AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀರು ಬೇಡ ನೀರು ಬೇಕು: ಮದ್ಯ ನಿಷೇಧ, ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ

ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ತೆರಯಲು ಚಿಂತಿಸುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಮತ್ತು ಸಂಪೂರ್ಣವಾಗಿ ಮದ್ಯವನ್ನು ನಿಷೇಧಿಸುವಂತೆ ರಾಜ್ಯಾದ್ಯಂತ ಮಹಿಳೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಯಚೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಬಂದ ಸಚಿವರಿಗೆ ಮಹಿಳೆಯರು ಘೇರಾವ್ ಹಾಕುವ ಯತ್ನವೂ ನಡೆಯಿತು.​

ಬೀರು ಬೇಡ ನೀರು ಬೇಕು: ಮದ್ಯ ನಿಷೇಧ, ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ವಿರೋಧ, ಮಹಿಳೆಯರ ಪ್ರತಿಭಟನೆ
ಮಹಿಳೆಯರ ಪ್ರತಿಭಟನೆ
ರವಿ ಹೆಚ್ ಮೂಕಿ, ಕಲಘಟಗಿ
| Edited By: ವಿವೇಕ ಬಿರಾದಾರ|

Updated on:Oct 02, 2023 | 12:41 PM

Share

ಬಾಗಲಕೋಟೆ ಅ.02: ರಾಜ್ಯದಲ್ಲಿ ಹೊಸದಾಗಿ ಒಂದು ಸಾವಿರ ಮದ್ಯದಂಗಡಿ (Liquor store) ತೆರಯಲು ಅಬಕಾರಿ ಇಲಾಖೆ (Department of Excise) ಸಿದ್ದತೆ ನಡೆಸಿದ ಬೆನ್ನಲ್ಲೇ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ (RB Timmapur) ತವರು ಜಿಲ್ಲೆಯಾದ ಬಾಗಲಕೋಟೆಯಲ್ಲಿ ಮದ್ಯಪಾನ ನಿಷೇಧಿಸುವಂತೆ (Alcohol Ban) ಮಹಿಳೆಯರು ಬೀದಿಗೆ ಇಳಿದಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂದೆ ಕಳೆದ ಎರಡು ದಿನದಿಂದ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಭಾನುವಾರ ಇಡೀ ದಿನ ಮತ್ತು ಅಹೋರಾತ್ರಿ ಧರಣಿ ನಡೆಸಿದರು. ಸೋಮಾವರ ಕೂಡ ಪ್ರತಿಭಟನೆ ಮುಂದುವರೆದಿದ್ದು, ಮದ್ಯಪಾನ ನಿಷೇಧಿಸುವಂತೆ ಒತ್ತಾಯಿಸುತ್ತಿದ್ದಾರೆ.

“ಬೀರು ಬೇಡ ನೀರು ಬೇಕು” “ಸಾರಾಯಿ ಬೇಡ ಶಿಕ್ಷಣ ಬೇಕು” ಎಂದು ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಕಾಂಗ್ರೆಸ್​ ಶಾಸಕ ಹೆಚ್ ವೈ ಮೇಟಿ, ಜಿಲ್ಲಾಧಿಕಾರಿ ಕೆ.ಎಮ್​. ಜಾನಕಿ ಭೇಟಿ ನೀಡಿದರು. ಈ ವೇಳೆ ಮಹಿಳೆಯರು ಶಾಸಕ ಹಾಗೂ ಜಿಲ್ಲಾಧಿಕಾರಿ ಎದುರು “ಸಾರಾಯಿ ಕುಡಿದು ನಮ್ಮ ಗಂಡ, ಮಕ್ಕಳು ಮೃತರಾಗಿತ್ತಿದ್ದಾರೆ. ನಮ್ಮ ಕುಟುಂಬಗಳು ಬೀದಿಗೆ ಬರುತ್ತಿವೆ. ಆದ್ದರಿಂದ ಸಾರಾಯಿ ಬಂದ್ ಮಾಡಿಸಿ. ಗ್ರಾಮೀಣ ಭಾಗದಲ್ಲಿ ಆಕ್ರಮವಾಗಿ ಎಲ್ಲೆಂದರಲ್ಲಿ ಸಾರಾಯಿ ಮಾರಾಟ ಮಾಡಲಾಗುತ್ತಿದೆ. ಅದನ್ನು ತಡೆಯಿರಿ ಎಂದು ಕಣ್ಣೀರು ಹಾಕಿದರು.

ಇದನ್ನೂ ಓದಿ: ದೇಶದ ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಬೆಲೆ ಹೆಚ್ಚು: ವರದಿ

ಬೆಳಗಾವಿ: ಇದೇರೀತಿಯಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಮಹಿಳೆಯರು ಸಾರಾಯಿ ಬಂದ್​ ಮಾಡಿಸುವಂತೆ ಪ್ರತಿಭಟನೆ ಮಾಡಿದರು. ಮದ್ಯನಿಷೇಧ ಆಂದೋಲನ ಪ್ರಗತಿಪರ ಸಂಘಟನೆ ಒಕ್ಕೂಟ ಧರಣಿ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿತು.

ಅಕ್ರಮ ಮದ್ಯ ಮಾರಾಟ ತಡೆಯಬೇಕು. ಅಕ್ರಮ‌ ಮದ್ಯ ಮಾರಾಟಗಾರರ ಮೇಲೆ ಕ್ರಮಕ್ಕೆ ಸರ್ಕಾರ ಮುಂದಾಗಬೇಕು. ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಹೊಸದಾಗಿ ಒಂದು ಸಾವಿರ ಮದ್ಯದಂಗಡಿ ಪರವಾನಿಗೆ ಪ್ರಸ್ತಾವವನ್ನು ಹಿಂಪಡಯಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿತು.

ರಾಯಚೂರು: ಹೊಸ ಮದ್ಯದ ಅಂಗಡಿಗಳನ್ನು ತೆರಯವ ಸರ್ಕಾರದ ಕ್ರಮವನ್ನು ವಿರೋಧಿಸಿ, ನಗರದಲ್ಲಿ ಗಾಂಧಿ ಜಯಂತಿ ಆಚರಣೆ ವೇಳೆ ಮಹಿಳೆಯರು ಪ್ರತಿಭಟನೆ ನಡೆಸಿದರು. ರಾಯಚೂರು ನಗರದ ಮಹಾತ್ಮ ಗಾಂಧಿ ಸ್ಟೆಡಿಯಂ ಬಳಿ ಭಾನುವಾರದಿಂದ ಮಹಿಳೆಯರು ಆಹೋರಾತ್ರಿ ಧರಣಿಗೆ ಕುಳಿತಿದ್ದಾರೆ. ಇಂದು ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಗಾಂಧಿ ಜಯಂತಿ ಆಚರಣೆ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿನ ಮಹಾತ್ಮ ಗಾಂಧಿಜಿ ಮೂರ್ತಿಗೆ ಮಾಲಾರ್ಪಣೆ ಮಾಡಲು ಬಂದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಎಸ್ ಬೋಸರಾಜ್ ಅವರಿಗೆ ಮಹಿಳೆಯರು ಘೇರಾವ್​​ ಹಾಕಲು ಯತ್ನಿಸಿದರು. ಅಲ್ಲದೆ ಸಚಿವ ಬೋಸರಾಜ್ ಗಾಂಧಿ ಪ್ರತಿಮೆಗೆ ಹಾರ ಹಾಕುವುದಕ್ಕೂ ಮುನ್ನ, ಪ್ರತಿಭಟನಾಕಾರರು ಹಾರ ಹಾಕಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನೆ ಕಾವನ್ನು ತಿಳಿಸಿಗೊಳಿಸಿದರು. ಕೊನೆಗೆ ಎನ್ಎಸ್ ಬೋಸರಾಜ್ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:41 pm, Mon, 2 October 23

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​