AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ದುರುಪಯೋಗ: ಕಂಡಕ್ಟರ್​​ಗಳ ಮೇಲೆ ಕಠಿಣ ಕ್ರಮಕ್ಕೆ ಮುಂದಾದ ಸಾರಿಗೆ ಇಲಾಖೆ

ಮಹಿಳೆಯರ ಅನುಕೂಲಕ್ಕೆಂದು ಸರ್ಕಾರ ಹಮ್ಮಿಕೊಂಡ ಶಕ್ತಿ ಯೋಜನೆ ಈಗ ನಿರ್ವಾಹಕರಿಂದ ದುರುಪಯೋಗವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಹಾಗಾದರೆ, ಕಂಡಕ್ಟರ್​​ಗಳು ಏನು ಮಾಡುತ್ತಾರೆ? ಹೆಚ್ಚು ಟಿಕೆಟ್ ನೀಡಿ ತಾವೇ ಹಣ ಗುಳುಂ ಮಾಡುತ್ತಿದ್ದಾರಾ? ಈಗ ಸರ್ಕಾರ ಏನು ಕ್ರಮಕ್ಕೆ ಮುಂದಾಗಿದೆ? ಉತ್ತರ ಇಲ್ಲಿದೆ.

ಶಕ್ತಿ ಯೋಜನೆ ದುರುಪಯೋಗ: ಕಂಡಕ್ಟರ್​​ಗಳ ಮೇಲೆ ಕಠಿಣ ಕ್ರಮಕ್ಕೆ ಮುಂದಾದ ಸಾರಿಗೆ ಇಲಾಖೆ
ಶಕ್ತಿ ಯೋಜನೆ ದುರುಪಯೋಗ (ಪ್ರಾತಿನಿಧಿಕ ಚಿತ್ರ)
ಕಿರಣ ಹೆಚ್​. ವಿ.
| Edited By: |

Updated on: Jun 27, 2024 | 9:02 AM

Share

ಬೆಂಗಳೂರು, ಜೂನ್ 27: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ, ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಒದಗಿಸಿದ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಆರೋಪ ಕೇಳಿಬಂದಿದೆ. ಮಹಿಳಾ ಪ್ರಯಾಣಿಕರು ಇಲ್ಲದೇ ಇದ್ದರೂ ಟಿಕೆಟ್ ಬರೆಯುವುದು, ಒಂದಕ್ಕಿಂತ ಹೆಚ್ಚು ಟಿಕೆಟ್ ನೀಡಿ ದುಡ್ಡು ಮಾಡುವ ಕೃತ್ಯ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಇದೀಗ ಅಂಥ ನಿರ್ವಾಹಕರ ವಿರುದ್ಧ ಕಠಿಣ ಕ್ರಮಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

ಬಸ್​ನಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಇಲ್ಲದಿದ್ದರೂ ಹೆಚ್ಚು ಟಿಕೆಟ್ ವಿತರಣೆಯಾಗುತ್ತಿರುವ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೆಎಸ್​ಆರ್​ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳು ಎಚ್ಚೆತ್ತುಕೊಂಡಿದ್ದು, ಇದೀಗ ನಿರ್ವಾಹಕರಿಗೆ ಎಚ್ಚರಿಕೆ ನೀಡಿವೆ. ಜತೆಗೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೆಕೆಆರ್​ಟಿಸಿ ಈಗಾಗಲೇ ಆದೇಶ ಹೊರಡಿಸಿದೆ.

ಮಹಿಳೆಯರಿಗೆ ಉಚಿತ ಟಿಕೆಟ್ ನೀಡದಿದ್ದರೆ ಕಂಡಕ್ಟರ್​​ಗಳು ದಂಡ ಕಟ್ಟಬೇಕಾಗುತ್ತದೆ. ತಪ್ಪಿತಸ್ಥ ಕಂಡಕ್ಟರ್​​​ಗಳಿಗೆ ಯಾವ ರೀತಿ ಶಿಕ್ಷೆ ವಿಧಿಸಬೇಕು ಎಂಬ ಕುರಿತು ಕೆಕೆಆರ್​​ಟಿಸಿ ಈಗಾಗಲೇ ಆದೇಶ ಹೊರಡಿಸಿದೆ.

ಕಂಡಕ್ಟರ್​ಗಳಿಗೆ ಶಿಕ್ಷೆ ಏನು?

  • ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ನಿಯಮ 22 ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದು.
  • 2 ಕ್ಕಿಂತ ಹೆಚ್ಚಿನ ಉಚಿತ ಮಹಿಳಾ ಟಿಕೆಟ್ ಪ್ರಕರಣದಲ್ಲಿ ಸೋರಿಕೆ ಮೊತ್ತದ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು.
  • ಮಹಿಳಾ ಉಚಿತ ಟಿಕೆಟ್ ವಿತರಿಸದೇ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದು.
  • 2 ಕ್ಕಿಂತ ಹೆಚ್ಚಿನ ಟಿಕೆಟ್ ನೀಡದೇ ಇರುವ ಪಕ್ಷದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು.
  • ಇಂತಹ ಪ್ರಕರಣದಲ್ಲಿ ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ, ನ್ಯೂನತೆಗಳ ವಿವರಗಳೊಂದಿಗೆ ನಿರ್ವಾಹಕರಿಗೆ ಮೆಮೋ ನೀಡಿ ಕ್ರಮಕೈಗೊಳ್ಳುವುದು.

ಇದನ್ನೂ ಓದಿ: ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಶುಭ ಸುದ್ದಿ; ಬರಲಿವೆ ಹೆಚ್ಚುವರಿ ಬಸ್

ಶಕ್ತಿ ಯೋಜನೆ ಜಾರಿಯ ನಂತರ ರಾಜ್ಯದ ಸಾರಿಗೆ ನಿಗಮಗಳ ಬಸ್​ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುವ ಬಗ್ಗೆ ವರದಿಯಾಗಿತ್ತು. ನಂತರದಲ್ಲಿ ಶಕ್ತಿ ಯೋಜನೆ ದುರುಪಯೋಗವಾಗುತ್ತಿರುವ ಬಗ್ಗೆಯೂ ಆರೋಪಗಳು ಕೇಳಿಬಂದವು. ಇದರ ಬೆನ್ನಲ್ಲೇ ನಿಗಮಗಳು ಎಚ್ಚೆತ್ತುಕೊಂಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು