ಜೆ.ಸಿ.ನಗರದ ಖಬರಸ್ತಾನದಲ್ಲಿ ನಿಸಾರ್ ಅಹಮದ್ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ಪದ್ಮನಾಭನಗರದ ನಿಸಾರ್ ಅಹಮದ್ ನಿವಾಸದ ಬಳಿ ಅಂತಿಮ ದರ್ಶನಕ್ಕಾಗಿ ಅಭಿಮಾನಿಗಳು ಸಾಲಾಗಿ ನಿಂತಿದ್ದಾರೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಸಲಹೆ ನೀಡುತ್ತಿದ್ದಾರೆ. ಕೊರೊನಾ ಲಾಕ್​ಡೌನ್ ಇರುವ ಕಾರಣ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕುಟುಂಬ ನಿರಾಕರಿಸುತ್ತಿದೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ಮಾಡಲು‌ […]

ಜೆ.ಸಿ.ನಗರದ ಖಬರಸ್ತಾನದಲ್ಲಿ ನಿಸಾರ್ ಅಹಮದ್ ಅಂತ್ಯಕ್ರಿಯೆ
ಸಾಧು ಶ್ರೀನಾಥ್​

Updated on: May 03, 2020 | 3:35 PM

ಬೆಂಗಳೂರು: ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರಿನ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಪಾರ್ಥಿವ ಶರೀರದ ಅಂತ್ಯಕ್ರಿಯೆಗೆ ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಪದ್ಮನಾಭನಗರದ ನಿಸಾರ್ ಅಹಮದ್ ನಿವಾಸದ ಬಳಿ ಅಂತಿಮ ದರ್ಶನಕ್ಕಾಗಿ ಅಭಿಮಾನಿಗಳು ಸಾಲಾಗಿ ನಿಂತಿದ್ದಾರೆ. ಮನೆ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಪೊಲೀಸರು ಸಲಹೆ ನೀಡುತ್ತಿದ್ದಾರೆ.

ಕೊರೊನಾ ಲಾಕ್​ಡೌನ್ ಇರುವ ಕಾರಣ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಕುಟುಂಬ ನಿರಾಕರಿಸುತ್ತಿದೆ. ನಾಳೆ ಜೆ.ಸಿ.ನಗರದ ಖಬರಸ್ತಾನದಲ್ಲಿ ಅಂತ್ಯಕ್ರಿಯೆ ಮಾಡಲು‌ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಒಬ್ಬ ಮಗ ದುಬೈನಲ್ಲಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us