AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

ಸಿಬ್ಬಂದಿ ಚಿತಾಗಾರದ ಮುಖ್ಯ ಗೇಟ್ ಕ್ಲೋಸ್ ಮಾಡಿದ್ದು ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸುಡಲು ಕಾಯುವಂತಾಗಿದೆ. ನಾವು ಇಡೀ ರಾತ್ರಿ ಚಿತಾಗಾರದಲ್ಲಿ ಕೆಲಸ ಮಾಡಿದ್ದೇವೆ.

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Apr 21, 2021 | 10:18 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ 13,782 ಜನರಿಗೆ ಸೋಂಕು ತಗಲಿದ್ದು, ಬೆಂಗಳೂರಿನಲ್ಲಿ ನಿನ್ನೆ ಕೊರೊನಾ ಸೋಂಕಿಗೆ 92 ಜನರ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಚಿತಾಗಾರ ಸಿಬ್ಬಂದಿಯ ಕೆಲಸ ಹೆಚ್ಚಾಗಿದ. ಚಿತಾಗಾರದ ಮುಂದೆ ಜನ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಎದುರಾಗಿದೆ. ಇದರ ನಡುವೆ ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್ ಮಾಡಿ ಬೆಳ್ಳಂ ಬೆಳಗ್ಗೆ ಚಿತಾಗಾರ ಸಿಬ್ಬಂದಿ ಶಾಕ್ ಕೊಟ್ಟಿದ್ದಾರೆ.

ಸಿಬ್ಬಂದಿ ಚಿತಾಗಾರದ ಮುಖ್ಯ ಗೇಟ್ ಕ್ಲೋಸ್ ಮಾಡಿದ್ದು ಸೋಂಕಿನಿಂದ ಮೃತಪಟ್ಟವರ ದೇಹವನ್ನು ಸುಡಲು ಕಾಯುವಂತಾಗಿದೆ. ನಾವು ಇಡೀ ರಾತ್ರಿ ಚಿತಾಗಾರದಲ್ಲಿ ಕೆಲಸ ಮಾಡಿದ್ದೇವೆ. ನಾವೂ ಮನುಷ್ಯರೇ, ನಮಗೂ ರೆಸ್ಟ್ ಬೇಕು. ಯಂತ್ರ ಕೆಟ್ಟೋಗಿದೆ ಬೇರೆ ಕಡೆ ಹೋಗಿ ಎಂದು ಮೃತರ ಸಂಬಂಧಿಕರಿಗೆ ಸಬೂಬು ನೀಡಿದ್ದಾರೆ.

ಚಿತಾಗಾರ ಸಿಬ್ಬಂದಿಗಳ ಮಾತಿಗೆ ಮೃತರ ಕುಟುಂಬಸ್ಥರು ಕಕ್ಕಾಬಿಕ್ಕಿಯಾಗಿದ್ದು ಗೇಟ್ ಮುಂಭಾಗವೇ ಮೃತದೇಹವನ್ನಿಟ್ಟುಕೊಂಡು ಕಾಯುತ್ತಿರುವ ದೃಶ್ಯ ಕಂಡು ಬಂದಿದೆ. ಆರೋಗ್ಯ ಸಚಿವ ಸುಧಾಕರ್ ಆಸ್ಪತ್ರೆಗಳಿಗೆ ಭೇಟಿ ಕೊಡ್ತಾರೆ. ಇಲ್ಲಿಗೆ ಬಂದು ನಮ್ಮ ಕಷ್ಟ ಏನೆಂದು ಗಮನ ಹರಿಸಲಿ ಎಂದು ಸಚಿವರು, ಅಧಿಕಾರಿಗಳ ವಿರುದ್ಧ ಚಿತಾಗಾರ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾದಿಂದಾಗಿ ಎದುರಿಸಬಾರದಿಂದಂತಹ ಪರಿಸ್ಥಿತಿ ಈಗ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದೆ. ಆದಷ್ಟು ಬೇಗ ಸೋಂಕಿತರ ಅಂತ್ಯಸಂಸ್ಕಾರಕ್ಕೂ ಒಂದು ನಿಯಮವನ್ನು ಸರ್ಕಾರ ಕೈಗೊಳ್ಳಬೇಕಿದೆ.

ಇದನ್ನೂ ಓದಿ: ಬಿಡುವಿಲ್ಲದೆ ಶವ ಸಂಸ್ಕಾರ ನಡೆಸಿ ಸುಸ್ತಾದ ಚಿತಾಗಾರದ ಸಿಬ್ಬಂದಿ; ಮನೆಗೆ ಹೋಗಲೂ ಸಮಯವಿಲ್ಲ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!