AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಪಂಗನಾಮ.. 20.55 ಲಕ್ಷ ರೂ ಪಡೆದು ಆರೋಪಿಗಳು ಎಸ್ಕೇಪ್

ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಒಡ್ಡು ವೈದ್ಯರಿಗೆ ವಂಚಿಸಿದ್ದು ಆರೋಪಿಗಳಾದ ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ ಎಸ್ಕೇಪ್ ಆಗಿದ್ದಾರೆ.

ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಪಂಗನಾಮ.. 20.55 ಲಕ್ಷ ರೂ ಪಡೆದು ಆರೋಪಿಗಳು ಎಸ್ಕೇಪ್
ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ
ಆಯೇಷಾ ಬಾನು
|

Updated on: Jan 06, 2021 | 8:21 AM

Share

ಬಾಗಲಕೋಟೆ: ಎಕ್ಸ್‌-ರೇ ಮಷೀನ್ ಹೆಸರಲ್ಲಿ ವೈದ್ಯರಿಗೆ ಟೋಪಿ ಹಾಕಿ ವಂಚಕರು ಪರಾರಿಯಾಗಿರುವ ಘಟನೆ ಜಿಲ್ಲೆಯ ಪ್ರತಿಷ್ಠಿತ ವಾಸನದ ಆಸ್ಪತ್ರೆಯಲ್ಲಿ ನಡೆದಿದೆ. ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಒಡ್ಡು ವೈದ್ಯರಿಗೆ ವಂಚಿಸಿದ್ದಾರೆ.

ವಿಶ್ವನಾಥ ತೆನಹಳ್ಳಿ, ಪತ್ನಿ ರೂಪಾ ತೆನಹಳ್ಳಿ, ನಾಗರಾಜ ಅಕ್ಕಿ ವಿರುದ್ಧ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು ಮೂವರ ವಿರುದ್ಧ ಬಾಗಲಕೋಟೆ ನಗರ ಠಾಣೆಯಲ್ಲಿ ಬಸವರಾಜ ಹೂಗಾರ ಎಂಬುವವರು ದೂರು ದಾಖಲಿಸಿದ್ದಾರೆ.

ಕ್ಸ್‌-ರೇ ಮಷೀನ್ ಕೊಡಿಸಿ ಲಾಭಾಂಶ ನೀಡುವ ಆಮಿಷ ಬಾಗಲಕೋಟೆ ನಗರದ ವಾಸನದ ಆಸ್ಪತ್ರೆ ವೈದ್ಯರಿಂದ 20.55 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಎಕ್ಸ್‌-ರೇ ಮಷೀನ್ ಹಾಕಿಸಲು ಡೀಲ್ ಮಾಡಲಾಗಿತ್ತು. ವ್ಯವಹಾರದ ಲಾಭಾಂಶದಲ್ಲಿ ಪಾಲು ಕೊಡುವ ಆಮಿಷವೊಡ್ಡಿ ಲಕ್ಷಾಂತರ ರೂ. ಪಡೆದು ವಂಚನೆ ಮಾಡಲಾಗಿದೆಯಂತೆ.

ಆರೋಪಿ ವಿಶ್ವನಾಥ ತೆನಹಳ್ಳಿ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಅನೇಕ ವೈದ್ಯರನ್ನು ಪರಿಚಯ ಮಾಡಿಕೊಂಡಿದ್ದ. ವೈದ್ಯರ ಪರಿಚಯದ ಬಳಿಕ ವಿವಿಧ ಕಡೆ ದುಡ್ಡು ಪಡೆದು ಎಸ್ಕೇಪ್ ಆಗಿದ್ದಾನೆ. ಆರೋಪಿಗಳು ಅಂದಾಜು ಎರಡು ಕೋಟಿಯಷ್ಟು ಹಣ ಪಡೆದು ವಂಚಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ವಾಸನದ ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಬಸವರಾಜ ಹೂಗಾರ ಬಾಗಲಕೋಟೆ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದು ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಬೆಂಗಳೂರಲ್ಲಿ IMA ಅಕ್ರಮದ ಮಾದರಿಯಲ್ಲೇ ಮತ್ತೊಂದು ಬಹುಕೋಟಿ ವಂಚನೆ ಬಯಲಿಗೆ!

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ