊಂಡಿದ್ದಾರೆ. ಇದನ್ನು ಗಮನಿಸಿದ ಅಪಾರ್ಟ್ಮೆಂಟ್​ನ ಅಸೋಸಿಯೇಷನ್ ವ್ಯಕ್ತಿ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿ ತಾಳ್ಮೆಯಿಂದ ಯುವತಿಗೆ ಬುದ್ಧಿ ಹೇಳಿ ರಕ್ಷಿಸಿದ್ದಾರೆ. ಯುವತಿಯನ್ನು ರಕ್ಷಿಸುವಲ್ಲಿ‌ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದು, ರಕ್ಷಣಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. https://www.facebook.com/Tv9Kannada/videos/237478963987336/

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!