AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ಬಿಲ್ ಬಾಕಿ: ಬಿಬಿಎಂಪಿ ವಿರುದ್ಧ ಸಮರ ಸಾರಿದ ಗುತ್ತಿಗೆದಾರರು

ಬಾಕಿ ಬಿಲ್​ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರ್​ಗೂ ಗುತ್ತಿಗೆದಾರರು ಮನವಿ ಮಾಡಿದ್ದಾರೆ. ಇನ್ನೂ ಬಾಕಿ ಪಾವತಿಯಾಗದ ಹಿನ್ನೆಲೆ ಕಾಮಗಾರಿ ಸ್ಥಗಿತಗೊಳಿಸಿ ನಾಳೆ ಮುಷ್ಕರಕ್ಕೆ ಗುತ್ತಿಗೆದಾರರು ಮುಂದಾಗಿದ್ದಾರೆ.  ಇನ್ನು ನಾಳೆಯಿಂದ ಬಿಬಿಎಂಪಿ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲಿ ಪಾಲಿಕೆ ಕಾಮಗಾರಿಗಳಿಗೆ ಬ್ರೇಕ್ ಬೀಳಲಿದೆ.

ಕಾಮಗಾರಿ ಬಿಲ್ ಬಾಕಿ: ಬಿಬಿಎಂಪಿ ವಿರುದ್ಧ ಸಮರ ಸಾರಿದ ಗುತ್ತಿಗೆದಾರರು
ಕಾಮಗಾರಿ ಬಿಲ್ ಬಾಕಿ : ಬಿಬಿಎಂಪಿ ವಿರುದ್ಧ ಸಮರ ಸಾರಿದ ಗುತ್ತಿಗೆದಾರರು
ಶಾಂತಮೂರ್ತಿ
| Edited By: |

Updated on:Sep 01, 2024 | 4:14 PM

Share

ಬೆಂಗಳೂರು, ಆಗಸ್ಟ್​ 01: ಬಿಬಿಎಂಪಿ (BBMP) ವ್ಯಾಪ್ತಿಯ ಕಾಮಗಾರಿಗಳ ಶೇ.25ರಷ್ಟು ಬಿಲ್ ಬಾಕಿ ಹಿನ್ನೆಲೆ ಬಿಬಿಎಂಪಿ ಗುತ್ತಿಗೆದಾರರು ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದಾರೆ. ಕಳೆದ 2 ವರ್ಷದಿಂದ ಬರೋಬ್ಬರಿ 1,600 ಕೋಟಿ ರೂ. ಹಣವನ್ನು ಪಾಲಿಕೆ ಬಾಕಿ ಉಳಿಸಿಕೊಂಡಿದೆ. ಶೇ.75ರಷ್ಟು ಕಾಮಗಾರಿ ಬಿಲ್ ಮಾತ್ರ ಪಾಲಿಕೆ ಪಾವತಿಸಿದ್ದು, ಉಳಿದ ಶೇಕಡಾ 25ರಷ್ಟು ಬಿಲ್​ ಪಾವತಿಗೆ ಗುತ್ತಿಗೆದಾರರು ಒತ್ತಾಯಿಸಿದ್ದಾರೆ.

ಬಾಕಿ ಬಿಲ್​ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರ್​ಗೂ ಗುತ್ತಿಗೆದಾರರು ಮನವಿ ಮಾಡಿದ್ದಾರೆ. ಇನ್ನೂ ಬಾಕಿ ಪಾವತಿಯಾಗದ ಹಿನ್ನೆಲೆ ಕಾಮಗಾರಿ ಸ್ಥಗಿತಗೊಳಿಸಿ ನಾಳೆ ಮುಷ್ಕರಕ್ಕೆ ಗುತ್ತಿಗೆದಾರರು ಮುಂದಾಗಿದ್ದಾರೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ಇನ್ನು ನಾಳೆಯಿಂದ ಬಿಬಿಎಂಪಿ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲಿ ಪಾಲಿಕೆ ಕಾಮಗಾರಿಗಳಿಗೆ ಬ್ರೇಕ್ ಬೀಳಲಿದೆ. ಪಾಲಿಕೆಯಿಂದ ಕೈಗೊಂಡಿರುವ ಎಲ್ಲಾ ಕಾಮಗಾರಿಗೆ ಬ್ರೇಕ್ ಬೀಳಲಿದೆ. ಬಾಕಿ ಬಿಲ್ ಪಾವತಿಯಾಗುವ ತನಕ ಕಾಮಗಾರಿ ಸ್ಥಗಿತಕ್ಕೆ ಚಿಂತನೆ ಮಾಡಲಾಗುತ್ತಿದೆ.

ಯಾವ ಯಾವ ಕಾಮಕಾರಿ ಸ್ಥಗಿತ

  • ರಸ್ತೆ ಕಾಮಗಾರಿ
  • ಮೂಲಭೂತ ಸೌಕರ್ಯ ವಿಭಾಗದ ಕಾಮಗಾರಿಗಳು
  • ವಾರ್ಡ್ ಮಟ್ಟದ ನಿರ್ವಹಣಾ ಕಾಮಗಾರಿಗಳು
  • ಬೃಹತ್ ನೀರುಗಾಲುವೆ
  • ವೈಟ್ ಟಾಪಿಂಗ್ ಕಾಮಗಾರಿ
  • ಬಿಬಿಎಂಪಿ ಎಲೆಕ್ಟ್ರಿಕ್ ವಿಭಾಗದ ಕಾಮಗಾರಿಗಳು

ಬಿಬಿಎಂಪಿ ಗುತ್ತಿಗೆದಾರರ ಪತ್ರದಲ್ಲೇನಿದೆ?

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಅನುದಾನದ ಅಡಿಯಲ್ಲಿ ಮತ್ತು ಸರ್ಕಾರದ ಅನುದಾನದ ಅಡಿಯಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಪಾವತಿಸಬೇಕಾದ ಬಿಲ್ಲುಗಳಲ್ಲಿ ಶೇ.25% ರಷ್ಟು ಹಣವನ್ನು ತಡೆಹಿಡಿದು, ಶೇ.75% ರಷ್ಟು ಹಣವನ್ನು ಮಾತ್ರ ಪಾವತಿ ಮಾಡಲಾಗುತ್ತಿರುತ್ತದೆ (ಇದರಲ್ಲಿ ಪೂರ್ಣ ಮೊತ್ತಕ್ಕೆ ಬಿಎಸ್‌ಟಿ 18% ಮತ್ತು ಇತರೆ ಕಟಾವಣೆಗಳೂ ಒಳಗೊಂಡಿದೆ) ಬಿಲ್ ಸಲ್ಲಿಸಿ 3 ವರ್ಷಗಳಾದರೂ ಸಹ ಬಿಲ್ಲಿನ ಸಂಪೂರ್ಣ ಹಣ ಗುತ್ತಿಗೆದಾರರಿಗೆ ಪಾವತಿಯಾಗದೇ ಇರುವ ಕಾರಣ ಗುತ್ತಿಗೆದಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಬ್ಯಾನ್ ಆದ್ರೂ ಸಿಂಥೆಟಿಕ್ ಡೈ ಕಲರ್ ಬಳಕೆ: ಮಕ್ಕಳ ಹೊಟ್ಟೆ ಸೇರ್ತಿದೆ ಸ್ಲೋ ಪಾಯಿಸನ್

ಗುತ್ತಿಗೆದಾರರು ಬ್ಯಾಂಕ್ ಹಾಗೂ ಇತರೆ ಮೂಲಗಳಿಂದ ಸಾಲ ಮಾಡಿ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ನೀಡುತ್ತಿರುವ ಶೇ.75% ರಷ್ಟಲ್ಲಿ ಗುತ್ತಿಗೆದಾರರು ಹಾಕಿರುವ ಬಂಡವಾಳ ಸಹ ಹಿಂದಿರುಗಿರುವುದಿಲ್ಲ. ಇದರಿಂದಾಗಿ ಹಲವು ಗುತ್ತಿಗೆದಾರರುಗಳು ಬ್ಯಾಂಕ್ ಬಡ್ಡಿ ಮತ್ತು ಜಿಎಸ್‌ಟಿ ಪಾವತಿಸಲು ಸಾಧ್ಯವಾಗದೇ ಕಂಗಾಲಾಗಿದ್ದು, ಶೇ.25% ರಷ್ಟು ಬಾಕಿ ಮೊತ್ತವನ್ನು ನೀಡಿದಲ್ಲಿ ಮಾತ್ರ ಗುತ್ತಿಗೆದಾರರು ಸಂಕಷ್ಟದಿಂದ ಪಾರಾಗುವ ಸಾಧ್ಯತೆ ಇದೆ. ಆದುದರಿಂದ ದಯಮಾಡಿ ತಡೆಹಿಡಿದಿರುವ ಬಾಕಿ ಶೇ.25% ರಷ್ಟು ಹಣವನ್ನು ಬಿಡುಗಡೆ ಮಾಡಿ ಗುತ್ತಿಗೆದಾರರಿಗೆ ಪಾವತಿಸಲು ಮುಖ್ಯ ಆಯುಕ್ತರು, ಬಿಬಿಎಂಪಿಯವರಿಗೆ ನಿರ್ದೇಶಿಸುವಂತೆ ಬಿಬಿಎಂಪಿ ಗುತ್ತಿದಾರರ ಸಂಘದ ವತಿಯಿಂದ ತಮ್ಮಲ್ಲಿ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:04 pm, Sun, 1 September 24

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ