AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ಬಳಿ ಹಣ ಪಡೆದು ಸಂಧಾನ ಮಾಡಿಕೊಂಡಿರುವುದಾಗಿ ಪಿಎಸ್​ಐ ಪರಶುರಾಮ ಕುಟುಂಬಸ್ಥರ ವಿರುದ್ಧ ಆರೋಪ

ಯಾದಗಿರಿ ಪಿಎಸ್​ಐ ಪರಶುರಾಮ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಐಡಿಯಿಂದ ತನಿಖೆ ಚುರುಕುಗೊಂಡಿದೆ. ಆದರೆ, ಪರಶುರಾಮ ಅವರ ಸಾವಿನ ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳಿಂದ ಹಣ ಪಡೆದು ಪರಶುರಾಮ ಅವರ ಮಾವ ಸಂಧಾನ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆರೋಪಿಗಳ ಬಳಿ ಹಣ ಪಡೆದು ಸಂಧಾನ ಮಾಡಿಕೊಂಡಿರುವುದಾಗಿ ಪಿಎಸ್​ಐ ಪರಶುರಾಮ ಕುಟುಂಬಸ್ಥರ ವಿರುದ್ಧ ಆರೋಪ
ಪಿಎಸ್‌ಐ ಪರಶುರಾಮ
ಅಮೀನ್​ ಸಾಬ್​
| Edited By: |

Updated on: Sep 13, 2024 | 7:34 PM

Share

ಯಾದಗಿರಿ: ಯಾದಗಿರಿ ಪೊಲೀಸ್ ಠಾಣೆಯ ಪಿಎಸ್‌ಐ ಪರಶುರಾಮ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಳಿ ಹಣ ಪಡೆದು ಸಂಧಾನ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಮೃತ ಪರಶುರಾಮ ಅವರ ಮಾವ ಹಾಗೂ ಕುಟುಂಬಸ್ಥರ ವಿರುದ್ಧ ಈ ಆರೋಪ ಕೇಳಿಬಂದಿದೆ. ಆದರೆ, ನಾವು ಯಾರ ಬಳಿಯೂ ಹಣ ಪಡೆದಿಲ್ಲ ಎಂದು ಪರಶುರಾಮ ಅವರ ಮಾವ ವೆಂಕಟಸ್ವಾಮಿ ಯಾದಗಿರಿ ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ನಾವು ಅಳಿಯನನ್ನು ಕಳೆದುಕೊಂಡ ದುಃಖದಿಂದ ಇನ್ನೂ ಹೊರಬಂದಿಲ್ಲ. ಆ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಇನ್ನೂ ನಮಗೆ ಕೊಟ್ಟಿಲ್ಲ. ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಸಿಐಡಿ ಅಧಿಕಾರಿಗಳು ಸರಿಯಾಗಿಯೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ನಮ್ಮ ಮನೆಗೆ ಬಂದು ನಮ್ಮ ಮಗಳಿಂದ ಮಾಹಿತಿ ಪಡೆದಿದ್ದಾರೆ. ನಮ್ಮ ಹೋರಾಟಕ್ಕೆ ಸಾಕಷ್ಟು ಸಂಘಟನೆಗಳು ಸಹಕಾರ ನೀಡಿದ್ದವು. ಹೋರಾಟಗಾರರು ಸಹ ಯಾರಿಂದಲೂ ಹಣ ಪಡೆದಿಲ್ಲ ಎಂದು ವೆಂಕಟಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಪರಶುರಾಮ ನಿಗೂಢ ಸಾವು ಕೇಸ್: ಯಾದಗಿರಿಗೆ ಎಂಟ್ರಿಕೊಟ್ಟ ಸಿಐಡಿ ತಂಡ, ಇಂಚಿಂಚು ಮಾಹಿತಿ ಕಲೆ

ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಮಗ ಪಂಪಣ್ಣ ಗೌಡ ಕಾರಣ ಎಂದು ಪರಶುರಾಮ ಅವರ ಪತ್ನಿ ಕೇಸ್ ದಾಖಲಿಸಿದ್ದರು. ಈ ಸಾವಿನ ಕೇಸ್ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಪರಶುರಾಮ ಅವರ ಸಾವಿಗೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ್ ಹಾಗೂ ಪುತ್ರ ಪಂಪನಗೌಡ ವಿರುದ್ಧ ಆರೋಪ ವಿಚಾರವಾಗಿ ಆರೋಪಿಗಳ ಬಳಿ ದುಡ್ಡು ಪಡೆದು ಸಂದಾನ ಮಾಡಿಕೊಂಡಿರುವ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ಪಿಎಸ್​ಐ ಪರಶುರಾಮ ಸಾವು ಕೇಸ್​: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಮೃತ ಪರಶುರಾಮ ಅವರ ಮಾವ ಹಾಗೂ ಕುಟುಂಬಸ್ಥರು ಸಂಧಾನ ಮಾಡಿಕೊಂಡಿರುವ ಚರ್ಚೆ ನಡೆಯುತ್ತಿದ್ದು, ಯಾದಗಿರಿ ನಗರದಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ಮೃತ ಪರಶುರಾಮ ಮಾವ ವೆಂಕಟಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಏನಿದು ಪ್ರಕರಣ?:

ಯಾದಗಿರಿ ಪಿಎಸ್‌ಐ ಪರಶುರಾಮ ಅವರ ಸಾವು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಕಾರಣವಾಗುತ್ತಿದೆ. ಪಿಎಸ್‌ಐ ವರ್ಗಾವಣೆ ವಿಚಾರವಾಗಿ ಶಾಸಕ ಚೆನ್ನಾರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ವರ್ಗಾವಣೆಗಾಗಿ ಭಾರೀ ಲಂಚದ ಬೇಡಿಕೆ ಇಡಲಾಗಿತ್ತು ಎಂದು ಪರಶುರಾಮ ಅವರ ಕುಟುಂಬಸ್ಥರು ಆರೋಪಿಸಿದ್ದರು. ಹೀಗಾಗಿ, ಈ ನಿಗೂಢ ಸಾವಿನ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲುಲ್ಲಿ ಕ್ಲಿಕ್ ಮಾಡಿ

Follow Us
Ameen Sab
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ