AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜೀವನದ ಮೊದಲನೇ ವ್ಯಾಪಾರ ಕೋಳಿ ಮಾರಾಟ, ಒಂದು ಮೊಟ್ಟೆಯ ಕಥೆ ಹೇಳಿದ ಡಿಕೆ ಶಿವಕುಮಾರ್

ವಿಶ್ವ ಮೊಟ್ಟೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ಜೀವನದ ಮೊದಲನೇ ವ್ಯಾಪಾರ ಕೋಳಿ ಮಾರಾಟ ಮಾಡಿದ್ದು ಎಂದರು. ಅಲ್ಲದೆ, ರಾಗಿ ಮುದ್ದೇ ತಿನ್ನುವವನು ಬೆಟ್ಟ ಕೀಳುತ್ತಾರೆ, ಜೋಳ ತಿನ್ನುವವನು ತೋಳನಂತೆ ಇರುತ್ತಾನೆ. ಮೊಟ್ಟೆ ತಿನ್ನುವವನು ಜಟ್ಟಿಯಂತೆ ಆಗುತ್ತಾನೆ ಎಂದು ಹಿರಿಯರು ಹೇಳುತ್ತಿದ್ದ ಮಾತನನ್ನು ಹೇಳಿದರು.

ನನ್ನ ಜೀವನದ ಮೊದಲನೇ ವ್ಯಾಪಾರ ಕೋಳಿ ಮಾರಾಟ, ಒಂದು ಮೊಟ್ಟೆಯ ಕಥೆ ಹೇಳಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Anil Kalkere
| Edited By: Rakesh Nayak Manchi|

Updated on: Oct 13, 2023 | 4:42 PM

Share

ಬೆಂಗಳೂರು, ಅ.13: ಕೋಳಿ ಮಾರಾಟ ಮಾಡಿದ್ದು ನನ್ನ ಜೀವನದ ಮೊದಲನೇ ವ್ಯಾಪಾರ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಹೆಬ್ಬಾಳದ ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ಆಯೋಜಿಸಿದ್ದ ವಿಶ್ವ ಮೊಟ್ಟೆ ದಿನಾಚರಣೆ (World Egg Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೊಟ್ಟೆ ತಿನ್ನುವವರು, ಮೊಟ್ಟೆ ತಯಾರು ಮಾಡುವವರು, ಕೋಳಿ ಮಾಡುವವರು, ಕೋಳಿ ತಿನ್ನುವವರು ಎಲ್ಲರೂ ಕಾರ್ಯಕ್ರಮಕ್ಕೆ ಬಂದಿದ್ದಿರಾ ಎಂದು ಕೇಳಿದ ಡಿಕೆ ಶಿವಕುಮಾರ್, ರಾಗಿ ಮುದ್ದೇ ತಿನ್ನುವವನು ಬೆಟ್ಟ ಕೀಳುತ್ತಾರೆ. ಜೋಳ ತಿನ್ನುವವನು ತೋಳನಂತೆ ಇರುತ್ತಾನೆ. ಮೊಟ್ಟೆ ತಿನ್ನುವವನು ಜಟ್ಟಿಯಂತೆ ಆಗುತ್ತಾನೆ ಅಂತ ನಮ್ಮ ಹಿರಿಯರು ಹೇಳುತ್ತಿದ್ದರು ಎಂದರು.

ಇದನ್ನೂ ಓದಿ: ಕರ್ನಾಟಕದಲ್ಲಿ ವಿದ್ಯುತ್ ಲೋಡ್​ ಶೆಡ್ಡಿಂಗ್: ಕೊನೆಗೂ ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್

ಇದೆ ಕ್ಯಾಂಪಸ್​ನಲ್ಲಿ 15 ದಿನ ಪೌಲ್ಟ್ರಿ ತರಬೇತಿ ಪಡೆದಿದ್ದೆ ಎಂದು ನೆನಪಿಸಿಕೊಂಡ ಡಿಕೆ ಶಿವಕುಮಾರ್, ಸುಂಕದಕಟ್ಟೆಯಲ್ಲಿ ಇದ್ದೆ, ಜಮೀನು ಇತ್ತು. ಕೋಳಿ ಫಾರಂ ನಡೆಸಿದೆ, ಲಾಸ್ ಆದ ಹಿನ್ನೆಲೆ ಉದ್ಯಮ ಬಿಟ್ಟು ಬಿಟ್ಟೆ. ನನ್ನ ಜೀವನದ ಮೊದಲನೇ ವ್ಯಾಪಾರ ಕೋಳಿ ಮಾರಾಟ ಮಾಡಿದ್ದು. ನಾವು ಇವಾಗ ಮಾಂಸ, ಮೊಟ್ಟೆ ತಿನ್ನುವುದನ್ನ ಬಿಟ್ಟು ಬಿಟ್ಟಿದ್ದೇನೆ. ಆದರೆ ಉತ್ತಮ ಆರೋಗ್ಯಕ್ಕೆ ಮೊಟ್ಟೆ ಅವಶ್ಯಕ ಎಂದರು.

ಮೊಟ್ಟೆ ವ್ಯಾಪಾರ ಬಹಳ ಕಷ್ಟ. ಮೊಟ್ಟೆ, ಕೋಳಿ ಬಗ್ಗೆ ಒಂದು ಸಣ್ಣ ಸುದ್ದಿ ಹರಿದಾಟ ಆದರೆ ಸಾಕು ಎಲ್ಲಾ ವ್ಯಾಪಾರ ಬಿದ್ದು ಹೋಗುತ್ತದೆ. ರೇಷ್ಮೆ ಉಳುವಿನ ರೀತಿ ಮೊಟ್ಟೆ ಜೋಪಾನ ಮಾಡಬೇಕು. ಸರ್ಕಾರ ನಿಮಗೆ ಯಾವ ರೀತಿ ರಕ್ಷಣೆ ಬೇಕು ಎಂದು ನಮ್ಮ ಜೊತೆ ಹೇಳಿಕೊಳ್ಳಿ, ನಮ್ಮ ಸರ್ಕಾರ ನಿಮ್ಮ ಜೊತೆ ಇದ್ದೇ ಇರುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್