AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಆರಂಭವಾಗಲಿ ಮಡಿಲು ಕಿಟ್ ಯೋಜನೆ: ಬೀದರ್ ಮಹಿಳೆಯರ ಒತ್ತಾಯ

ಮಡಿಲು ಕಿಟ್ ಯೋಜನೆ ಸ್ಥಗಿತಗೊಂಡಿರುವುದರಿಂದ ಹಸುಗೂಸಿನ ಆರೈಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಹೆಣಗಾಡಬೇಕಾದ ಸ್ಥಿತಿ ಬಡವರ್ಗದ ಮಹಿಳೆಯರಿಗೆ ಎದುರಾಗಿದೆ.

ಮತ್ತೆ ಆರಂಭವಾಗಲಿ ಮಡಿಲು ಕಿಟ್ ಯೋಜನೆ: ಬೀದರ್ ಮಹಿಳೆಯರ ಒತ್ತಾಯ
ಮಡಿಲು ಕಿಟ್ (ಸಂಗ್ರಹ ಚಿತ್ರ)
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:Jan 15, 2021 | 3:21 PM

Share

ಬೀದರ್: ಬಾಣಂತಿಯರಿಗೆ ಅನುಕೂಲವಾಗಲೆಂದು ಜಾರಿಗೊಳಿಲಾಗಿದ್ದ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಮಡಿಲು ಕಿಟ್ ಯೋಜನೆ ಸ್ಥಗಿತಗೊಂಡಿದೆ. ಹಾಗಾಗಿ ಹಸುಗೂಸಿನ ಆರೈಕೆಗೆ ಬೇಕಾದ ವಸ್ತುಗಳನ್ನ ಖರೀದಿಸಲು ಹೆಣಗಾಡಬೇಕಾದ ಸ್ಥಿತಿ ಬಡವರ್ಗದ ಮಹಿಳೆಯರಿಗೆ ಎದುರಾಗಿದೆ. ಅವರಿಗೆ ಅಕ್ಷಯ ಪಾತ್ರೆಯಂತಿದ್ದ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಮತ್ತೆ ಆರಂಭವಾಗಬೇಕು ಎಂದು ಬೀದರ್ ಜಿಲ್ಲೆಯ ಹೆಣ್ಣುಮಕ್ಕಳು ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಬಡ ಬಾಣಂತಿಯರಿಗೆ ಅಕ್ಷಯ ಪಾತ್ರೆಯಂತಿದ್ದ ಮಡಿಲು ಕಿಟ್ ಯೋಜನೆ ರಾಜ್ಯಾದ್ಯಾಂತ ಸ್ಥಗಿತವಾಗಿದ್ದು ಅದಕ್ಕೆ ಬೀದರ್ ಜಿಲ್ಲೆಯೂ ಹೊರತಾಗಿಲ್ಲ. ಪ್ರತಿ ವರ್ಷ ಜಿಲ್ಲೆಯಲ್ಲಿ ಸರಾಸರಿ 20 ಸಾವಿರಕ್ಕೂ ಹೆಚ್ಚು ಹೆರಿಗೆಯಾಗುತ್ತವೆ. ತಾಯಿ ಮತ್ತು ಮಗುವಿಗೆ ಅಗತ್ಯವಿರುವ 19 ವಸ್ತುಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿತ್ತು. ಸರಕಾರ ಮಡಿಲು ಕಿಟ್ ಯೋಜನೆಗೆ ಎರಡು ವರ್ಷದಿಂದ ಬ್ರೇಕ್ ಹಾಕಿರುವುದರಿಂದ ಮಹಿಳೆಯರು ತೀವ್ರ ಕಷ್ಟಪಡುವಂತಾಗಿದೆ.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬದ ಗರ್ಭಿಣಿಯರು ಸರಕಾರಿ ಅಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡಾಗ ಮಡಿಲು ಕಿಟ್ ವಿತರಣೆ ಮಾಡಲಾಗುತ್ತಿತ್ತು. ಕಾಟನ್ ಡಯಾಪರ್, ಸ್ಯಾನಿಟರಿ ನ್ಯಾಪ್ಕಿನ್, ಎಣ್ಣೆ, ಸೋಪು, ಬೆಲ್ಟ್ ಹಾಗೂ ಬೆಡ್ ಸ್ಪ್ರೆಡ್ ಮೊದಲಾದವುಗಳನ್ನು ಕಿಟ್​ ಒಳಗೊಂಡಿರುತ್ತಿತ್ತು. ಅನುದಾನ ಕೊರತೆಯ ನೆಪವೊಡ್ಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಬಡವರು ಅನಿವಾರ್ಯವಾಗಿ ನೂರಾರು ರೂಪಾಯಿ ಖರ್ಚುಮಾಡಿ ಮಗುವಿಗೆ ಬೇಕಾದ ಸೋಪು, ಶಾಂಪು, ಎಣ್ಣೆ, ಡಯಾಪರ್​ಗಳನ್ನು ಕೊಳ್ಳಬೇಕಾಗಿದೆ.

ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಯೋಗದಲ್ಲಿ 2007ರಲ್ಲಿ ಮಡಿಲು ಕಿಟ್ ವಿತರಣೆ ಯೋಜನೆ ಆರಂಭಿಸಲಾಗಿತ್ತು. ಯೋಜನೆಯ ಲಾಭವನ್ನು ಸುಮಾರು ಒಂದು ದಶಕದ ಕಾಲ ರಾಜ್ಯಾದ್ಯಂತ್ಯ ಸಾವಿರಾರು ಬಾಣಂತಿಯರು ಪಡೆದುಕೊಂಡಿದ್ದರು. 2007 ರಿಂದ 2013 ರವೆರೆಗೆ ರಾಜ್ಯ ಸರಕಾರ ಅನುದಾನವನ್ನ ನೀಡಿದ್ದರೆ, 2013-2017 ರವರೆಗೆ ರಾಷ್ಟ್ರೀಯ ಆರೋಗ್ಯ ಮಿಷನ್‌ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಎರಡು ವರ್ಷದಿಂದ ರಾಜ್ಯ ಸರಕಾರ, ರಾಷ್ಟ್ರೀಯ ಆರೋಗ್ಯ ಮಿಷನ್‌ ಅನುದಾನ ಬಿಡುಗಡೆ ಮಾಡದೇ ಇರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಯೋಜನೆಗೆ ಬ್ರೇಕ್ ಹಾಕಿದೆ.

ಮಡಿಲು ಕಿಟ್ ಯೋಜನೆ ಬಗ್ಗೆ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ಶ್ಲಾಘನೆ ವ್ಯಕ್ತಪಡಿಸಿತ್ತು, ಬಾಣಂತಿಯರೂ ಸಂತಸದಿದ್ದರು. ಆದರೆ ಅನುದಾನದ ಕೊರತೆಯ ನೆಪವೊಡ್ಡಿ ಮಡಿಲು ಕಿಟ್ ವಿತರಣೆಗೆ ಸರಕಾರ ಬ್ರೇಕ್ ಹಾಕಿದೆ. ಸ್ಥಗಿತವಾಗಿರುವ ಮಡಿಲು ಕಿಟ್ ಯೋಜನೆಯನ್ನು ಮತ್ತೆ ಆರಂಭಿಸಿ ಬಣ ಬಾಣಂತಿಯರಿಗೆ ಸವಲತ್ತು ಮಾಡಿಕೊಡಲಿ ಅಂತ ಜಿಲ್ಲೆಯ ನೂರಾರು ಮಹಿಳೆಯರು ಅಂಗಲಾಚುತ್ತಿದ್ದಾರೆ.

ಬೀದರ್: ಪಂಚತಾರಾ ವಿಶ್ವ ವಿದ್ಯಾಲಯದಲ್ಲಿ ಸಿಬ್ಬಂದಿ ಕೊರತೆ; ಬರೋಬ್ಬರಿ 1269 ಹುದ್ದೆಗಳು ಖಾಲಿ!

Published On - 3:20 pm, Fri, 15 January 21

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!