ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು

| Updated By: ವಿವೇಕ ಬಿರಾದಾರ

Updated on: Oct 02, 2022 | 5:22 PM

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
ವಿದ್ಯುತ್​ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು
Follow us on

ಯಾದಗಿರಿ: ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವನ್ನಪ್ಪಿರುವ ಘಟನೆ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು. ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.  ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲಿ ಬಡಿದು ಆಕಳು ಸಾವು

ವಿಜಯಪುರ: ಸಿಡಿಲಿ ಬಡಿದು ಆಕಳು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಕೇಶ್ವಾಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಜಲಕಮದಿನ್ನಿ ಎಂಬುವರಿಗೆ ಸೇರಿದ ಆಕಳು ಮೃತಪಟ್ಟಿದೆ. ರೈತ ಮನೆಯ ಎದುರು ಆಕಳನ್ನು ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಸಾವನ್ನಪ್ಪಿದೆ. ಸೂಕ್ತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯಿಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Sun, 2 October 22