AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಇರುವುದನ್ನ ಕಂಡು ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದಾಳೆ. ಕಳಪೆ ಅಕ್ಕಿ ಹಾಗೂ ಬೇಳೆ ಬಗ್ಗೆ ವಿದ್ಯಾರ್ಥಿ ನಿ ಮಾಹಿತಿ ನೀಡಿದ್ದು ಇದನ್ನ ನಾವು ಹೇಗೆ ತಿನ್ನೋದು ಅಂತಾ ಪ್ರಶ್ನೆ ಮಾಡಿದ್ದಾಳೆ.

ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿಡಿಯೋ ವೈರಲ್
ಮುಂದಿನ ವಾರದಿಂದಲೇ ಬಿಸಿಯೂಟ ಪುನರಾರಂಭ: ಆದರೆ ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆ! ವಿದ್ಯಾರ್ಥಿನಿ ವಿಡಿಯೋ ವೈರಲ್
TV9 Web
| Edited By: ಸಾಧು ಶ್ರೀನಾಥ್​|

Updated on:Oct 16, 2021 | 1:32 PM

Share

ತುಮಕೂರು: ಇನ್ನೇನು ಮುಂದಿನ ವಾರದಿಂದಲೇ ವರ್ಷಗಳ ಬಳಿಕ ರಾಜ್ಯದಲ್ಲಿ ಶಾಲೆಗಳು ಆರಂಭವಾಗಲಿವೆ. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ಮತ್ತೆ ಜಾರಿ ಮಾಡುವುದಾಗಿ ಸ್ವತಃ ರಾಜ್ಯದ ಶಿಕ್ಷಣ ಸಚಿವರೇ ಹೇಳಿದ್ದಾರೆ. ಆದರೆ ಈ ಮಧ್ಯೆ ಬಿಟಿಯೂಟ ಎಷ್ಟು ಕಳಪೆಯಾಗಿದೆ ಎಂಬುದಕ್ಕೆ ವಿದ್ಯಾರ್ಥಿನಿಯೊಬ್ಬಳು ನಿದರ್ಶನ ಒದಗಿಸಿದ್ದಾಳೆ. ಅದೂ ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಇದನ್ನು ಪತ್ತೆ ಹಚ್ಚಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪ್ರತಿನಿಧಿಸುವ ಅಸೆಂಬ್ಲಿ ಕ್ಷೇತ್ರದಲ್ಲೇ ಹುಳು ಹಿಡಿದ ಆಹಾರ ಪತ್ತೆಯಾಗಿದೆ. ಶಿಕ್ಷಣ ಸಚಿವರ ಕ್ಷೇತ್ರದಲ್ಲಿಯೇ ಹೀಗಾದರೇ ಇನ್ನೂ ರಾಜ್ಯದ ಉಳಿದ ಭಾಗಗಳ ಗತಿಯೇನು? ಸಚಿವರೇ ಇತ್ತ ಗಮನಹರಿಸಿ ಎಂದು ವಿದ್ಯಾರ್ಥಿನಿಯೊಬ್ಬರು ಮಾಡಿರುವ ವಿಡಿಯೋ ಸಂದೇಶ ವೈರಲ್ ಆಗಿದೆ. ಹೌದು‌. ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿನಿಧಿಸುವ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಹುಳು ಹಿಡಿದಿರುವ ಆಹಾರ ಪತ್ತೆಯಾಗಿದೆ. ಬೇಳೆ ಹಾಗೂ ಅಕ್ಕಿಯಲ್ಲಿ ವಿಪರೀತ ಹುಳು ಇರುವ ವಿಡಿಯೋವನ್ನ ವಿದ್ಯಾರ್ಥಿನಿ ವೈರಲ್ ಮಾಡಿದ್ದಾಳೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದ ಆಹಾರದಲ್ಲಿ ಹುಳುಗಳು ಇರುವುದನ್ನ ಕಂಡು ವಿದ್ಯಾರ್ಥಿನಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದಾಳೆ. ಕಳಪೆ ಅಕ್ಕಿ ಹಾಗೂ ಬೇಳೆ ಬಗ್ಗೆ ವಿದ್ಯಾರ್ಥಿ ನಿ ಮಾಹಿತಿ ನೀಡಿದ್ದು ಇದನ್ನ ನಾವು ಹೇಗೆ ತಿನ್ನೋದು ಅಂತಾ ಪ್ರಶ್ನೆ ಮಾಡಿದ್ದಾಳೆ. ಅದರಲ್ಲೂ ಶಿಕ್ಷಣ ಸಚಿವರ ಬಿಸಿ ನಾಗೇಶ್ ಕ್ಷೇತ್ರದಲ್ಲಿಯೇ ಹೀಗಾದರೇ ಇನ್ನು ರಾಜ್ಯದ ಶಾಲೆಗಳ ಗತಿಯೇನು ಅಂತಾ ಆಕ್ಷೇಪ ವ್ಯಕ್ತವಾಗಿದೆ. ಸದ್ಯ ಸಚಿವರು ಇದನ್ನ ಗಮನಹರಿಸಿ ಸರಿಪಡಿಸಲು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಇನ್ನಾದರೂ ಶಾಲೆಗಳಿಗೆ ಉತ್ತಮ ಆಹಾರ ನೀಡಲಿ ಎಂಬುದು ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: ಅಪಾಯದಂಚಿನಲ್ಲಿರುವ ಮನೆ ಮಾಲೀಕರಿಗೆ ನೋಟಿಸ್ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಗೋಪಾಲಯ್ಯ ಸೂಚನೆ

ಇದನ್ನೂ ಓದಿ: ಬೆಂಗಳೂರಲ್ಲಿ ಬಿಬಿಎಂಪಿ ಎಡವಟ್ಟಿಗೆ 9 ವರ್ಷದ ಬಾಲಕ ಬಲಿ!

Another Multi Storey Building Tilts In Bengaluru! ಬೆಂಗಳೂರಿನಲ್ಲಿ ಕುಸಿಯುವ ಹಂತದಲ್ಲಿರುವ 7ಅಂತಸ್ತಿನ ಕಟ್ಟಡ

(worms found in bisi uta in karnataka education minister constituency in tiptur)

Published On - 11:41 am, Sat, 16 October 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು