ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಅರಣ್ಯದಲ್ಲಿ ಕಾಡುಹಂದಿ ಬೇಟೆಯಾಡಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಭೀಕರ ಹಲ್ಲೆ ನಡೆದಿದೆ. ಕಿಡಿಗೇಡಿಗಳು ಆರ್‌ಎಫ್‌ಒ ಭಾಗಪ್ಪಗೌಡ ಹಾಗೂ ಗಸ್ತುಪಾಲಕರನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿದ್ದಾರೆ. ಈ ಸಂಬಂಧ ಕೊಡೇಕಲ್ ಪೊಲೀಸರು 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ನಾಲ್ವರನ್ನು ಈಗಾಗಲೇ ಜೈಲಿಗಟ್ಟಿದ್ದಾರೆ.

ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ! ನಾಲ್ವರ ಬಂಧನ
ವನ್ಯಜೀವಿ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ!
Edited By:

Updated on: Jun 05, 2026 | 2:09 PM

ಯಾದಗಿರಿ, ಜೂನ್ 05: ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬೇಟೆಗಾರರ ಗ್ಯಾಂಗ್ ಭೀಕರ ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ (Yadagiri) ಸುರಪುರ ತಾಲೂಕಿನ ಕಕ್ಕೇರ ಬಳಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದೆ.

ಮುಖ್ಯಾಂಶಗಳು

  • ಕಾಡುಹಂದಿ ಬೇಟೆಯಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದ ಕಿಡಿಗೇಡಿಗಳ ಬಂಧನಕ್ಕೆ ಹೋದಾಗ ಹಲ್ಲೆ.
  • ಆರ್‌ಎಫ್‌ಒ ಸೇರಿ ಮೂವರು ಅಧಿಕಾರಿಗಳನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಗಳಿಂದ ಭೀಕರ ಹಲ್ಲೆ.
  • ಕೊಡೇಕಲ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್; ನಾಲ್ವರ ಬಂಧನ, ಆಸ್ಪತ್ರೆಗೆ ಆರ್‌ಎಫ್‌ಒ ದಾಖಲು.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದ ವೀಡಿಯೋ

ಆರೋಪಿಗಳು ಕಾಡುಹಂದಿಯನ್ನು ಬೇಟೆಯಾಡಿ ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದರು. ಇದರ ಆಧಾರದ ಮೇಲೆ ದಾಳಿ ನಡೆಸಿದ ಆರ್‌ಎಫ್‌ಒ (RFO) ಭಾಗಪ್ಪಗೌಡ, ಗಸ್ತುಪಾಲಕರಾದ ಲಾಲ್ ಅಹ್ಮದ್ ಹಾಗೂ ಕಾಶಿನಾಥ್ ರಾಠೋಡ್ ಅವರನ್ನೇ ಬೇಟೆಗಾರರ ಜಾಲ ಹಿಡಿದು ಕೂಡಿಹಾಕಿದೆ. ಅಧಿಕಾರಿಗಳನ್ನು ಜಾಲಿ ಗಿಡಕ್ಕೆ ಕಟ್ಟಿಹಾಕಿ, ದೊಣ್ಣೆಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದೆ. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಆರ್‌ಎಫ್‌ಒ ಭಾಗಪ್ಪಗೌಡ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಮರುಕಳಿಸದ ಘಟನೆಗೆ ಸಂಬಂಧಿಸಿದಂತೆ ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಒಟ್ಟು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ಕು ಮಂದಿ ಪ್ರಮುಖ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಖದೀಮರಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More
Follow Us