AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದ ಒಂದೇ ಕುಟುಂಬದ 7 ಜನರು ಹಿಂದು ಧರ್ಮಕ್ಕೆ ಘರ್ ವಾಪಸ್ಸಿ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ 7 ಜನ ಹಿಂದು ಧರ್ಮಕ್ಕೆ ಘರ್ ವಾಪಸ್ಸಿ ಆಗಿರುವಂತಹ ಘಟನೆ ತಾಲೂಕಿನ ಸೈದಾಪುರ ಗ್ರಾಮದ ಬಸವೇಶ್ವರ ದೇವಸ್ಥಾ‌ನದಲ್ಲಿ ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದ ಒಂದೇ ಕುಟುಂಬದ 7 ಜನರು ಹಿಂದು ಧರ್ಮಕ್ಕೆ ಘರ್ ವಾಪಸ್ಸಿ
7 ಜನ ಹಿಂದು ಧರ್ಮಕ್ಕೆ ಘರ್ ವಾಪಸ್ಸಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 12, 2023 | 7:50 PM

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರ (converte) ಗೊಂಡಿದ್ದ 7 ಜನ ಹಿಂದು (Hinduism) ಧರ್ಮಕ್ಕೆ ಘರ್ ವಾಪಸ್ಸಿ ಆಗಿರುವಂತಹ ಘಟನೆ ತಾಲೂಕಿನ ಸೈದಾಪುರ ಗ್ರಾಮದ ಬಸವೇಶ್ವರ ದೇವಸ್ಥಾ‌ನದಲ್ಲಿ ನಡೆದಿದೆ. ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಕ್ರೈಸ್ತ ಕುಟುಂಬವನ್ನು ಮಾತೃ ಧರ್ಮಕ್ಕೆ ಘರ್ ವಾಪಸ್ಸಿ ಮಾಡಲಾಗಿದೆ. ಘರ್ ವಾಪಸ್ಸಿ ಆದವರಿಗೆ ವಿ.ಹೆಚ್.ಪಿ ಮುಖಂಡರು ಹಣೆಗೆ ವಿಭೂತಿ ಹಾಗೂ ಕುಂಕುಮ ಹಚ್ಚಿ ಹಿಂದು ಧರ್ಮಕ್ಕೆ ಸ್ವಾಗತಿಸಿದರು. ಹಿಂದು ಧರ್ಮದ ಸಂಸ್ಕೃತಿಯೊಂದಿಗೆ ಮರಳಿ ಮಾತೃ ಧರ್ಮಕ್ಕೆ ವಾಪಸ್ ಆಗಿದ್ದಾರೆ. 2019 ರಲ್ಲಿ ಒಂದೆ ಕುಟುಂಬದ 7 ಜನರು ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಸೀನು, ಸಾವಿತ್ರಮ್ಮ, ರೇಷಮ್ಮ, ಗಂಗಪ್ಪ, ಮಾರೆಮ್ಮ, ರಾಮಸ್ವಾಮಿ ಹಾಗೂ ಸರೋಜಮ್ಮ ಹಿಂದು ಧರ್ಮಕ್ಕೆ ಮರಳಿದವರು.

ಒಂದೆ ಕುಟುಂಬದ 7 ಜನರು ಕ್ರೈಸ್ತ ಧರ್ಮಕ್ಕೆ ಮತಾಂತರ

ಘರ್ ವಾಪಸ್ ಆದ 7 ಜನರು ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಯಲಸತ್ತಿ ಗ್ರಾಮದವರು ಎನ್ನಲಾಗುತ್ತಿದೆ. ಬುಡಗ ಜಂಗಮ ಸಮುದಾಯದ ಮುಖಂಡರ ಮನವೋಲಿಕೆಯಿಂದ ಮಾತೃಧರ್ಮಕ್ಕೆ ವಾಪಸ್ ಆಗಿದ್ದಾರೆ. ಮತಾಂತರವಾಗಿದ್ದ ಕುಟುಂಬ ಬುಡಗ ಜಂಗಮ ಸಮೂದಾಯಕ್ಕೆ ಸೇರಿದ ಕುಟುಂಬವಾಗಿದೆ. ನಾವು ಮೂಲತಃ ಹಿಂದು ಧರ್ಮದವರು. 3-4 ವರ್ಷದ ಹಿಂದೆ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ವಿ. ಪ್ರತಿ ರವಿವಾರ ಚರ್ಚ್​ಗೆ ಬರಬೇಕು ಎಂದು ಹೇಳಿದ್ರು ಎಂದು ಮತಾಂತರಕ್ಕೆ ಒಳಗಾದ ಬಗ್ಗೆ ಹೇಳಿದರು. ಈಗ ನಮಗೆ ಮತ್ತೆ ವಾಪಸ್ ಮಾತೃ ಧರ್ಮಕ್ಕೆ ಬಂದಿರುವುದು ಸಂತೋಷವಾಗಿದೆ ಎಂದು ಸೀನು ಹೇಳಿದರು.

ಇದನ್ನೂ ಓದಿ: ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲೊಂದು ಅಮಾನುಷ ಘಟನೆ: ವೈದ್ಯರ ನಿರ್ಲಕ್ಷ್ಯದಿಂದ ಕಾರಿಡಾರ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಹಿಂದು ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿದ ನೂರಾರು ಜನ 

ಇತ್ತೀಚೆಗೆ ಇದೇ ಜಿಲ್ಲೆಯಲ್ಲಿ ಹಿಂದು ಧರ್ಮ ತ್ಯಜಿಸಿ ದಲಿತ ಸಮುದಾಯದ ನೂರಾರು ಜನ ಬೌದ್ಧ ಧರ್ಮ ಸ್ವೀಕರ ಮಾಡಿರುವಂತಹ ಘಟನೆ ಜಿಲ್ಲೆಯ ಸುರಪುರ ನಗರದಲ್ಲಿ ನಡೆದಿತ್ತು. ಬಿ.ಆರ್.ಅಂಬೇಡ್ಕರ್ ಮೊಮ್ಮಗಳಾದ ರಮಾಬಾಯಿ ನೇತೃತ್ವದಲ್ಲಿ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಕಾರ್ಯಕ್ರಮ ನಡೆದಿತ್ತು. ನೂರಾರು ಜನರಿಗೆ ವರಜ್ಯೋತಿ ಬಂತೆಜೀ ಸಾನಿಧ್ಯದಲ್ಲಿ ಬೌದ್ಧ ಧಮ್ಮ ದೀಕ್ಷೆ ನೀಡಲಾಯಿತು. ಹಿಂದು ಧರ್ಮದಲ್ಲಿ ಕೀಳಾಗಿ ಕಾಣುತ್ತಿರುವ ಹಿನ್ನಲೆ ದೀಕ್ಷೆ ಪಡೆಯಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೌದ್ಧ ಧರ್ಮಕ್ಕೆ ಸೇರಲು ಮುಂದಾದ ಹಲವರು: ಹಿಂದೂ ದೇವರ ಫೋಟೋಗಳು ಕೃಷ್ಣಾ ನದಿ ಪಾಲು

ತ್ರಿಸರಣ ಪಂಚಶೀಲ, ಅಷ್ಟಾಂಗ ಮಾರ್ಗ ಮತ್ತು ಅಂಬೇಡ್ಕರ್ ಪ್ರತಿಪಾಧಿಸಿದ 22 ಪ್ರತಿಜ್ಞಾ ವಿಧಿಗಳನ್ನ ಬೋಧಿಸಲಾಯಿತು. ಪ್ರತಿಜ್ಞಾ ವಿಧಿ ಪಡೆದು ಹಿಂದೂ ಧರ್ಮಕ್ಕೆ ವಿದಾಯ ಹೇಳಿ ಬೌದ್ಧ ಧರ್ಮ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕರು ಬೌದ್ಧ ಧರ್ಮ ಸ್ವೀಕರ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 pm, Thu, 12 January 23

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ