AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಡಿಕೆ ಒಪ್ಕೊಳ್ಳೋವರೆಗೆ ನೆಮ್ಮದಿಯಿಂದ ಇರಲು ಬಿಡಲ್ಲ -ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಟಿಕಾಯತ್

Delhi Farmers Protest | ಈಗಾಗಲೇ ಕೃಷಿ ಕಾಯ್ದೆ ವಾಪಾಸ್ ಪಡೆಯಲ್ಲ ಅಂತಾ ಕೇಂದ್ರ ಸರ್ಕಾರ ತನ್ನ ನಿರ್ಧಾರ ಹೇಳಿ ಆಗಿದೆ. ಆದ್ರೆ ರೈತರು ಮಾತ್ರ ಹೋರಾಟ ಕೈಬಿಡುವ ಸೂಚನೆ ಕಾಣುತ್ತಿಲ್ಲ. ಬದಲಾಗಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ತಯಾರಿ ನಡೆಸಿದ್ದಾರೆ. ರೈತ ಮುಖಂಡ ಟಿಕಾಯತ್ ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬೇಡಿಕೆ ಒಪ್ಕೊಳ್ಳೋವರೆಗೆ ನೆಮ್ಮದಿಯಿಂದ ಇರಲು ಬಿಡಲ್ಲ -ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಟಿಕಾಯತ್
ಭಾರತೀಯ ಕಿಸಾನ್ ಯೂನಿಯನ್​ ಮುಖಂಡ ರಾಕೇಶ್ ಟಿಕಾಯತ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 15, 2021 | 7:28 AM

Share

ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟ ಸುತ್ತಲಿನ ರಾಜ್ಯಗಳಿಗೂ ಹಬ್ಬಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಲ್ಲೂ ಹೋರಾಟ ತೀವ್ರವಾಗಿದೆ. 85 ದಿನ ಕಳೆದ್ರೂ ಪಟ್ಟುಬಿಡದೆ ರೈತರು ಹೋರಾಟ ಮುನ್ನಡೆಸಿದ್ದಾರೆ. ಆದ್ರೆ ಕೇಂದ್ರಸರ್ಕಾರ ಮಾತ್ರ ಕೃಷಿಕಾಯ್ದೆಗಳ ಪರವಾಗಿ ಬಿಗಿ ನಿಲುವು ಮುಂದುವರಿಸಿದೆ. ಇದು ರೈತರನ್ನ ಮತ್ತಷ್ಟು ರೊಚ್ಚಿಗೇಳುವಂತೆ ಮಾಡಿದೆ.

ಸರ್ಕಾರ-ರೈತರ ನಡುವೆ ಮುಂದುವರಿದ ಹಗ್ಗಜಗ್ಗಾಟ ದೆಹಲಿಯ 3 ಗಡಿಗಳಲ್ಲಿ ಬೀಡು ಬಿಟ್ಟು ರೈತರು ಹೋರಾಡ್ತಿದ್ದಾರೆ. ಆದ್ರೆ ಕೇಂದ್ರ ಮಾತ್ರ ಕೃಷಿ ಕಾಯ್ದೆಗಳನ್ನ ವಾಪಾಸ್ ಪಡೆಯಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿದೆ. ಸಂಸತ್ ಅಧಿವೇಶನದಲ್ಲಿ ಪ್ರಧಾನಿ ಮೋದಿ ಕೂಡ ಕಾಯ್ದೆ ವಾಪಾಸ್ ಪಡೆಯಲ್ಲ ಎಂದಿದ್ದಾರೆ. ಸರ್ಕಾರದ ಉತ್ತರ ಕೇಳಿದ ರೈತರು ಹೋರಾಟವನ್ನ ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ರೈತಮುಖಂಡ ಟಿಕಾಯತ್ ಎಚ್ಚರಿಕೆ ನೀಡಿದ್ದು, ಬೇಡಿಕೆ ಒಪ್ಕೊಳ್ಳೋವರೆಗೆ ನೆಮ್ಮದಿಯಿಂದ ಇರಲು ಬಿಡಲ್ಲ ಅಂತಾ ವಾರ್ನಿಂಗ್ ಕೊಟ್ಟಿದ್ದಾರೆ. ಹೀಗಾಗಿ ಸರ್ಕಾರ-ರೈತರ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ.

40 ಲಕ್ಷ ಟ್ರ್ಯಾಕ್ಟರ್​ಗಳ ಮೆರವಣಿಗೆ ವಾರ್ನಿಂಗ್ ಕಿಸಾನ್ ಮಹಾಪಂಚಾಯತ್ ಹೆಸರಲ್ಲಿ ನಡೀತಿರೋ ಬೃಹತ್ ಸಭೆಗಳಲ್ಲಿ ಲಕ್ಷಾಂತರ ರೈತರು ಭಾಗವಹಿಸಿ, ಬೆಂಬಲ ಘೋಷಿಸುತ್ತಿದ್ದಾರೆ. ಈಗಾಗಲೇ ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನದಲ್ಲಿ ಹತ್ತಾರು ಮಹಾ ಪಂಚಾಯತ್‌ ನಡೆದಿವೆ. ರೈತ ಚಳವಳಿ ಉತ್ತುಂಗದಲ್ಲಿರುವ ಪಂಜಾಬ್‌ನಲ್ಲಿ ನಿನ್ನೆ ಮೊದಲ ಕಿಸಾನ್ ಮಹಾಪಂಚಾಯತ್ ನಡೆದಿದ್ದು ಭಾರಿ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು. ಮತ್ತೊಂದ್ಕಡೆ ದೆಹಲಿ ಗಡಿಯಲ್ಲೇ ಇದ್ದು, ಹೋರಾಟ ನಡೆಸುವ ಬಗ್ಗೆ ತೀರ್ಮಾನ ಕೈಗೊಂಡಿರುವ ರೈತರು ಸರ್ಕಾರಕ್ಕೆ ಅಕ್ಟೋಬರ್​ವರೆಗೆ ಗಡುವು ನೀಡಿದ್ದಾರೆ. ಅಕ್ಟೋಬರ್ ಒಳಗೆ ರೈತರ ಬೇಡಿಕೆ ಈಡೇರಿಸದೇ ಇದ್ರೆ 40 ಲಕ್ಷ ಟ್ರ್ಯಾಕ್ಟರ್​ಗಳ ಮೆರವಣಿಗೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಇದೇ ತಿಂಗಳಲ್ಲಿ ರೈಲು ರೋಖೋ ಚಳುವಳಿಗೂ ರೈತರು ಕರೆ ನೀಡಿದ್ದಾರೆ.

ಒಟ್ನಲ್ಲಿ ಒಂದ್ಕಡೆ ಸರ್ಕಾರ ಹಿಂದೆ ಸರಿಯಲು ಸಿದ್ಧವಿಲ್ಲ, ಹಾಗೇ ರೈತರು ಪಟ್ಟು ಸಡಿಲಿಸಲು ಮುಂದಾಗ್ತಿಲ್ಲ. ಹೀಗಾಗಿ ರೈತರ ಹೋರಾಟ ಮತ್ತಷ್ಟು ಕಗ್ಗಂಟಾಗುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: Farmers Green Shawl ಸಾಲು ಸಾಲು ರೈತ ಪ್ರತಿಭಟನೆ: ಮೈಸೂರಿನಲ್ಲಿ ಹಸಿರು ಶಾಲುಗಳಿಗೆ ಹೆಚ್ಚಿದ ಡಿಮ್ಯಾಂಡ್!

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು