AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ನೀಡದ್ದಕ್ಕೆ ಕಚೇರಿ ಧ್ವಂಸ: ನರಸಾಪುರದ iPhone ತಯಾರಿಕಾ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ

ವೇತನ ನೀಡಿಲ್ಲ ಎಂದು ಆರೋಪ ಮಾಡಿ ಕಂಪನಿ ಆವರಣದಲ್ಲಿ ಕಾರ್ಮಿಕರು ದಾಂಧಲೆ ನಡೆಸಿರುವ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆದಿದೆ. ತೈವಾನ್​ ಮೂಲದ ವಿಸ್ಟ್ರಾನ್​ ಕಂಪನಿ ದೇಶದಲ್ಲಿ iPhone ತಯಾರಿಕೆಯಲ್ಲಿ ತೊಡಗಿದೆ.

ವೇತನ ನೀಡದ್ದಕ್ಕೆ ಕಚೇರಿ ಧ್ವಂಸ: ನರಸಾಪುರದ iPhone ತಯಾರಿಕಾ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ
ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ
KUSHAL V
| Edited By: |

Updated on:Dec 14, 2020 | 4:21 PM

Share

ಕೋಲಾರ: ವೇತನ ನೀಡಿಲ್ಲ ಎಂದು ಆರೋಪ ಮಾಡಿ ಕಂಪನಿ ಆವರಣದಲ್ಲಿ ಕಾರ್ಮಿಕರು ದಾಂಧಲೆ ನಡೆಸಿರುವ ಘಟನೆ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪನಿ ಮೇಲೆ ಕಾರ್ಮಿಕರಿಂದ ಕಲ್ಲು ತೂರಾಟ ನಡೆದಿದೆ. ತೈವಾನ್​ ಮೂಲದ ವಿಸ್ಟ್ರಾನ್​ ಕಂಪನಿ ದೇಶದಲ್ಲಿಌಪಲ್  iPhone ತಯಾರಿಕೆಯಲ್ಲಿ ತೊಡಗಿದೆ.

ಕಂಪನಿ ನಮಗೆ ನಾಲ್ಕು ತಿಂಗಳಿಂದ ವೇತನ ಕೊಟ್ಟಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದರೆ. ಹಾಗಾಗಿ, ಆಕ್ರೋಶಗೊಂಡ ಕಾರ್ಮಿಕರಿಂದ ಕಚೇರಿಯ ಮೇಲೆ ದಾಳಿ ಮತ್ತು ಕಲ್ಲು ತೂರಾಟ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ವೇಮಗಲ್ ಪೊಲೀಸರು ಪರಿಶೀಲನೆ ನಡೆಸಿದರು.

‘ಘಟನೆಗೆ ಕಾರಣ ಹುಡುಕುತ್ತಿದ್ದೇವೆ’ ವಿಸ್ಟ್ರಾನ್ ಕಂಪನಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಲಯದ‌ ಐಜಿಪಿ ಸೀಮಂತ್ ಕುಮಾರ್‌ ಪ್ರತಿಕ್ರಿಯಿಸಿದ್ದು ಕಾರ್ಮಿಕರು ಸಮಸ್ಯೆಯನನ್ನು ಕುಳಿತು ಬಗೆಹರಿಸಿಕೊಳ್ಳಬಹುದಾಗಿತು. ಆದರೆ, ಕಾನೂನು ಉಲ್ಲಂಘನೆ‌ ಮಾಡಿದ್ದು ಸರಿಯಿಲ್ಲ. ಘಟನೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ಹೇಳಿದರು.

ಕಂಪನಿಯಲ್ಲಿ ಸಾಕಷ್ಟು‌ ಹಾನಿಯಾಗಿದೆ. ಕೃತ್ಯವೆಸಗಿರುವ‌ ಬಗ್ಗೆ ಕೆಲವು ದಾಖಲೆಗಳು ಸಿಕ್ಕಿವೆ. ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಕ್ರಮ ಜರುಗಿಸಿದ್ದಾರೆ. ಸದ್ಯ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಕೆಜಿಎಫ್​ನಿಂದಲೂ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಐಜಿಪಿ ಸೀಮಂತ್ ಕುಮಾರ್‌ ಹೇಳಿದರು.

ಚಿನ್ನದ ನಾಡು ಕೋಲಾರದಲ್ಲಿ IPhone ಘಟಕ ಆರಂಭ! ಸ್ಥಳೀಯರಿಗೆ ಉದ್ಯೋಗಾವಕಾಶದ ಸುಗ್ಗಿ

Published On - 8:19 am, Sat, 12 December 20

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ