AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಬಿಜೆಪಿ ಸಂಸದ ಅನಂತಕುಮರ್ ಹಗಡೆ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡವೆ ರಾಜ್ಯ ಬಿಜೆಪಿ ಉಪಾಧ್ಯಕ್ಷರೇ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ: ಬಿಜೆಪಿ ಉಪಾಧ್ಯಕ್ಷ ರಾಜುಗೌಡ
ಅನಂತಕುಮಾರ್ ಹೆಗಡೆ ಅಪ್ಪ ಬಂದರೂ ಸಂವಿಧಾನ ಬದಲಾಯಿಸಲು ಅಸಾಧ್ಯ ಎಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ
Follow us
ಅಮೀನ್​ ಸಾಬ್​
| Updated By: Rakesh Nayak Manchi

Updated on: Mar 14, 2024 | 10:32 AM

ಯಾದಗಿರಿ, ಮಾ.14: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಆ್ಯಕ್ಟಿವ್ ಆದ ಬಿಜೆಪಿ ಸಂಸದ ಅನಂತಕುಮರ್ ಹಗಡೆ (Anantkumar Hegde) ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಸ್ವಪಕ್ಷ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡವೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ (Raju Gowda) ಅವರು ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಅನಂತಕುಮಾರ್ ಹೆಗಡೆ ಅಲ್ಲ, ಅವರ ಅಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಯಾದಗಿರಿ ನಗರದಲ್ಲಿ ಮಾತನಾಡಿದ ರಾಜುಗೌಡ, ಅನಂತಕುಮಾರ್ ಹೆಗಡೆ ಅಲ್ಲ ಅವರಪ್ಪ ಬಂದರೂ ಸಂವಿಧಾನ ಬದಲಾವಣೆ ಮಾಡಲು ಆಗಲ್ಲ. ಇದೆ ತರಹ 2018 ರಲ್ಲಿ ವಿವಾದಾತ್ಮಕ ಹೇಳಿಕೆ‌ ನೀಡಿ ನಮ್ಮ ಪಕ್ಷಕ್ಕೆ ಪೂರ್ಣ ಬಹುಮತ ಬರೋದ್ದಕ್ಕೆ ಕಲ್ಲು ಹಾಕಿದ್ದರು. ಹಿಂದುತ್ವ, ಮೋದಿ ಗಾಳಿಯಲ್ಲಿ ಸಂಸದರಾಗುತ್ತಾರೆ. ಸಂಸದರಾದ‌ ಮೇಲೆ ನಾಲ್ಕು ವರ್ಷ ಮಾಯ ಆಗಿಬಿಡುತ್ತದ್ದಾರೆ. ಚುನಾವಣೆ ಸಂದರ್ಭದಲ್ಲಿ ಈ ರೀತಿ ಹುಚ್ಚುಚ್ಚಾಗಿ ಹೇಳಿಕೆ‌ ನೀಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ಅಂಬೇಡ್ಕರ್ ಅವರಿಗೆ ಮೋದಿ ಅವರಷ್ಟು ಗೌರವ ಕೊಡುವ ನಾಯಕ ಮತ್ತೊಬ್ಬ ಇಲ್ಲ. ಅಂಬೇಡ್ಕರ್ ಮಾರ್ಗದರ್ಶನದಲ್ಲಿ ಮೋದಿ ಅವರು ಹೊರಟಿದ್ದಾರೆ. ನಾಲ್ಕು ವರ್ಷ ಕಾಣೆ ಆಗಿದ್ದಕ್ಕೆ ಈ ರೀತಿ ಹೇಳಿಕೆ ನೀಡಿ ಟಿಕೆಟ್ ಪಡೆಯಲು ಯತ್ನಿಸುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದ ನಾನು ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ಹೇಳುತ್ತಿದ್ದೇನೆ. ಎಲ್ಲೋ ನಾಲ್ಕು ಜನರ ಮಧ್ಯೆ ಮಾತಾಡಿ ವೈರಲ್ ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ನಾನು ಸೋಲಲು ಅನಂತಕುಮಾರ್​ ಹೆಗಡೆ ಕಾರಣ: ರೂಪಾಲಿ ನಾಯ್ಕ

ಹಿಂದೊಮ್ಮೆ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾತನಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಅಲ್ಲದೇ ಸಚಿವ ಸ್ಥಾನವನ್ನೂ ಸಹ ಕಳೆದುಕೊಂಡಿದ್ದರು. ಇದೀಗ ಮತ್ತೆ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದು, ರಾಜ್ಯದಲ್ಲಿ ಬಿಜೆಪಿಗೆ ಮುಜುಗರ ಉಂಟು ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್​ ಪ್ರಬಲ ಅಸ್ತ್ರವನ್ನು ನೀಡಿದ್ದು, ಇದನ್ನೇ ಉಲ್ಲೇಖಿಸಿ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಶಾಸಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದರಿಂದ ಎಚ್ಚೆತ್ತುಕೊಂಡ ಬಿಜೆಪಿ, ಅನಂತಕುಮಾರ್ ಅವರು ಸಂವಿಧಾನ ಬದಲಾವಣೆ ಹೇಳಿಕೆ ಪಕ್ಷಕ್ಕೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಬಿಜೆಪಿ ನಾಯಕರು ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ಇದರ ಮುಜುಗರ ತಾಳಲಾರದೇ ಹೆಗಡೆ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದು, ಮಾಧ್ಯಮಗಳ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

ಅನಂತಕುಮಾರ್ ಹೆಗಡೆ ಹೇಳಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮದಲ್ಲಿ ಮಾತನಾಡಿದ್ದ ಅನಂತಕುಮಾರ್ ಹಗಡೆ, ಕಾಂಗ್ರೆಸ್​ನವರು ಅನಗತ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ. ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದರು.

ಕಾಂಗ್ರೆಸ್‌ನವರು ಸಂವಿಧಾನದ ಮೂಲರೂಪವನ್ನೇ ತಿರುಚಿದ್ದಾರೆ. ಸಂವಿಧಾನದಲ್ಲಿ ಬೇಡದೇ ಇರುವುದನ್ನೆಲ್ಲ ಸೇರಿಸಿದ್ದಾರೆ. ಇಡೀ ಹಿಂದೂ ಸಮಾಜವನ್ನು ದಮನಿಸುವ ರೀತಿ ಕಾನೂನು ತಂದಿದ್ದಾರೆ. ಇದೆಲ್ಲವೂ ಬದಲಾಗಬೇಕಿದ್ದರೆ ಬಹುಮತ ಇಲ್ಲದಿದ್ದರೆ ಆಗುವುದಿಲ್ಲ. ರಾಜ್ಯಸಭೆಯಲ್ಲೂ ನಮಗೆ ಬಹುಮತ ಬೇಕಾಗುತ್ತದೆ. ಎರಡೂ ಕಡೆ 2/3 ರಷ್ಟು ಬಹುಮತ ಬೇಕಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್