AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರೇ ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡ್ಕೊಳ್ಳಿ; ಇಂದು, ನಾಳೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಳಗಾವಿಯಲ್ಲಿ ‘ಟಿವಿ9’ ಜೊತೆ ಮಾತನಾಡಿದ ಅವರು, ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಯಾವಾಗ ವರ್ಗಾವಣೆಯಾಗಲಿದೆ ಎಂದು ತಿಳಿಸಿದ್ದಾರೆ. ಆ ಮಾಹಿತಿ ಇಲ್ಲಿದೆ.

ಮಹಿಳೆಯರೇ ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡ್ಕೊಳ್ಳಿ; ಇಂದು, ನಾಳೆ ಜಮೆಯಾಗಲಿದೆ ಗೃಹಲಕ್ಷ್ಮಿ ಹಣ
ಗೃಹಲಕ್ಷ್ಮಿ ಯೋಜನೆ
Sahadev Mane
| Edited By: |

Updated on: Jun 29, 2024 | 10:14 AM

Share

ಬೆಳಗಾವಿ, ಜೂನ್ 29: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ, ಪ್ರತಿ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡುವ ಗೃಹಲಕ್ಷ್ಮಿ ಯೋಜನೆ ಬಗ್ಗೆ ಕಳೆದ ಕೆಲವು ದಿನಗಳಿಂದ ಭಾರಿ ಚರ್ಚೆಯಾಗುತ್ತಿತ್ತು. ಯೋಜನೆಯ ಹಣ ಖಾತೆಗಳಿಗೆ ಬರುತ್ತಿಲ್ಲ ಎಂದು ಮಹಿಳೆಯರು ಅಲವತ್ತುಕೊಳ್ಳುತ್ತಿದ್ದರು. ಆದರೆ, ಇದೀಗ ಆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ‘ಟಿವಿ9’ಗೆ ಹೇಳಿಕೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ನಾಳೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ.

ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ ನಲವತ್ತು ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು ಎಂದು ಟೀಕಿಸಿದರು.

ಎರಡು ಸಾವಿರ ರೂಪಾಯಿ ಕೊಟ್ಟು ನಾಲ್ಕು ಸಾವಿರ ರೂಪಾಯಿ ಕಸಿದುಕೊಳ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿ, ಬಿಜೆಪಿಯವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಪೆಟ್ರೋಲ್ ದರ ಏರಿಕೆ ಆಗಿದೆ ಎಂದು ಹೇಳಿದ್ದಾರೆ. ಇದೇ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಪೆಟ್ರೋಲ್​ ದರವನ್ನು ನೂರು ರೂಪಾಯಿ ತಗೊಂಡು ಹೋಗಿದ್ದರು. ನಲವತ್ತು ರೂಪಾಯಿ ಪೆಟ್ರೋಲ್ ದರ ಏರಿಸಿದ್ದ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಹೋಗುತ್ತದೆ ಎಂದು ಟೀಕಿಸಿದರು.

ಎಲ್ಲ ಬಡವರಿಗೆ ಒಂದು ವರ್ಷಕ್ಕೆ ಅರವತ್ತು ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇವೆ. ಮೂರು ರೂಪಾಯಿ ಹೆಚ್ಚಾದರೆ ಇಷ್ಟು ಮಾತನಾಡುತ್ತಿದ್ದಾರೆ, ನಾಚಿಕೆ ಆಗಲ್ವಾ ಅವರಿಗೆ. 400 ರೂಪಾಯಿ ಇದ್ದ ಸಿಲಿಂಡರ್ 1,100 ರೂಪಾಯಿ ಆದಾಗ ಮಾತಾಡಲಿಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ: ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಮೇ ತಿಂಗಳಲ್ಲಿ ಎಲ್ಲರ ಅಕೌಂಟ್‌ಗೆ ಗೃಹಲಕ್ಷ್ಮಿ ಹಣ ಹೋಗಿದೆ. ಕಾಂಗ್ರೆಸ್ ಪಕ್ಷದ ಸರ್ಕಾರ ಐದು ವರ್ಷ ಕಾರ್ಯಭಾರ ಮಾಡುತ್ತದೆ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ. ಗೃಹಲಕ್ಷ್ಮಿ ಮುಂದುವರೆಯುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಎನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ