AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​

ಮದ್ಯದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಕೆಲಸ ಕೊಡಿಸಿದ ಗೆಳೆಯನನ್ನೇ ಸ್ನೇಹಿತ ಕೊಂದಿದ್ದಾನೆ. ಸುರಪುರ ತಾಲ್ಲೂಕಿನ ಕ್ರಶರ್ ಬಳಿ ನಡೆದ ಈ ಘಟನೆಯಲ್ಲಿ ಆರೋಪಿ ತಪ್ಪೊಪ್ಪಿಕೊಂಡಿದ್ದು, ಮೃತ ಕುಟುಂಬ ನ್ಯಾಯಕ್ಕೆ ಆಗ್ರಹಿಸಿದೆ.

ಕೆಲಸ ಕೊಡಿಸಿದ ಸ್ನೇಹಿತನಿಗೇ ಚಟ್ಟ ಕಟ್ಟಿದ ಫ್ರೆಂಡ್​​: ಎಣ್ಣೆ ನಶೆಯಲ್ಲಿ ಶುರುವಾದ ಜಗಳ ಕೊಲೆಯಲ್ಲಿ ಎಂಡ್​
ಸಾಂದರ್ಭಿಕ ಚಿತ್ರImage Credit source: Tv9 Kannada
ಅಮೀನ್​ ಸಾಬ್​
| Edited By: |

Updated on: Mar 03, 2026 | 7:10 PM

Share

ಯಾದಗಿರಿ, ಮಾರ್ಚ್​​ 03: ಮದ್ಯ ಸೇವಿಸದ ನಶೆಯಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗುತ್ತಿಬಸವಣ್ಣನ ಕ್ರಾಸ್ ಬಳಿಯ ಕ್ರಶರ್​​ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟಿ ಮೂಲದ ಬಸನಗೌಡ (30) ಮೃತ ವ್ಯಕ್ತಿಯಾಗಿದ್ದು, ಈತನ ಸ್ನೇಹಿತ ಬಸನಗೌಡ ಎನ್ನುವವನೇ ಕೊಲೆ ಆರೋಪಿಯಾಗಿದ್ದಾನೆ.

ಮೃತಪಟ್ಟಿರುವ ವ್ಯಕ್ತಿ ಬಸನಗೌಡ ಕಳೆದ ಒಂದು ತಿಂಗಳಿನಿಂದ  ಕ್ರಶರ್ ಕಂಪನಿಯಲ್ಲಿ ಟಿಪ್ಪರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಕ್ರಶಿಂಗ್​ ಮಾಡಿದ ಕಲ್ಲುಗಳುನ್ನ ಟಿಪ್ಪರ್‌ನಲ್ಲಿ ಲೋಡ್ ಮಾಡಿಕೊಂಡು ಬೇರೆ ಕಡೆ ಸಾಗಿಸುವ ಕೆಲಸ ಈತನದ್ದಾಗಿತ್ತು. ಈ ನಡುವೆ ತಾಳಿಕೋಟಿಯಲ್ಲಿ ಕೆಲಸವಿಲ್ಲದೆ ಅಲೆಯುತ್ತಿದ್ದ ಸ್ನೇಹಿತ ಬಸನಗೌಡನಿಗೂ ತನ್ನದೇ ಕಂಪನಿಯಲ್ಲಿ ಕೆಲಸ ಕೊಡಿಸಿದ್ದ. ಎಂದಿನಂತೆ ನಿನ್ನೆ ಕೆಲಸ ಮುಗಿಸಿದ ಸ್ನೇಹಿತರು ಸಂಜೆ ಎಣ್ಣೆ ಹೊಡೆಯಲು ಕುಳಿತುಕೊಂಡಿದ್ದಾರೆ. ಮದ್ಯದ ನಶೆಯಲ್ಲಿದ್ದ ಇವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿದೆ. ಇದು ವಿಕೋಪಕ್ಕೆ ಹೋಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಕೆಲಸ ಕೊಡಿಸಿದ್ದ ಬಸನಗೌಡಗೆ ಸ್ನೇಹಿತ ಬಸನಗೌಡ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ನಶೆಯಲ್ಲಿ‌ ಹೋಗಿ ಮಲಗಿದ್ದಾನೆ. ಆದರೆ ಇತ್ತ ಹಲ್ಲೆಗೊಳಗಾದ ಬಸನಗೌಡ ಬೆಳಗಾಗುವುದರಲ್ಲಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಫೋಕ್ಸೋ ಕೇಸ್​​ನಲ್ಲಿ ಇಂದು 2 ಬೆಳವಣಿಗೆ; ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ

ಇಬ್ಬರು ಸ್ನೇಹಿತರು ಚೆನ್ನಾಗಿಯೇ ಇದ್ದರು. ಇವರ ನಡುವೆ ಯಾವುದೇ ಜಗಳ ಆಗಿರಲಿಲ್ಲ. ಹೀಗಿದ್ದರೂ ಕುಡಿದ ನಶೆಯಲ್ಲಿ ನಡೆದ ಘಟನೆ ಓರ್ವನ ಪ್ರಾಣ ಪಡೆದಿದೆ. ಘಟನಾ ಸ್ಥಳಕ್ಕೆ ಕೆಂಭಾವಿ ಪೊಲೀಸರು ಮತ್ತು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನ ಕೆಂಭಾವಿಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ವಿಚಾರಣೆ ವೇಳೆ ಮದ್ಯದ ಅಮಲಲ್ಲಿ ಸ್ನೇಹಿತನನ್ನು ತಾನೇ ಕೊಂದಿರೋದಾಗಿ ಆರೋಪಿಯೂ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಉಪಕಾರ ಮಾಡಲು ಹೋಗಿ ಸ್ನೇಹಿತನಿಂದಲೇ ವ್ಯಕ್ತಿ ಹತ್ಯೆಯಾಗಿರುವ ಹಿನ್ನೆಲೆ, ಆರೋಪಿ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತನಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು