AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ಪದದ ಅರ್ಥ ಅಶ್ಲೀಲ ಎಂದಿದ್ದ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಿಮಿನಲ್​ ಕೇಸ್​ಗೆ ಕೋರ್ಟ್​​ ಒಪ್ಪಿಗೆ

2022 ನವೆಂಬರ್​ 6 ರಂದು ಬೆಳಗಾವಿಯಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದದ್ದ ಸತೀಶ್​ ಜಾರಕಿಹೊಳಿ ಅವರು, ಹಿಂದು ಎಂಬ ಪದ ಅಶ್ಲೀಲ, ಕೊಳಕು, ಅಸಭ್ಯ ಅರ್ಥವಿದೆ ಎಂದು ಹೇಳಿದ್ದರು. ಇವರ ಹೇಳಿಕೆ ವಿರುದ್ಧ ವಕೀಲ ದಿಲೀಪ್​ ಕುಮಾರ್​ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಹಿಂದು ಪದದ ಅರ್ಥ ಅಶ್ಲೀಲ ಎಂದಿದ್ದ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಿಮಿನಲ್​ ಕೇಸ್​ಗೆ ಕೋರ್ಟ್​​ ಒಪ್ಪಿಗೆ
ಸತೀಶ್ ಜಾರಕಿಹೊಳಿ
Ramesha M
| Edited By: |

Updated on:Feb 04, 2024 | 5:10 PM

Share

ಬೆಂಗಳೂರು, ಫೆಬ್ರವರಿ 04: ಹಿಂದು ಪದಕ್ಕೆ ಅಶ್ಲೀಲ (Word Hindu means obscene) ಎಂಬ ಅರ್ಥವಿದೆ ಎಂದು ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ (Satish Jarakiholi) ವಿರುದ್ಧ ಕ್ರಿಮಿನಲ್ ಕೇಸ್ (Criminal case)​ ದಾಖಲಿಸಿ, ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

2022 ನವೆಂಬರ್​ 6 ರಂದು ಬೆಳಗಾವಿಯಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್​ ಜಾರಕಿಹೊಳಿ ಅವರು, ಹಿಂದು ಎಂಬ ಪದಕ್ಕೆ ಅಶ್ಲೀಲ, ಕೊಳಕು, ಅಸಭ್ಯ ಅರ್ಥವಿದೆ. ಇದರ ಮೂಲ ಭಾರತದಲ್ಲ ಹಿಂದು ಎಂಬ ಪದ ಪರ್ಷಿಯನ್ ಭಾಷೆಯಿಂದ ಬಂದಿದೆ. ಹಿಂದು ಎಂಬ ಪದ ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದು ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದನ್ನು ಚರ್ಚೆ ಮಾಡಬೇಕು ಎಂದಿದ್ದರು.

ಇದನ್ನೂ ಓದಿ: ಪಟ್ಟು ಬಿಡದ ಸತೀಶ್ ಜಾರಕಿಹೊಳಿ: ಹಿಂದೂ ಪದದ ಅರ್ಥ ಸೋತವರು, ಗುಲಾಮರು, ಡಕಾಯಿತರು ಎಂಬ ದಾಖಲೆ ಬಿಡುಗಡೆ

ಇದಾದ ನಂತರ ಸತೀಶ್​ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ನಾಯಕರು, ಹಿಂದೂ ಕಾರ್ಯಕರ್ತರು ಹಾಗೂ ವಕೀಲ ದಿಲೀಪ್ ಕುಮಾರ್ ಅವರು ಖಾಸಗಿ ದೂರು ದಾಖಲಿಸಿದ್ದರು. ಈ ಹೇಳಿಕೆ ನಂತರ ಸತೀಶ್​ ಜಾರಕಿಹೊಳಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಲೋಕೋಪಯೋಗಿ ಸಚಿವ ಆಗಿದ್ದಾರೆ. ಆದ್ದರಿಂದ ವಕೀಲ ದಿಲೀಪ್​ ಕುಮಾರ್​ ಎಂಬುವರು ನೀಡಿದ್ದ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಜನಪ್ರತಿನಿಧಿಗಳ ನ್ಯಾಯಾಲಯ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕೇಸ್​ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.

ಕಾನೂನು ಹೋರಾಟ ಮಾಡುತ್ತೇವೆ: ಸತೀಶ್ ಜಾರಕಿಹೊಳಿ‌

ಆದೇಶದ ಪ್ರತಿಯಲ್ಲಿ ಏನಿದೆ ಅಂತಾ ನೋಡಬೇಕಿದೆ. ಆದೇಶದ ಪ್ರತಿ ನನಗೆ ಸಿಕ್ಕಿಲ್ಲ, ಕಾನೂನು ಹೋರಾಟ ಮಾಡುತ್ತೇವೆ. ಹಿಂದು ಪದದ ಬಗ್ಗೆ ನನ್ನ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಯಾರೋ ಕೇಸ್ ಹಾಕಿದ್ದರು. ನ್ಯಾಯಾಲಯ ಏನು ಆದೇಶ ನೀಡಿದೆ ನೋಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:07 pm, Sun, 4 February 24

Follow Us
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಮಿಲ್ಲರ್ ಮಾಡಿದ ಒಂದು ತಪ್ಪಿನಿಂದಾಗಿ ಸೋತ ಡೆಲ್ಲಿ ಕ್ಯಾಪಿಟಲ್ಸ್
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ
ಇಂದು ಈ ರಾಶಿಯವರಿಗೆ ವಸಂತ ಕಾಲ: ಎಲ್ಲವೂ ನೀವು ಹೇಳಿದಂತೆ ನಡೆಯುತ್ತದೆ