AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಅರಣ್ಯದಲ್ಲಿ ಕಾಡುಹಂದಿ ಬೇಟೆಯಾಡಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ ನಡೆದಿದೆ. ಕಿಡಿಗೇಡಿಗಳು ಆರ್‌ಎಫ್‌ಒ ಭಾಗಪ್ಪಗೌಡ ಹಾಗೂ ಗಸ್ತುಪಾಲಕರನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿದ್ದಾರೆ. ಈ ಸಂಬಂಧ ಕೊಡೇಕಲ್ ಪೊಲೀಸರು 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ನಾಲ್ವರನ್ನು ಈಗಾಗಲೇ ಜೈಲಿಗಟ್ಟಿದ್ದಾರೆ.

ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ
ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ!
ಅಮೀನ್​ ಸಾಬ್​
| Edited By: |

Updated on: Jun 05, 2026 | 2:09 PM

Share

ಯಾದಗಿರಿ, ಜೂನ್ 05: ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬೇಟೆಗಾರರ ಗ್ಯಾಂಗ್ ಭೀಕರ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ (Yadagiri) ಸುರಪುರ ತಾಲೂಕಿನ ಕಕ್ಕೇರ ಬಳಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದೆ.

ಮುಖ್ಯಾಂಶಗಳು

  • ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದ ಕಿಡಿಗೇಡಿಗಳ ಬಂಧನಕ್ಕೆ ಹೋದಾಗ ಹಲ್ಲೆ.
  • ಆರ್‌ಎಫ್‌ಒ ಸೇರಿ ಮೂವರು ಅಧಿಕಾರಿಗಳನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಭೀಕರ ಹಲ್ಲೆ.
  • ಕೊಡೇಕಲ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್; ನಾಲ್ವರ ಬಂಧನ, ಆಸ್ಪತ್ರೆಗೆ ಆರ್‌ಎಫ್‌ಒ ದಾಖಲು.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವೀಡಿಯೋ

ಆರೋಪಿಗಳು ಕಾಡುಹಂದಿಯನ್ನು ಬೇಟೆಯಾಡಿ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಆಧಾರದ ಮೇಲೆ ದಾಳಿ ನಡೆಸಿದ ಆರ್‌ಎಫ್‌ಒ (RFO) ಭಾಗಪ್ಪಗೌಡ, ಗಸ್ತುಪಾಲಕರಾದ ಲಾಲ್ ಅಹ್ಮದ್ ಹಾಗೂ ಕಾಶಿನಾಥ್ ರಾಠೋಡ್ ಅವರನ್ನೇ ಬೇಟೆಗಾರರ ಜಾಲ ಹಿಡಿದು ಕೂಡಿಹಾಕಿದೆ. ಅಧಿಕಾರಿಗಳನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ, ದೊಣ್ಣೆಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಆರ್‌ಎಫ್‌ಒ ಭಾಗಪ್ಪಗೌಡ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಮರುಕಳಿಸದ ಘಟನೆಗೆ ಸಂಬಂಧಿಸಿದಂತೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ಕು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಖದೀಮರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಎಫ್​ಐಆರ್ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಜೋಶಿ ವಾಗ್ದಾಳಿ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಇಂದು ಹೇರಂಭ ಸಂಕಷ್ಟ ಚತುರ್ಥಿ; ಸಿಂಹವಾಹನಸ್ಥ ವಿನಾಯಕನ ಆರಾಧನೆಯ ದಿನ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!