Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಅಸಲಿ ಸತ್ಯ

ಸಣ್ಣ ರೂಮ್ ಒಂದರಲ್ಲಿ ಭಾನುವಾರ ಜನರಿಗೆ ಚಿಕಿತ್ಸೆ ನೀಡುತ್ತಾಳೆ ಈ ನಕಲಿ ವೈದ್ಯೆ. ಇನ್ನು ಅನಿತಾ ಜತೆಗೆ ಅಸಿಸ್ಟೆಂಟ್ ಕೂಡ ಇದ್ದಾನೆ.  ಈ ವೈದ್ಯೆಯ ಬಳಿ ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ.

ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಅಸಲಿ ಸತ್ಯ
ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ನಕಲಿ ವೈದ್ಯೆ
Follow us
TV9 Web
| Updated By: preethi shettigar

Updated on: Sep 26, 2021 | 11:13 AM

ಯಾದಗಿರಿ: ಅಮಾಯಕ ಜನರ ಜೀವದ ಜೊತೆ ಚಲ್ಲಾಟವಾಡುತ್ತಿರುವ ನಕಲಿ ವೈದ್ಯೆಯ ಕಟು ಸತ್ಯ ಸಾರ್ವಜನಿಕರ ಮುಂದೆ ಬಯಲಾಗಿದೆ. ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಮನ ಬಂದಂತೆ ಇಂಜೆಕ್ಷನ್ ಚುಚ್ಚುವ ವೈದ್ಯೆಯ ಅಸಲಿ ಸತ್ಯವನ್ನು ಸ್ಥಳೀಯರೆ ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಎಲ್ಲಿ ನೋವು ಇದೆ ಅದೆ ಜಾಗಕ್ಕೆ ಇಂಜೆಕ್ಷನ್ ಚುಚ್ಚುತ್ತಾಳೆ ಈ ವೈದ್ಯೆ. ಕಾಲಿಗೆ ನೋವಿದ್ದರೆ ಕಾಲು,ಕೈ ನೋವಾದರೆ ಕೈ, ಬೆನ್ನು ನೋವಾದರೆ ಬೆನ್ನು, ಬೆರಳಿಗೆ ನೋವಿದ್ದರೆ ಬೆರಳಿಗೆ ಸಹ ಇಂಜೆಕ್ಷನ್ ಚುಚ್ಚುತ್ತಾಳೆ.

ಸಂಡೇ ಸ್ಪೆಷಲ್ ಲೇಡಿ ಡಾಕ್ಟರ್ ನಕಲಿ ವೈದ್ಯೆ ಅನಿತಾ ಒಂದೊಂದು ಇಂಜೆಕ್ಷನ್​ಗೆ ಮುಗ್ಧ ಜನರಿಂದ 250 ರಿಂದ 300 ರೂಪಾಯಿವರೆಗೆ ತೆಗೆದುಕೊಳ್ಳುತ್ತಾಳೆ. ಭಾನುವಾರ ಮಾತ್ರ ವೈದ್ಯೆ ಅನಿತಾ ಆಸ್ಪತ್ರೆ ಬಾಗಿಲು ತೆರೆದಿರುತ್ತದೆ. ಇನ್ನು ಉಳಿದ ದಿನಗಳಲ್ಲಿ ನಕಲಿ ವೈದ್ಯೆ ಅನಿತಾ ಕಣ್ಣಿಗೆ ಕಾಣಿಸಿಕೊಳ್ಳುವುದಿಲ್ಲ.

ಸಣ್ಣ ರೂಮ್ ಒಂದರಲ್ಲಿ ಭಾನುವಾರ ಜನರಿಗೆ ಚಿಕಿತ್ಸೆ ನೀಡುತ್ತಾಳೆ ಈ ನಕಲಿ ವೈದ್ಯೆ. ಇನ್ನು ಅನಿತಾ ಜತೆಗೆ ಅಸಿಸ್ಟೆಂಟ್ ಕೂಡ ಇದ್ದಾನೆ.  ಈ ವೈದ್ಯೆಯ ಬಳಿ ಬೇರೆ ಬೇರೆ ಜಿಲ್ಲೆಗಳಿಂದಲೂ ಜನರು ಬಂದು ಚಿಕಿತ್ಸೆ ಪಡೆಯುತ್ತಾರೆ. ಇಷ್ಟೆಲ್ಲಾ ಅವಾಂತರಗಳು ನಡೆಯುತ್ತಿದ್ದರೂ, ಆರೋಗ್ಯ ಇಲಾಖೆ ಮಾತ್ರ ಈ ಬಗ್ಗೆ ಗಮನಹರಿಸಿಲ್ಲ ಎನ್ನುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಈ ನಕಲಿ ವೈದ್ಯೆ ಆರೋಗ್ಯ ಇಲಾಖೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಳೆ. ಪ್ರತಿ ಭಾನುವಾರ ಮಾತ್ರ ತಾನೇ ಡಾಕ್ಟರ್ ಆಗಿ ಹೊಸಹಳ್ಳಿ ಕ್ರಾಸ್ ಬಳಿ ಆಗಮಿಸುತ್ತಾಳೆ. ಹೀಗಾಗಿ ಆ ಆಸ್ಪತ್ರೆಯಿಂದ ಮಾತ್ರೆ ಮತ್ತು ಇಂಜೆಕ್ಷನ್ ತಂದು ಇಲ್ಲಿ ಮಾರಾಟ ಮಾಡುತ್ತಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಈ ನಕಲಿ ಡಾಕ್ಟರ್ ಕಳೆದ ಹಲವು ವರ್ಷಗಳಿಂದ ಅಮಾಯಕ ಜನರ ಜೀವದ ಜೊತೆ ಚಲ್ಲಾಟ ಆಡುತ್ತಿದ್ದಾಳೆ. ಇದರ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ ಎಂದರೆ,  ದೊಡ್ಡ ದುರಂತ. ಈಗಲಾದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಕಲಿ ವೈದ್ಯೆ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಉಮೇಶ್ ಮುದ್ನಾಳ್ ತಿಳಿಸಿದ್ದಾರೆ.

ಇದನ್ನೂ ಓದಿ:

ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್​ಗೆ ವಂಚನೆ; ದಂಪತಿ ವಿರುದ್ಧ ದೂರು ದಾಖಲು

2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್