AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಅಸಲಿ ಸತ್ಯ

ಸಣ್ಣ ರೂಮ್ ಒಂದರಲ್ಲಿ ಭಾನುವಾರ ಜನರಿಗೆ ಚಿಕಿತ್ಸೆ ನೀಡುತ್ತಾಳೆ ಈ ನಕಲಿ ವೈದ್ಯೆ. ಇನ್ನು ಅನಿತಾ ಜತೆಗೆ ಅಸಿಸ್ಟೆಂಟ್ ಕೂಡ ಇದ್ದಾನೆ.  ಈ ವೈದ್ಯೆಯ ಬಳಿ ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ.

ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಅಸಲಿ ಸತ್ಯ
ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ
TV9 Web
| Edited By: |

Updated on: Sep 26, 2021 | 11:13 AM

Share

ಯಾದಗಿರಿ: ಅಮಾಯಕ ಜನರ ಜೀವದ ಜೊತೆ ಚಲ್ಲಾಟವಾಡುತ್ತಿರುವ ನಕಲಿ ವೈದ್ಯೆಯ ಕಟು ಸತ್ಯ ಸಾರ್ವಜನಿಕರ ಮುಂದೆ ಬಯಲಾಗಿದೆ. ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ವೈದ್ಯೆಯ ಅಸಲಿ ಸತ್ಯವನ್ನು ಸ್ಥಳೀಯರೆ ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಎಲ್ಲಿ ನೋವು ಇದೆ ಅದೆ ಜಾಗಕ್ಕೆ ಇಂಜೆಕ್ಷನ್ ಚುಚ್ಚುತ್ತಾಳೆ ಈ ವೈದ್ಯೆ. ಕಾಲಿಗೆ ನೋವಿದ್ದರೆ ಕಾಲು,ಕೈ ನೋವಾದರೆ ಕೈ, ಬೆನ್ನು ನೋವಾದರೆ ಬೆನ್ನು, ಬೆರಳಿಗೆ ನೋವಿದ್ದರೆ ಬೆರಳಿಗೆ ಸಹ ಇಂಜೆಕ್ಷನ್ ಚುಚ್ಚುತ್ತಾಳೆ.

ಸಂಡೇ ಸ್ಪೆಷಲ್ ಲೇಡಿ ಡಾಕ್ಟರ್ ನಕಲಿ ವೈದ್ಯೆ ಅನಿತಾ ಒಂದೊಂದು ಇಂಜೆಕ್ಷನ್​ಗೆ ಮುಗ್ಧ ಜನರಿಂದ 250 ರಿಂದ 300 ರೂಪಾಯಿವರೆಗೆ ತೆಗೆದುಕೊಳ್ಳುತ್ತಾಳೆ. ಭಾನುವಾರ ಮಾತ್ರ ವೈದ್ಯೆ ಅನಿತಾ ಆಸ್ಪತ್ರೆ ಬಾಗಿಲು ತೆರೆದಿರುತ್ತದೆ. ಇನ್ನು ಉಳಿದ ದಿನಗಳಲ್ಲಿ ನಕಲಿ ವೈದ್ಯೆ ಅನಿತಾ ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ.

ಸಣ್ಣ ರೂಮ್ ಒಂದರಲ್ಲಿ ಭಾನುವಾರ ಜನರಿಗೆ ಚಿಕಿತ್ಸೆ ನೀಡುತ್ತಾಳೆ ಈ ನಕಲಿ ವೈದ್ಯೆ. ಇನ್ನು ಅನಿತಾ ಜತೆಗೆ ಅಸಿಸ್ಟೆಂಟ್ ಕೂಡ ಇದ್ದಾನೆ.  ಈ ವೈದ್ಯೆಯ ಬಳಿ ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ. ಇಷ್ಟೆಲ್ಲಾ ಅವಾಂತರಗಳು ನಡೆಯುತ್ತಿದ್ದರೂ, ಆರೋಗ್ಯ ಇಲಾಖೆ ಮಾತ್ರ ಈ ಬಗ್ಗೆ ಗಮನಹರಿಸಿಲ್ಲ ಎನ್ನುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈ ನಕಲಿ ವೈದ್ಯೆ ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಳೆ. ಪ್ರತಿ ಭಾನುವಾರ ಮಾತ್ರ ತಾನೇ ಡಾಕ್ಟರ್ ಆಗಿ ಹೊಸಹಳ್ಳಿ ಕ್ರಾಸ್ ಬಳಿ ಆಗಮಿಸುತ್ತಾಳೆ. ಹೀಗಾಗಿ ಆ ಆಸ್ಪತ್ರೆಯಿಂದ ಮಾತ್ರೆ ಮತ್ತು ಇಂಜೆಕ್ಷನ್ ತಂದು ಇಲ್ಲಿ ಮಾರಾಟ ಮಾಡುತ್ತಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಈ ನಕಲಿ ಡಾಕ್ಟರ್ ಕಳೆದ ಹಲವು ವರ್ಷಗಳಿಂದ ಅಮಾಯಕ ಜನರ ಜೀವದ ಜೊತೆ ಚಲ್ಲಾಟ ಆಡುತ್ತಿದ್ದಾಳೆ. ಇದರ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದರೆ,  ದೊಡ್ಡ ದುರಂತ. ಈಗಲಾದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಕಲಿ ವೈದ್ಯೆ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ತಿಳಿಸಿದ್ದಾರೆ.

ಇದನ್ನೂ ಓದಿ:

ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್​ಗೆ ವಂಚನೆ; ದಂಪತಿ ವಿರುದ್ಧ ದೂರು ದಾಖಲು

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು