AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

covid variant BF.7 : ಯಾದಗಿರಿಯಲ್ಲಿ ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯ : ಡಿಹೆಚ್​ಓ ಡಾ.ಗುರುರಾಜ್ ಹಿರೇಗೌಡರ್

ಕೊರೊನಾ ರೂಪಾಂತರ ತಳಿಯ ಆತಂಕದ ಹಿನ್ನಲೆ ಯಾದಗಿರಿ ಜಿಲ್ಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

covid variant BF.7 : ಯಾದಗಿರಿಯಲ್ಲಿ ಮಾಸ್ಕ್, ಬೂಸ್ಟರ್ ಡೋಸ್ ಕಡ್ಡಾಯ : ಡಿಹೆಚ್​ಓ ಡಾ.ಗುರುರಾಜ್ ಹಿರೇಗೌಡರ್
ಡಿಹೆಚ್​ಓ ಡಾ.ಗುರುರಾಜ್ ಹಿರೇಗೌಡರ್​
TV9 Web
| Edited By: |

Updated on:Dec 23, 2022 | 4:04 PM

Share

ಯಾದಗಿರಿ: ಕೊರೊನಾ ರೂಪಾಂತರ ತಳಿಯ (covid variant BF.7) ಆತಂಕದ ಹಿನ್ನಲೆ ಜಿಲ್ಲೆಯಲ್ಲಿ ಮಾಸ್ಕ್ (Mask) ಕಡ್ಡಾಯಗೊಳಿಸಲಾಗಿದೆ. ಸರ್ಕಾರದಿಂದ ನಿನ್ನೆ ಕೊರೊನಾ (Covid) ನಿಯಂತ್ರಣ ಮಾರ್ಗಸೂಚಿ ಬಂದಿದೆ. ಜಿಲ್ಲೆಯಲ್ಲಿ ಇಂದಿನಿಂದ (ಡಿ.23) ಮಾರ್ಗಸೂಚಿ ಅನ್ವಯ ಆಗುತ್ತೆ. ಜ್ವರ, ಶೀತ ಬಂದರೆ ಟೆಸ್ಟ್ ಮಾಡಲಾಗುತ್ತೆ ಎಂದು ಜಿಲ್ಲಾ ವೈದ್ಯಾಧಿಕಾರಿ (DHO) ಡಾ.ಗುರುರಾಜ್ ಹಿರೇಗೌಡರ್​ ತಿಳಿಸಿದ್ದಾರೆ. ಬಸ್​​ಗಳಲ್ಲಿ ಪ್ರಯಾಣಿಸುವಾಗ ಎಲ್ಲರೂ ಮಾಸ್ಕ್ ಧರಿಸಬೇಕು. ಜಿಲ್ಲೆಯಲ್ಲಿ ಬೂಸ್ಟರ್ ಡೋಸ್ (Booster Dose) ಕಡ್ಡಾಯ ಮಾಡಿದ್ದೇವೆ ಎಂದು ಹೇಳಿದರು.

ಕೊವಿಡ್ ಪಾಸಿಟಿವ್ ಕಂಡು ಬಂದರೆ ಮನೆಯಲ್ಲಿಯೇ ಐಸೋಲೆಟ್ ಮಾಡಲಾಗುತ್ತೆ. ಬೂಸ್ಟರ್ ಡೋಸ್ ನೀಡುವ ಕೆಲಸ ಚುರುಕು ಮಾಡಲಾಗುತ್ತೆ. ನಮ್ಮಲ್ಲಿ ಸದ್ಯ 10 ಸಾವಿರ ಡೋಸ್ ಸ್ಟಾಕ್ ಇವೆ. ನಮ್ಮ ಇಲಾಖೆಯ ಎಲ್ಲಾ ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೂಸ್ಟರ್ ಡೋಸ್ ನೀಡಲು ಕೋವಿಶಿಲ್ಡ್ ಕೊರತೆ ಇದೆ ಎಂದ ಬಿಬಿಎಂಪಿ ಆಯುಕ್ತ, ಕೊರತೆ ಇಲ್ಲ ಎಂದ ಸಚಿವ

ಜನರ ನಡುವೆ ಅಂತರವಿಟ್ಟು ಉತ್ತಮ ರೀತಿಯಲ್ಲಿ ಕ್ರಿಸ್ಮಸ್ ಆಚರಿಸಿ

ವಿದೇಶಗಳಲ್ಲಿ ಕೊರೊನಾ ಉಲ್ಬಣವಾಗುತ್ತಿದೆ. ಹಾಗೇ ಭಾರತ ಸೇರಿ ಪ್ರಪಂಚದ ಇತರ ದೇಶಗಳಲ್ಲಿ ಕೊರೊನಾ ಹರಡುತ್ತಿದೆ. ಈ ಹಿನ್ನೆಲೆ ಜನರ ನಡುವೆ ಅಂತರವಿಟ್ಟು ಉತ್ತಮ ರೀತಿಯಲ್ಲಿ ಕ್ರಿಸ್ಮಸ್ ಆಚರಿಸಿ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಕರೆ ನೀಡಿದ್ದಾರೆ.

ಎರಡು ವರ್ಷದ ಅನುಭವವಿದ್ದು ಕೊರೊನಾ ಹರಡದಂತೆ ಅನೇಕ ಕ್ರಮವನ್ನೂ ತೆಗೆದುಕೊಂಡಿದ್ದೇವೆ. ಸರ್ಕಾರ ನೀಡಿದ ನಿಯಮ ಪಾಲಿಸಿ, ಮಾಸ್ಕ್ ಧರಿಸಿ, ಸ್ಯಾನಿಟೈಜೇಷನ್ ಮಾಡಿದ ಅನುಭವವಿದೆ. ಅಂದಿನ ದಿನದ ಅನುಭವವನ್ನು ನಾವು ಮರೆಯಬಾರದು. ನಾವು ಕ್ರಿಸ್​ಮಸ್ ಹಬ್ಬ ಆಚರಣೆ ಮಾಡುವಾಗ ನಮ್ಮನ್ನು ರಕ್ಷಿಸಿಕೊಳ್ಳುವ ಇತರರನ್ನು ರಕ್ಷಿಸುವ.

ಇದನ್ನೂ ಓದಿ:  ಭಾರತದಲ್ಲಿ ಹೊಸದಾಗಿ 163 ಕೊರೊನಾ ಪ್ರಕರಣಗಳು ಪತ್ತೆ

ಸಾರ್ವಜನಿಕ ಸ್ಥಳಗಳಲ್ಲಿ, ದೇವರಿಗೆ ಆರಾಧನೆ ಮಾಡುವ ಸ್ಥಳದಲ್ಲಿ ಬೇಕಾದ ಜಾಗ್ರತೆ ವಹಿಸಿ. ಜನರ ನಡುವೆ ಅಂತರವಿಟ್ಟು ಉತ್ತಮ ರೀತಿಯಲ್ಲಿ ಕ್ರಿಸ್ಮಸ್ ಹಬ್ಬ ಆಚರಿಸಬೇಕು. ದೇವರು ನಮ್ಮೊಡನೆ ಇದ್ದಾನೆ ಎಂದು ಕ್ರಿಸ್ಮಸ್ ಆಚರಿಸಬೇಕು. ನಮ್ಮ ಚರಿತ್ರೆಯ ಒಡೆಯನೇ ಅವನು. ಒಳಿತು, ಕೆಡುಕುಗಳನ್ನು ನೋಡಿ ದೇವರು ಆಶೀರ್ವಾದ ಮಾಡುತ್ತಾನೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಹೆದರದೆ ಸಂತೋಷದಿಂದ ಹಬ್ಬ ಆಚರಿಸಬೇಕು. ನಮ್ಮ ಮನಸ್ಸಿನಲ್ಲಿ, ಮನೆಗಳಲ್ಲಿ, ವಾತವರಣದಲ್ಲಿ ಸಂತೋಷದ ಅಲೆಯನ್ನು ಹಬ್ಬಿಸೋಣ ಎಂದು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Fri, 23 December 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?