AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣೂರು ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಕಮಿಷನರ್​ಗೆ ದೂರು ನೀಡಿದ ಮಹಿಳೆಯರು

ಕಮ್ಮನಹಳ್ಳಿಯ ನಿವಾಸಿಗಳಾಗಿರುವ ವಾಣಿ, ವಲರಾಮತಿ ಎಂಬ ಮಹಿಳೆಯರು ಈ ಬಗ್ಗೆ ಕಮಿಷನರ್ಗೆ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 26ರಂದು ನಿವೇಶನದ ವಿಚಾರಕ್ಕೆ ದುಷ್ಕರ್ಮಿಗಳು ಗಲಾಟೆ ಮಾಡಿದ್ದರು. 40ಕ್ಕೂ ಹೆಚ್ಚು ಜನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು.

ಹೆಣ್ಣೂರು ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಕಮಿಷನರ್​ಗೆ ದೂರು ನೀಡಿದ ಮಹಿಳೆಯರು
ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Jul 08, 2021 | 8:13 AM

Share

ಬೆಂಗಳೂರು: ಹೆಣ್ಣೂರು ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ಮಹಿಳೆಯರು ದೂರು ಸಲ್ಲಿಸಿದ್ದಾರೆ. ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ಹೆಣ್ಣೂರು ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದ್ರೆ ಇನ್ಸ್ಪೆಕ್ಟರ್ ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕ್ರಮಕ್ಕೆ ಮಹಿಳೆಯರು ಮನವಿ ಮಾಡಿದ್ದಾರೆ.

ಕಮ್ಮನಹಳ್ಳಿಯ ನಿವಾಸಿಗಳಾಗಿರುವ ವಾಣಿ, ವಲರಾಮತಿ ಎಂಬ ಮಹಿಳೆಯರು ಈ ಬಗ್ಗೆ ಕಮಿಷನರ್ಗೆ ದೂರು ಸಲ್ಲಿಸಿದ್ದಾರೆ. ಏಪ್ರಿಲ್ 26ರಂದು ನಿವೇಶನದ ವಿಚಾರಕ್ಕೆ ದುಷ್ಕರ್ಮಿಗಳು ಗಲಾಟೆ ಮಾಡಿದ್ದರು. 40ಕ್ಕೂ ಹೆಚ್ಚು ಜನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು.

ಸ್ಥಳೀಯ ಬಿಜೆಪಿ ನಾಯಕ ಕೃಷ್ಣ ಆನಂದ್, ಸರಿತಾ ಬಾಯಿ, ಪುಷ್ಪಾ, ಮಹೇಂದ್ರ ಸೇರಿದಂತೆ 40 ಜನ ಹಲ್ಲೆ ಮಾಡಿದ್ದರು. ಜೊತೆಗೆ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ ಹೆಣ್ಣೂರು ಪೊಲೀಸ್ ಠಾಣೆಗೆ ಮಹಿಳೆಯರು ದೂರು ನೀಡಿದ್ದರು. ಆದರೆ, ಇದುವರೆಗೂ ಕ್ರಮಕೈಗೊಂಡಿಲ್ಲ. ಇನ್ಸ್ಪೆಕ್ಟರ್ ವಸಂತ್‌ ಕುಮಾರ್ FIR ಸಹ ದಾಖಲಿಸಿಲ್ಲ. ಆರೋಪಿಗಳೊಂದಿಗೆ ಪಿಐ ಶಾಮೀಲಾಗಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ.

ಇನ್ನು ಇನ್ಸ್ಪೆಕ್ಟರ್ ಮತ್ತು ಬಿಜೆಪಿ ನಾಯಕನ ವಿರುದ್ಧ ದೂರು ನೀಡಿದಕ್ಕಾಗಿ ಅವರು ಸಮಸ್ಯೆ ತರಬಹುದು ಹೀಗಾಗಿ ತಮಗೆ ರಕ್ಷಣೆ ನೀಡಬೇಕೆಂದು ಕಮಲ್‌ ಪಂತ್‌ಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Virbhadra Singh: ಹಿಮಾಚಲ ಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್‌ನ ಹಿರಿಯ ನಾಯಕ ವೀರಭದ್ರ ಸಿಂಗ್ ನಿಧನ

Published On - 8:03 am, Thu, 8 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!