AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ

ಅವರಿಬ್ಬರು ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದಾರೆ. ಇದೀಗ ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಆದರೆ, ಇಬ್ಬರ ಜಾತಿ ಬೇರೆ ಬೇರೆಯಾಗಿದ್ದರಿಂದ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಮೇಲ್ಚಾತಿಯ ಯುವತಿಗೆ ಕೆಳ ಜಾತಿಯ ಯುವಕ ಮದುವೆಯಾಗುತ್ತಿದ್ದ ಹಿನ್ನಲೆ ಯುವತಿ ಮನೆಯಿಂದ ವಿರೋಧ ವ್ಯಕ್ತವಾಗಿದೆ. ಇದೆ ಕಾರಣಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸರ ಮೊರೆ ಹೋಗಿದ್ದಾರೆ.

ಪ್ರೇಮಿಗಳಿಬ್ಬರ ಮದುವೆಗೆ ಅಡ್ಡಿಯಾದ ಜಾತಿ; ಮನೆಯವರ ವಿರೋಧಕ್ಕೆ ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್​ ಮೊರೆ
ಅಂತರ್ಜಾತಿ ವಿವಾಹಕ್ಕೆ ಮನೆಯವರ ಅಡ್ಡಿ;ರಕ್ಷಣೆ ಕೋರಿ ಯುವ ಜೋಡಿ ಪೊಲೀಸ್ ಮೊರೆ
ಅಮೀನ್​ ಸಾಬ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 17, 2024 | 7:38 PM

Share

ಯಾದಗಿರಿ, ಜು.17: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ ಹಿನ್ನಲೆ ಪ್ರೇಮಿಗಳಿಬ್ಬರು(Lovers) ಪೊಲೀಸರ ಮೊರೆ ಹೋದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಮೇಲ್ಜಾತಿಯ ಯುವತಿ ಜೊತೆ ಕೆಳ ಜಾತಿಯ ಯುವಕ ಮದುವೆಯಾಗಲು ಹೊರಟಿದ್ದಾನೆ ಎಂಬ ಕಾರಣಕ್ಕೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದೆ. ಇನ್ನು ಯಾದಗಿರಿ(Yadgiri) ಜಿಲ್ಲೆಯ ಶಹಾಪುರ ತಾಲೂಕಿನ ಹುಲಕಲ್ ಗ್ರಾಮದ ರವಿಕಿರಣ್ ಎಂಬಾತ್ ಧಾರವಾಡ ಮೂಲದ ಸುಪ್ರೀತಾ ಎಂಬಾಕೆಯನ್ನ ಪ್ರೀತಿಸುತ್ತಿದ್ದಾನೆ. ಪರಸ್ಪರ ಪ್ರೀತಿ ಮಾಡಿದ ಜೋಡಿ ಈಗ ಮದುವೆಗೆ ಮುಂದಾಗಿದೆ. ಆದ್ರೆ, ಯುವಕ ದಲಿತ ಸಮುದಾಯಕ್ಕೆ ಸೇರಿದ್ರೆ, ಯುವತಿ ಜಂಗಮ ಸಮುದಾಯಕ್ಕೆ ಸೇರಿದ್ದಾಳೆ. ಇದೆ ಕಾರಣಕ್ಕೆ ಯುವತಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ಮೇಲ್ನೋಟಕ್ಕೆ ಮದುವೆ ಮಾಡಿಸುತ್ತೆವೆ ಎಂದು ಹೇಳುತ್ತಿದ್ದಾರೆ. ಆದರೆ ಮದುವೆ ಹೆಸರಲ್ಲಿ ಏನಾದರೂ ಮಾಡುತ್ತಾರೆ ಎಂದು ಪ್ರೇಮಿಗಳಿಗೆ ಭಯ ಶುರುವಾಗಿದೆ.

ಯಾದಗಿರಿ ಮೂಲದ ರವಿಕಿರಣ್ ಸಹೋದರ ಧಾರವಾಡದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸುಪ್ರೀತಾ ಕೂಡ ಪದವಿ ಓದುತ್ತಿದ್ದಾಳೆ. ಸಹೋದರನನ್ನ ನೋಡಿಕೊಂಡು ಮಾತಾಡಿಸಲು ಹೋದಾಗ ರವಿಕಿರಣ್​ಗೆ ಸುಪ್ರೀತಾ ಪರಿಚಯವಾಗಿದ್ದಾಳೆ. ಇದೆ ವೇಳೆ ಪರಿಚಯ ಸ್ನೇಹಕ್ಕೆ ತಿರುಗಿದೆ. ಕೆಲ ತಿಂಗಳುಗಳ ಬಳಿಕ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಹೀಗಾಗಿ ಪರಸ್ಪರ ಫೋನ್​ನಲ್ಲಿ ಕಳೆದ ಒಂದು ವರ್ಷದಿಂದ ಮಾತಾಡುತ್ತಾ ಬಂದಿದ್ದಾರೆ. ಕೊನೆಗೆ ಇಬ್ಬರು ಮದುವೆಯಾಗಲು ಸಹ ಸಿದ್ದರಾಗಿದ್ದರು. ಈ ವಿಚಾರ ಸುಪ್ರೀತಾ ಪೋಷಕರ ಮುಂದೆ ಹೇಳಿದ್ದಾಳೆ. ಆದ್ರೆ, ಪೋಷಕರು ಯುವಕ ಕೆಳ ಜಾತಿಗೆ ಸೇರಿದ್ದರಿಂದ ಮದುವೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ ಕೊನೆಗೆ ಇಬ್ಬರು ಮನೆ ಬಿಟ್ಟು ಬಂದು ಮದುವೆಯಾಗಲು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

ಮನೆ ಬಿಟ್ಟು ಬಂದ ಯುವತಿ

ಬಿಕಾಂ ಎರಡನೇ ಸೆಮಿಸ್ಟರ್​ನಲ್ಲಿ ಓದುತ್ತಿರುವ ಸುಪ್ರೀತಾ ಕಳೆದ ಎರಡು ದಿನಗಳ ಹಿಂದೆ, ಪದವಿ ಮುಗಿಸಿರುವ ರವಿಕಿರಣ್ ಜೊತೆಗೆ ಮದುವೆ ಮಾಡಿಕೊಳ್ಳಲು ಧಾರವಾಡದಿಂದ ಯಾದಗಿರಿಗೆ ಮನೆ ಬಿಟ್ಟು ಬಂದಿದ್ದಾಳೆ. ಆದ್ರೆ, ಪೋಷಕರು ಮದುವೆಗೆ ಅಡ್ಡಿ ಪಡಿಸುತ್ತಾರೆ, ಮುಂದೆ ಜೀವಕ್ಕೆ ಹಾನಿಯುಂಟು ಮಾಡುತ್ತಾರೆ ಎನ್ನುವ ಭಯ ಈಗ ಪ್ರೇಮಿಗಳಿಗೆ ಕಾಡುತ್ತಿದೆ. ಹೀಗಾಗಿ ಪೊಲೀಸರ ಮೊರೆ ಹೋಗಿರುವ ಜೋಡಿ, ನಮಗೆ ರಕ್ಷಣೆ ಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಜಾತಿ ಎಂದು ಹೊಡೆದಾಡುವ ಕಾಲದಲ್ಲಿ ಯುವ ಪ್ರೇಮಿಗಳು ಜಾತಿಯ ಸರಪಳಿಯನ್ನ ಹರಿದು ಪ್ರೀತಿಸಿ ಮದುವೆಗೆ ಮುಂದಾಗಿದ್ದಾರೆ. ಆದ್ರೆ, ಪೋಷಕರು ಮುಂದೆ ಏನಾದರೂ ಮಾಡಬಹುದು ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಹೀಗಾಗಿ ಪೊಲೀಸರು ಪ್ರೇಮಿಗಳಿಗೆ ರಕ್ಷಣೆ ಕೊಡುವ ಭರವಸೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?