AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿಗಾಗಿ ಹೋರಾಟ, ಬುತ್ತುತ್ತಿರುವ ಡ್ಯಾಂಗಳು; ರಾಜ್ಯದ ಪ್ರಮುಖ ನದಿಗಳ ನೀರಿನ ಮಟ್ಟ ಹೀಗಿದೆ

World Rivers Day 2023: ನಮ್ಮ ರಾಜ್ಯದಲ್ಲಿ ಪ್ರಮುಖವಾಗಿ ಕಾವೇರಿ, ಕೃಷ್ಣ, ಮಹದಾಯಿ ನದಿಗಳ ನೀರಿಗಾಗಿ ದಶಕಗಳಿಂದ ಅಂತಾರಾಜ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಕಾವೇರಿ ವಿಚಾರವಾಗಿ ಕಳೆದ ಒಂದು ತಿಂಗಳಿಂದ ಹೋರಾಟ ಜೋರಾಗಿದೆ. ಹಾಗಾದರೇ ರಾಜ್ಯದಲ್ಲಿನ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ.

ಕಾವೇರಿ ನದಿಗಾಗಿ ಹೋರಾಟ, ಬುತ್ತುತ್ತಿರುವ ಡ್ಯಾಂಗಳು; ರಾಜ್ಯದ ಪ್ರಮುಖ ನದಿಗಳ ನೀರಿನ ಮಟ್ಟ ಹೀಗಿದೆ
ಕೃಷ್ಣ ನದಿ
ವಿವೇಕ ಬಿರಾದಾರ
|

Updated on:Sep 24, 2023 | 12:16 PM

Share

ನದಿಗಳ ದಂಡೆಯಲ್ಲಿ ಅನೇಕ ನಾಗರಿಕತೆಗಳು ಹುಟ್ಟಿವೆ ಹಾಗೇ ನದಿಯಲ್ಲೇ (River) ಮುಳುಗಿ ಹೋಗಿವೆ. ಇದಕ್ಕೆ ಸಾಕ್ಷಿ ಎಂಬಂತೆ ಹರಪ್ಪಾ ಮತ್ತ ಮೆಂಜೋದಾರೊ ನಾಗರಿಕತೆಗಳು. ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ, ಜೀವನದಲ್ಲಿ ನದಿಗಳು ತುಂಬಾ ಮಹತ್ವದ ಪಾತ್ರ ವಹಿಸುತ್ತವೆ. ಹುಟ್ಟಿದ ಕ್ಷಣದಿಂದ ಹಿಡಿದು, ಸತ್ತ ಮೇಲೆ ನಮ್ಮ ಅಸ್ತಿಗಳನ್ನ ವಿಸರ್ಜಿಸಲು ನದಿಗಳು ಬೇಕೆ ಬೇಕು. ಭಾರತದಂತ ಪೂಜ್ಯ ಭೂಮಿಯಲ್ಲಿ ನದಿಗಳನ್ನು ದೈವಿ ಸ್ವರೂಪದಲ್ಲಿ ಕಾಣಲಾಗುತ್ತದೆ. ಪ್ರತಿಯೊಂದು ಕಾರ್ಯ ಆರಂಭಕ್ಕೆ ವಿಘ್ನನಿವಾರಕ ಎಷ್ಟು ಮುಖ್ಯನೋ ನದಿಗಳ ನೀರು ಅಷ್ಟೇ ಪ್ರಾಮುಖ್ಯ ವಹಿಸುತ್ತದೆ. ಅದಕ್ಕೆ ಅಲ್ಲವೇ ಪೂಜೆ, ಸ್ನಾನ ಉಪಾದಿ ಸಮಯದಲ್ಲಿ “ಗಂಗೇಚ ಯಮುನೇಚೈವ ಗೋದಾವರಿ ಸರಸ್ವತಿ ನರ್ಮದೇ ಸಿಂಧು ಕಾವೇರಿ ಜಲೇಸ್ಮಿನ್​ ಸನ್ನಿಧಿಂ ಕುರು” ಎನ್ನುವುದು. ಅಷ್ಟಕ್ಕೂ ಈಗ ಏಕೆ ಈ ಮಾತು ಅಂದರೆ ಇಂದು “ವಿಶ್ವ ನದಿಗಳ ದಿನ” (World Rivers Day) ಎಂದು ಆಚರಿಸಲಾಗುತ್ತದೆ.

ಮೊದಲ ವಿಶ್ವ ನದಿಗಳ ದಿನವು 2005 ರಲ್ಲಿ ಪ್ರಾರಂಭವಾಯಿತು. ಏಕೆಂದರೆ ಯುನೈಟೆಡ್ ನೇಷನ್ಸ್ ಆ ವರ್ಷ ವಾಟರ್ ಫಾರ್ ಲೈಫ್ ದಶಕ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಕೆನಡಾದಲ್ಲಿ ನದಿಗಳ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಮಾರ್ಕ್ ಏಂಜೆಲೊ ಎಂಬ ವ್ಯಕ್ತಿ ಈ ವಿಶೇಷ ದಿನದ ಕಲ್ಪನೆಯನ್ನು ಮುಂದಿಟ್ಟರು. ನಮ್ಮ ರಾಜ್ಯದಲ್ಲಿ ಪ್ರಮುಖವಾಗಿ ಕಾವೇರಿ, ಕೃಷ್ಣ, ಮಹದಾಯಿ ನದಿಗಳ ನೀರಿಗಾಗಿ ದಶಕಗಳಿಂದ ಅಂತಾರಾಜ್ಯಗಳ ನಡುವೆ ಹೋರಾಟ ನಡೆಯುತ್ತಿದೆ. ಕಾವೇರಿ ವಿಚಾರವಾಗಿ ಕಳೆದ ಒಂದು ತಿಂಗಳಿಂದ ಹೋರಾಟ ಜೋರಾಗಿದೆ. ಹಾಗಾದರೇ ರಾಜ್ಯದಲ್ಲಿನ ಪ್ರಮುಖ ನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿರುವ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ.

ಇದನ್ನೂ ಓದಿ: ವಿಶ್ವ ನದಿಗಳ ದಿನ 2023: ದಿನಾಂಕ, ಇತಿಹಾಸ, ಮಹತ್ವ ಮತ್ತು ಆಚರಣೆ

  • ಹೇಮಾವತಿ ಜಲಾಶಯ

ಜಲಾಶಯದ ಗರಿಷ್ಠ ನೀರಿನ ಮಟ್ಟ – 2922 ಅಡಿ, ಇಂದಿನ‌ ನೀರಿನ ಮಟ್ಟ – 2896.90 ಅಡಿ, ಒಟ್ಟು ಸಂಗ್ರಹ ಸಾಮರ್ಥ್ಯ – 37.103 ಟಿಎಂಸಿ, ಇಂದಿನ ಸಂಗ್ರಹ ಸಾಮರ್ಥ್ಯ – 17.904 ಟಿಎಂಸಿ, ಬಳಕೆಗೆ ಲಭ್ಯವಿರುವ ನೀರು‌ – 13.565 ಟಿಎಂಸಿ, ಒಳಹರಿವು – 2704 ಸಾವಿರ ಕ್ಯೂಸೆಕ್, ಹೊರಹರಿವು – 1300 ಸಾವಿರ ಕ್ಯೂಸೆಕ್

  • ಹಾರಂಗಿ ಜಲಾಶಯ

ಜಲಾಶಯದ ಗರಿಷ್ಟ ಸಾಮರ್ಥ್ಯ-2859 ಸಾವಿರ ಕ್ಯೂಸೆಕ್, ಇಂದಿನ ಸಾಮರ್ಥ್ಯ – 2856.41 ಸಾವಿರ ಕ್ಯೂಸೆಕ್, ಇಂದಿನ ಒಳಹರಿವು – 1148 ಸಾವಿರ ಕ್ಯೂಸೆಕ್, ಹೊರ ಹರಿವು ನದಿಗೆ- 1600, ನಾಲೆಗೆ -1200 ಕ್ಯೂಸೆಕ್

  • ಆಲಮಟ್ಟಿ ಜಲಾಶಯ (ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ)

ಗರಿಷ್ಟ ಮಟ್ಟ – 519.60 ಅಡಿ, ಇಂದಿನ ನೀರಿನ ಮಟ್ಟ – 518.98 ಅಡಿ, ಒಳ ಹರಿವು – 4,263 ಸಾವಿರ ಕ್ಯೂಸೆಕ್, ಹೊರ ಹರಿವು – 19,321 ಸಾವಿರ ಕ್ಯೂಸೆಕ್, 123.132 ಟಿಎಂಸಿ ನೀರು ಸಂಗ್ರಹದ ಡ್ಯಾಂನಲ್ಲಿ 112.619 ಟಿಎಂಸಿ ನೀರು ಸಂಗ್ರಹವಾಗಿದೆ.

  • ಕೆಆರ್​ಎಸ್ ಜಲಾಶಯ

ಜಲಾಶಯದ ಗರಿಷ್ಠಮಟ್ಟ-124.80 ಅಡಿ, ಇಂದಿನ ಮಟ್ಟ – 96.80 ಅಡಿ, ಒಳಹರಿವು – 6156 ಸಾವಿರ ಕ್ಯೂಸೆಕ್, ಹೊರಹರಿವು – 6511 ಸಾವಿರ ಕ್ಯೂಸೆಕ್

  • ಬಸವ ಸಾಗರ ಜಲಾಶಯ

ಗರಿಷ್ಠ ನೀರಿನ ಮಟ್ಟ – 492.25 ಮೀಟರ್, ಇಂದಿನ ನೀರಿನ ಮಟ್ಟ – 490.91 ಮೀಟರ್, ಒಳ ಹರಿವು – 19503 ಸಾವಿರ ಕ್ಯೂಸೆಕ್, ಹೊರ ಹರಿವು – 9349 ಸಾವಿರ ಕ್ಯೂಸೆಕ್

ವಿಶ್ವ ನದಿಗಳ ದಿನವು ಭೂಮಿಯಲ್ಲಿನ ನದಿಗಳ ಪ್ರಾಮುಖ್ಯತೆ ಬಗ್ಗೆ ಸಾರಿ ಹೇಳುತ್ತದೆ. ಈ ದಿನದಂದು ನದಿಗಳ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ರಕ್ಷಿಸುವುದರ ಬಗ್ಗೆ ತಿಳಿಸಲು ಸೂಕ್ತ ದಿನವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:14 pm, Sun, 24 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ