AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ಕೊರೊನಾ ಲಸಿಕೆ ಹಾಕಿಸಲು ಅಧಿಕಾರಿಗಳಿಂದ ಮಾಸ್ಟರ್ ಪ್ಲಾನ್

ಕೆಲ ಭಾಗದ ಜನರು ಮಾತ್ರ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಯಾದಗಿರಿಯಲ್ಲಿ ಕೊರೊನಾ ಲಸಿಕೆ ಹಾಕಿಸಲು ಅಧಿಕಾರಿಗಳಿಂದ ಮಾಸ್ಟರ್ ಪ್ಲಾನ್
ಅಂಗಡಿಗಳ ಬಾಗಿಲನ್ನು ಮುಚ್ಚಿಸಿದ ಅಧಿಕಾರಿಗಳು
TV9 Web
| Edited By: |

Updated on: Aug 28, 2021 | 12:30 PM

Share

ಯಾದಗಿರಿ: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ಶುರುವಾಗಿದೆ. ಮಹಾಮಾರಿ ಕೊರೊನಾ ವಿರುದ್ಧ ಹೋರಾಡಲು ಲಸಿಕೆ (Vaccine) ಒಂದೇ ಅಸ್ತ್ರವಾಗಿದೆ. ಈಗಾಗಲೇ ಎರಡು ಬಾರಿ ಲಾಕ್​ಡೌನ್​ ಮಾಡಿ ರಾಜ್ಯದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಹೀಗಾಗಿ ಕೊರೊನಾ ಮೂರನೇ ಅಲೆಯನ್ನು ಆರಂಭಿಕ ಹಂತದಲ್ಲಿ ನಿಯಂತ್ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಹಾಗೇ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದರ ಜೊತೆಗೆ ಪ್ರತಿಯೊಬ್ಬರು ಕೊರೊನಾ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಇದು ಅನಿವಾರ್ಯವಾಗಿದೆ.

ಆದರೆ ಕೆಲ ಭಾಗದ ಜನರು ಮಾತ್ರ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳು ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಲಸಿಕೆ ಹಾಕಿಸಿಕೊಂಡರೆ ಅಡ್ಡ ಪಡಿಣಾಮ ಬೀರುತ್ತದೆ ಎಂದು ನಂಬಿರುವ ಜನರಿಗೆ ಲಸಿಕೆ ಹಾಕಿಸುವುದು ದೊಡ್ಡ ಸವಾಲಾಗಿದೆ.

ಹೀಗಾಗಿ ಯಾದಗಿರಿಯಲ್ಲಿ ಕೊರೊನಾ ಲಸಿಕೆ ಹಾಕಿಸಲು ಅಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳದೆ ಇದ್ದವರ ಅಂಗಡಿಗಳನ್ನ ಅಧಿಕಾರಿಗಳು ಮುಚ್ಚಲು ಮುಂದಾಗಿದ್ದಾರೆ. ಲಸಿಕೆ ಹಾಕಿಸಿಕೊಂಡ ಮೇಲೆಯೇ ಅಂಗಡಿ ತೆರೆಯುವಂತೆ ಸೂಚನೆ ನೀಡಿದ್ದಾರೆ. ಲಸಿಕೆ ನಿರಾಕರಿಸಿದ್ದವರಿಗೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದು, ಈ ಘಟನೆ ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ನಡೆದಿದೆ. ಅಂಗಡಿ ಮಾಲೀಕರು ಹಾಗೂ ಕುಟುಂಬಸ್ಥರು ಲಸಿಕೆ ಹಾಕಿಸಿಕೊಂಡ ನಂತರ ಅಂಗಡಿಗಳನ್ನು ತೆರೆಯಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ.

ಇದನ್ನೂ ಓದಿ

ಮೈಸೂರು ಗ್ಯಾಂಗ್​ ರೇಪ್​ ಪ್ರಕರಣ ಭೇದಿಸಲು 5 ಜಿಲ್ಲೆಗಳ 26 ಕ್ರೈಂ ಎಕ್ಸ್​​ಪರ್ಟ್​ಗಳು ಫೀಲ್ಡ್​​ಗೆ ಇಳಿದಿದ್ದರು! ವಿವರ ಇಲ್ಲಿದೆ

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಇದು ಇಂದು ನಿನ್ನೆಯ ಕಥೆಯಲ್ಲ

(Authorities are struggling to vaccinate to Yadgir people)

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ