AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಡ್ಡಿ ಪಂದ್ಯದ ವೇಳೆ ತಪ್ಪು ತೀರ್ಪು ನೀಡಿದ ಆರೋಪ; ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಯುವಕ

ಯಾದಗಿರಿ ತಾಲೂಕಿನ ವನಗೇರ ಹಾಗೂ ಗುರುಮಠಕಲ್‌ ತಾಲೂಕಿನ ಎಲ್ಹೇರಿ ಗ್ರಾಮದ ಶಾಲೆಗಳ ಮದ್ಯೆ ಕಬ್ಬಡಿ ಪಂದ್ಯ ನಡೆದಿತ್ತು. ಈ ವೇಳೆ ಎಲ್ಹೇರಿ ತಂಡದ ಪರ ತಪ್ಪು ತೀರ್ಪು ನೀಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಕೊರಳ ಪಟ್ಟಿ ಹಿಡಿದು ಶಿಕ್ಷಕನ ಮೇಲೆ‌ ಹಲ್ಲೆ ನಡೆಸಿದ್ದ.

ಕಬ್ಬಡ್ಡಿ ಪಂದ್ಯದ ವೇಳೆ ತಪ್ಪು ತೀರ್ಪು ನೀಡಿದ ಆರೋಪ; ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಯುವಕ
ಯಾದಗಿರಿ
ಅಮೀನ್​ ಸಾಬ್​
| Edited By: |

Updated on: Sep 26, 2023 | 8:43 PM

Share

ಯಾದಗಿರಿ, ಸೆ.26: ಒಂದು ಕಾಲದಲ್ಲಿ ಶಿಕ್ಷಕರನ್ನು ಕಂಡರೆ ವಿದ್ಯಾರ್ಥಿಗಳು ಮಾರುದ್ದ ಹೆದರಿ ನಿಲ್ಲುತ್ತಿದ್ದರು. ಇಂದು ವಿದ್ಯೆ ಕಲಿಸಿದ ಗುರುಗಳನ್ನೆ ದಂಡಿಸುವ ಮಟ್ಟಕ್ಕೆ ಹೋಗುತ್ತಿದ್ದಾರೆ. ಹೌದು, ಅದರಂತೆ ತಪ್ಪು ತೀರ್ಪು ನೀಡಿದ ಆರೋಪದ ಮೇಲೆ ಯುವಕನೊಬ್ಬ ದೈಹಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗಿರಿ(Yadagiri) ಯಲ್ಲಿ ನಡೆದಿದೆ. ಹೌದು, ಇಂದು(ಸೆ.26) ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಘಟನೆ ನಡೆದಿದೆ.

ಹಲ್ಲೆ ನಡೆಸಿದ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯರು

ಹೌದು, ಯಾದಗಿರಿ ತಾಲೂಕಿನ ವನಗೇರ ಹಾಗೂ ಗುರುಮಠಕಲ್‌ ತಾಲೂಕಿನ ಎಲ್ಹೇರಿ ಗ್ರಾಮದ ಶಾಲೆಗಳ ಮದ್ಯೆ ಕಬ್ಬಡಿ ಪಂದ್ಯ ನಡೆದಿತ್ತು. ಈ ವೇಳೆ ಎಲ್ಹೇರಿ ತಂಡದ ಪರ ತಪ್ಪು ತೀರ್ಪು ನೀಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಕೊರಳ ಪಟ್ಟಿ ಹಿಡಿದು ಶಿಕ್ಷಕನ ಮೇಲೆ‌ ಹಲ್ಲೆ ನಡೆಸಿದ್ದ. ಬಳಿಕ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ ಯುವಕನಿಗೆ ಅಲ್ಲಿಯೇ ಇದ್ದ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದೆ. ಈ ಘಟನೆ ಯಾದಗಿರಿ ನಗರ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಯಲಹಂಕ: ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಖಾಸಗಿ ಶಾಲಾ ಶಿಕ್ಷಕನಿಂದ ಹಲ್ಲೆ, ಆರೋಪಿ ಅರೆಸ್ಟ್

ರಜೆಗೆ ಬಂದಿದ್ದ ಯೋಧನಿಂದ ಗುಂಡು ಹಾರಿಸಿ ಕೊಲೆಗೆ ಯತ್ನ

ಬೆಳಗಾವಿ: ಸಾಲ ವಾಪಾಸ್ ಕೊಡದಿದ್ದಕ್ಕೆ ರಜೆಗೆ ಬಂದಿದ್ದ ಯೋಧನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ. ಯೋಧ ನಂಜುಂಡಿ ಬೂದಿಹಾಳ ಎಂಬಾತ ಭಾರತೀಯ ಸೇನೆಯಲ್ಲಿರುವ ಬಸಪ್ಪ ಬಂಬರಗಾ(32)ಗೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾನೆ. ಆತನನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ಲಕ್ಷ ಹಣದ ವಿಚಾರಕ್ಕೆ ನಡೆದ ಗಲಾಟೆ ಇದಾಗಿದ್ದು, ಮಾತಿಗೆ ಮಾತು ಬೆಳೆದು ಈ ದುರ್ಘಟನೆ ನಡೆದಿದೆ. ಇನ್ನು ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿ ನಂಜುಂಡಿಯನ್ನು ಅಂಕಲಗಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ