AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ

ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 13, 2022 | 10:47 AM

Share

ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ. ಅಷ್ಟೇ ಅಲ್ಲದೆ ಸತ್ತಮೇಲು ಬದುಕಿರುತ್ತೇವೆ. ಹೀಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದರು.

ಮಾನವ ಜನ್ಮ ಶ್ರೇಷ್ಠವಾದದ್ದು. ಅದನ್ನು ಉಳಿಸುವ ಕೆಲಸ ಮಾಡಬೇಕಿದೆ. ಸಾಧಕನಿಗೆ ಸಾವಿಲ್ಲ, ಸಾವಿನ ನಂತರವು ಬದುಕಬಹುದು. ಇದೇ ರೀತಿಯಲ್ಲಿ ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು. ಮುಂದಿನ ದಿನಗಳಲ್ಲಿ ಯುವಕರೆಲ್ಲರೂ ಅಂಗಾಂಗ ದಾನಕ್ಕೆ ಮುಂದೆ ಬರಬೇಕಾಗಿದೆ. ರಾಜ್ಯಾದ್ಯಂತ 18 ಕೇಂದ್ರಗಳಿವೆ. ಈ ಕೇಂದ್ರಗಳಲ್ಲಿ ಅಂಗಾಂಗ ದಾನ ಮಾಡಲು ಇಚ್ಛಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದ ಸಿಎಂ ಬೊಮ್ಮಾಯಿ, ನೀವೆಲ್ಲರೂ ಸಹಿ ಮಾಡಬೇಕು ಎಂದು ವೇದಿಕೆ ಮೇಲೆ ಹಾಜರಿದ್ದ ಗಣ್ಯರಿಗೂ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಅಪ್ಪು ನೆನೆದ ಸಿಎಂ

ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದಿವಂಗತ ನಟ ಪುನೀತ್ ರಾಜ್​ಕುಮಾರ್ ಮತ್ತು ಮತ್ತೋರ್ವ ದಿವಂಗತ ನಟ ಸಂಚಾರಿ ವಿಜಯ್ ಅವರನ್ನು ನೆನೆದರು. ಅಲ್ಲದೆ ಪುನೀತ್ ರಾಜಕುಮಾರ್ ಹಾಗೂ ನಟ ಸಂಚಾರಿ ವಿಜಯ್ ಕಣ್ಣು ದಾನ ಮಾಡಿ ಇತರರಿಗೆ ಬೆಳಕಾಗಿದ್ದಾರೆ ಎಂದು ಸ್ಮರಿಸಿದರು.

Published On - 10:41 am, Sat, 13 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?