AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadagir News: ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ: ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡ್ನಾಪ್ ಆರೋಪ

ಹಾಡಹಾಗಲೇ ಇಬ್ಬರು ಗ್ರಾಮ ಪಂಚಾಯತ್​ ಮಹಿಳಾ ಸದಸ್ಯೆಯರ ಅಪಹರಣ ಮಾಡಿರುವಂತಹ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದ್ದು, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡ್ನಾಪ್ ಆರೋಪ ಕೇಳಿಬಂದಿದೆ.

Yadagir News: ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ: ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡ್ನಾಪ್ ಆರೋಪ
ಯಾದಗಿರಿ ನಗರ ಠಾಣೆ
ಗಂಗಾಧರ​ ಬ. ಸಾಬೋಜಿ
|

Updated on:Jun 22, 2023 | 8:03 PM

Share

ಯಾದಗಿರಿ: ಹಾಡಹಾಗಲೇ ಇಬ್ಬರು ಗ್ರಾಮ ಪಂಚಾಯತ್​ ಮಹಿಳಾ ಸದಸ್ಯೆಯರ ಅಪಹರಣ (Abduction) ಮಾಡಿರುವಂತಹ ಘಟನೆ ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದಲ್ಲಿ ನಡೆದಿದೆ. ಸುರಪುರ ತಾಲೂಕಿನ ನಗನೂರು ಗ್ರಾಮ ಪಂಚಾಯತ್​ ಸದಸ್ಯೆಯರಾದ ಖಾನಾಪುರ ಗ್ರಾಮದ ನೀಲಗಂಗಮ್ಮ, ಫಾತಿಮಾ ಅಪಹರಣಕ್ಕೊಳಗಾದವರು. ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಆಯ್ಕೆ ವೇಳೆ ಕೃತ್ಯ ನಡೆದಿದೆ.

ಸಚಿವ ಶರಣಬಸಪ್ಪ ದರ್ಶನಾಪುರ ಸ್ವಕ್ಷೇತ್ರದಲ್ಲೇ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡ್ನಾಪ್ ಆರೋಪ ಮಾಡಲಾಗಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಮಹಾಂತಗೌಡ ಪೊಲೀಸ್ ಪಾಟೀಲ, ಅನಂತರೆಡ್ಡಿ ಕೆಂಚಗೌಡ್ರ, ಕಾಂಗ್ರೆಸ್ ಮುಖಂಡ ಶರಣಗೌಡ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಅಪಹರಣಕ್ಕೊಳಗಾದ ಸದಸ್ಯೆಯರ ಪತಿಯಂದಿರು ದೂರು ನೀಡಿದ್ದಾರೆ.

ಇದನ್ನೂ ಓದಿ: ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಸಿದ ವಿಜಯ್ ಭಾಸ್ಕರ್​: ಅನುಷ್ಠಾನ ಭರವಸೆ ನೀಡಿದ ಸಚಿವ ಗುಂಡೂರಾವ್

ಶಾಲೆಗೆ ಹೋಗುತ್ತಿದ್ದ ಬಾಲಕ ಅಪಹರಣ: ಇಬ್ಬರ ಬಂಧನ

ಕಲಬುರಗಿ: ಶಾಲೆಗೆ ಹೋಗುತ್ತಿದ್ದ ಬಾಲಕನನ್ನು ಅಪಹರಿಸಿದ್ದ ಪ್ರಕರಣ ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಲಬುರಗಿಯ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ಭಜಂತ್ರಿ ಮತ್ತು ಲಕ್ಷ್ಮಣ ಭಜಂತ್ರಿ ಬಂಧಿತರು.

ಸರ್ಕಾರಿ ಶಾಲಾ ಶಿಕ್ಷಕನ ಮಗ ಸುರ್ಶನನನ್ನು ಸಿದ್ದೇಶ್ವರ ಕಾಲೋನಿಯಲ್ಲಿ ಜನವರಿ 4ರಂದು ಕಿಡ್ನಾಪ್​ ಮಾಡಿ 10 ಲಕ್ಷಕ್ಕೆ ಡಿಮ್ಯಾಂಡ್ ಇಡಲಾಗಿತ್ತು. ಮಾಹಿತಿ ತಿಳಿದ ಪೊಲೀಸರು ಕಾರ್ಯಾಚರಣೆಗೆ ನಡೆಸಿ ಬಾಲಕನ್ನು ರಕ್ಷಿಸಿದ್ದರು.

ಕಾಂಗ್ರೆಸ್​ ಕಾರ್ಯಕರ್ತರ ಕಿಡ್ನಾಪ್: ಎಫ್ಐಆರ್ ದಾಖಲು

ಬೆಂಗಳೂರು: 2023 ರ ಸಾರ್ವತ್ರಿಕ ಚುನಾವಣೆ ವೇಳೆ ಕಾಂಗ್ರೆಸ್​ ಕಾರ್ಯಕರ್ತರ ಕಿಡ್ನಾಪ್​ ಮಾಡಲಾಗಿತ್ತು. ಸದ್ಯ ಈ ಕುರಿತಾಗಿ ಕಾಂಗ್ರೆಸ್​ ಕಾರ್ಯಕರ್ತರಾದ ವಿಜಯ್ ಕುಮಾರ್, ಉದಯ್ ಎಂಬುವರ ದೂರು ಆಧರಿಸಿ ನಗರದ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿವಾದಕ್ಕೆ ಕಾರಣವಾಯ್ತೇ ಶಾಸಕರ ತರಬೇತಿ ಶಿಬಿರ? ಸಂಪನ್ಮೂಲ ವ್ಯಕ್ತಿಗಳ ಮರುಪರಿಶೀಲನೆಗೆ ಆಗ್ರಹ

ಕಾಂಗ್ರೆಸ್​ ಪರ ಕೆಲಸ ಮಾಡದಂತೆ ರೌಡಿಶೀಟರ್ಸ್ ಮನೋಜ್, ಕೆಂಚನ ಗ್ಯಾಂಗ್​​ನಿಂದ ಕಿಡ್ನಾಪ್​​ ಮಾಡಿ ಲಾಡ್ಜ್​​ನಲ್ಲಿ ಕೂಡಿ ಹಾಕಿದ್ದ ಆರೋಪ ಮಾಡಿದ್ದಾರೆ. ಮೇ 9 ರಂದು ಯಶವಂತಪುರ ವೃತ್ತದ ಬಳಿ ಕಿಡ್ನಾಪ್​ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:50 pm, Thu, 22 June 23

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್