AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ

ಅವರಿಬ್ಬರು ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಇದೀಗ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಮೇಲ್ಚಾತಿಯ ಯುವತಿಗೆ ಕೆಳ ಜಾತಿಯ ಯುವಕ ಮದುವೆಯಾಗುತ್ತಿದ್ದ ಹಿನ್ನಲೆ ಯುವತಿ ಮನೆಯಿಂದ ವಿರೋಧ ವ್ಯಕ್ತವಾಗಿದೆ. ಇದೆ ಕಾರಣಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸರ ಮೊರೆ ಹೋಗಿದ್ದಾರೆ.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ
ಅಂತರ್ಜಾತಿ ವಿವಾಹಕ್ಕೆ ಮನೆಯವರ ಅಡ್ಡಿ;ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್ ಮೊರೆ
ಅಮೀನ್​ ಸಾಬ್​
| Edited By: |

Updated on: Jul 17, 2024 | 7:38 PM

Share

ಯಾದಗಿರಿ, ಜು.17: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ ಹಿನ್ನಲೆ ಪ್ರೇಮಿಗಳಿಬ್ಬರು(Lovers) ಪೊಲೀಸರ ಮೊರೆ ಹೋದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಮೇಲ್ಜಾತಿಯ ಯುವತಿ ಜೊತೆ ಕೆಳ ಜಾತಿಯ ಯುವಕ ಮದುವೆಯಾಗಲು ಹೊರಟಿದ್ದಾನೆ ಎಂಬ ಕಾರಣಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಇನ್ನು ಯಾದಗಿರಿ(Yadgiri) ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ರವಿಕಿರಣ್ ಎಂಬಾತ್ ಧಾರವಾಡ ಮೂಲದ ಸುಪ್ರೀತಾ ಎಂಬಾಕೆಯನ್ನ ಪ್ರೀತಿಸುತ್ತಿದ್ದಾನೆ. ಪರಸ್ಪರ ಪ್ರೀತಿ ಮಾಡಿದ ಜೋಡಿ ಈಗ ಮದುವೆಗೆ ಮುಂದಾಗಿದೆ. ಆದ್ರೆ, ಯುವಕ ದಲಿತ ಸಮುದಾಯಕ್ಕೆ ಸೇರಿದ್ರೆ, ಯುವತಿ ಜಂಗಮ ಸಮುದಾಯಕ್ಕೆ ಸೇರಿದ್ದಾಳೆ. ಇದೆ ಕಾರಣಕ್ಕೆ ಯುವತಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ಮೇಲ್ನೋಟಕ್ಕೆ ಮದುವೆ ಮಾಡಿಸುತ್ತೆವೆ ಎಂದು ಹೇಳುತ್ತಿದ್ದಾರೆ. ಆದರೆ ಮದುವೆ ಹೆಸರಲ್ಲಿ ಏನಾದರೂ ಮಾಡುತ್ತಾರೆ ಎಂದು ಪ್ರೇಮಿಗಳಿಗೆ ಭಯ ಶುರುವಾಗಿದೆ.

ಯಾದಗಿರಿ ಮೂಲದ ರವಿಕಿರಣ್ ಸಹೋದರ ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸುಪ್ರೀತಾ ಕೂಡ ಪದವಿ ಓದುತ್ತಿದ್ದಾಳೆ. ಸಹೋದರನನ್ನ ನೋಡಿಕೊಂಡು ಮಾತಾಡಿಸಲು ಹೋದಾಗ ರವಿಕಿರಣ್​ಗೆ ಸುಪ್ರೀತಾ ಪರಿಚಯವಾಗಿದ್ದಾಳೆ. ಇದೆ ವೇಳೆ ಪರಿಚಯ ಸ್ನೇಹಕ್ಕೆ ತಿರುಗಿದೆ. ಕೆಲ ತಿಂಗಳುಗಳ ಬಳಿಕ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಹೀಗಾಗಿ ಪರಸ್ಪರ ಫೋನ್​ನಲ್ಲಿ ಕಳೆದ ಒಂದು ವರ್ಷದಿಂದ ಮಾತಾಡುತ್ತಾ ಬಂದಿದ್ದಾರೆ. ಕೊನೆಗೆ ಇಬ್ಬರು ಮದುವೆಯಾಗಲು ಸಹ ಸಿದ್ದರಾಗಿದ್ದರು. ಈ ವಿಚಾರ ಸುಪ್ರೀತಾ ಪೋಷಕರ ಮುಂದೆ ಹೇಳಿದ್ದಾಳೆ. ಆದ್ರೆ, ಪೋಷಕರು ಯುವಕ ಕೆಳ ಜಾತಿಗೆ ಸೇರಿದ್ದರಿಂದ ಮದುವೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಕೊನೆಗೆ ಇಬ್ಬರು ಮನೆ ಬಿಟ್ಟು ಬಂದು ಮದುವೆಯಾಗಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

ಮನೆ ಬಿಟ್ಟು ಬಂದ ಯುವತಿ

ಬಿಕಾಂ ಎರಡನೇ ಸೆಮಿಸ್ಟರ್​ನಲ್ಲಿ ಓದುತ್ತಿರುವ ಸುಪ್ರೀತಾ ಕಳೆದ ಎರಡು ದಿನಗಳ ಹಿಂದೆ, ಪದವಿ ಮುಗಿಸಿರುವ ರವಿಕಿರಣ್ ಜೊತೆಗೆ ಮದುವೆ ಮಾಡಿಕೊಳ್ಳಲು ಧಾರವಾಡದಿಂದ ಯಾದಗಿರಿಗೆ ಮನೆ ಬಿಟ್ಟು ಬಂದಿದ್ದಾಳೆ. ಆದ್ರೆ, ಪೋಷಕರು ಮದುವೆಗೆ ಅಡ್ಡಿ ಪಡಿಸುತ್ತಾರೆ, ಮುಂದೆ ಜೀವಕ್ಕೆ ಹಾನಿಯುಂಟು ಮಾಡುತ್ತಾರೆ ಎನ್ನುವ ಭಯ ಈಗ ಪ್ರೇಮಿಗಳಿಗೆ ಕಾಡುತ್ತಿದೆ. ಹೀಗಾಗಿ ಪೊಲೀಸರ ಮೊರೆ ಹೋಗಿರುವ ಜೋಡಿ, ನಮಗೆ ರಕ್ಷಣೆ ಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಜಾತಿ ಎಂದು ಹೊಡೆದಾಡುವ ಕಾಲದಲ್ಲಿ ಯುವ ಪ್ರೇಮಿಗಳು ಜಾತಿಯ ಸರಪಳಿಯನ್ನ ಹರಿದು ಪ್ರೀತಿಸಿ ಮದುವೆಗೆ ಮುಂದಾಗಿದ್ದಾರೆ. ಆದ್ರೆ, ಪೋಷಕರು ಮುಂದೆ ಏನಾದರೂ ಮಾಡಬಹುದು ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಹೀಗಾಗಿ ಪೊಲೀಸರು ಪ್ರೇಮಿಗಳಿಗೆ ರಕ್ಷಣೆ ಕೊಡುವ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ