AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2022 : ಮಹ್ಮದ್ ಅಲಿ ಕೈಯಲ್ಲಿ ಮೂಡಿಬಂದ ವಿಘ್ನನಿವಾರಕ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಮುಸ್ಲಿಂ ಯುವಕನೊಬ್ಬ ಹಲವು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ.

Ganesh Chaturthi 2022 : ಮಹ್ಮದ್ ಅಲಿ ಕೈಯಲ್ಲಿ ಮೂಡಿಬಂದ ವಿಘ್ನನಿವಾರಕ
ಗಣೇಶ ತಯಾರಕ ಮೊಹಮ್ಮದ್ ಅಲಿ ಖಾದರ್ ಸಾಬ್ ವಡಿಕೇರಿ
TV9 Web
| Edited By: ವಿವೇಕ ಬಿರಾದಾರ|

Updated on: Aug 28, 2022 | 7:00 AM

Share

ಗಣೇಶ ಹಬ್ಬವನ್ನು (Ganesh Festival) ಇಡೀ ದೇಶದಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತೆ. ಗಲ್ಲಿ ಗಲ್ಲಿಗಳಲ್ಲಿ ಏಕದಂತನನ್ನು ಕೂರಿಸಿ ಪೂಜೆ ಸಲ್ಲಿಸಲಾಗುತ್ತೆ. ಕೆಲ ಕಡೆ ಸರ್ವ ಧರ್ಮದ ಜನರು ಗಣೇಶ ಚತುರ್ಥಿಯನ್ನು ಆಚರಿಸುತ್ತಾರೆ. ಆದರೆ ಈಗ ರಾಜ್ಯದಲ್ಲಿ ಧರ್ಮ ಧರ್ಮಗಳ ಮದ್ಯೆ ಕಂದಕ ಸೃಷ್ಟಿಯಾಗಿದೆ. ಆದರೆ ಇದರ ಮಧ್ಯೆ ಇಲ್ಲೊಬ್ಬ ಯುವಕ ಧಾರ್ಮಿಕ ಸಾಮರಸ್ಯ ಮೂಡಿಸಿದ್ದಾನೆ.

ಮುಸ್ಲಿಂ ಯುವಕನ ಕೈಯಲ್ಲಿ ಅರಳಿದ ಗಣಪ. ಯಾದಗಿರಿ (Yadgiri) ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಮುಸ್ಲಿಂ ಯುವಕನೊಬ್ಬ ಹಲವು ವರ್ಷಗಳಿಂದ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಂಡಿದ್ದು, ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿ ಗಮನ ಸೆಳೆದಿದ್ದಾರೆ. ಪಟ್ಟಣದ ಮೊಹಮ್ಮದ್ ಅಲಿ ಖಾದರ್ ಸಾಬ್ ವಡಿಕೇರಿ ಅವರು ಇದಕ್ಕೂ ಮುನ್ನ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದರು. ಆ ಬಳಿಕ ಮೂರ್ತಿ ತಯಾರಿಕೆಯಲ್ಲಿ ತೊಡಗಿಕೊಂಡು, ಹಿಂದೂ ದೇವರ ಹಲವು ಮಣ್ಣಿನ ಮೂರ್ತಿಗಳನ್ನು ಮಾಡುತ್ತಾರೆ.

ಚಿಕ್ಕ ವಯಸ್ಸಿನಿಂದ್ಲೇ ಮೂರ್ತಿ ತಯಾರಿಕೆ ಮಹಮ್ಮದ್ ಅಲಿ ಕುಟುಂಬದಲ್ಲಿ 10 ಜನ ಸದಸ್ಯರಿದ್ದಾರೆ ಚಿಕ್ಕಂದಿನಿಂದ ಕ್ಲೈ ಮಾಡಲಿಂಗ್ ಮಾಡಿಕೊಂಡು ಬಂದಿದ್ದು, ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ. ಬಡತನದಿಂದಾಗಿ ಶಿಕ್ಷಣವನ್ನು ಮೊಟಕುಗೊಳಿಸಿದರು. ಬಳಿಕ ಕುಟುಂಬ ನಿರ್ವಹಣೆಗಾಗಿ ಸೆಂಟ್ರಿಂಗ್ ಕೆಲಸಕ್ಕೆ ಸೇರಿಕೊಂಡರು ಆದರೆ ಮಣ್ಣಿನ ಮೇಲಿನ ಮೋಹ ಮಾತ್ರ ಬಿಡಲಿಲ್ಲ. ಮನೆಯಲ್ಲಿ ಆನೆ, ಒಂಟೆ, ಗಣೇಶ ಮೂರ್ತಿಗಳನ್ನು ಮಣ್ಣಿನಲ್ಲಿ ತಯಾರಿಸುತ್ತಾರೆ. ಅವುಗಳನ್ನು ಶಾಲೆಗಳಿಗೆ ಉಚಿತವಾಗಿಯೂ ನೀಡುತ್ತಾರೆ. ಶಾಲೆ, ಕಾಲೇಜು, ಸಂಘ, ಸಂಸ್ಥೆಗಳಿಂದ ಮೂರ್ತಿಗಳನ್ನು ತಯಾರಿಸಲು ಬೇಡಿಕೆ ಬಂದರೆ ಆದ್ಯತೆ ಮೇರೆಗೆ ತಯಾರಿಸಿ ಉಚಿತವಾಗಿ ಕೊಡುತ್ತಾರೆ.

ಮಹಮದ್ ಅಲಿ ತಯಾರಿಸಿದ ಗಣೇಶ್ ಮೂರ್ತಿ ನೋಡಿ ಜನ ಫಿದಾ

ಮೊಹಮ್ಮದ್ ಅಲಿ ಕೆಲ ವರ್ಷಗಳಿಂದ ಮಣ್ಣಿನಿಂದ ಗಣೇಶ ಮೂರ್ತಿಯನ್ನು ತಯಾರಿಸುತ್ತಿದ್ದಾರೆ ಪ್ರತಿ ವರ್ಷ ಗಣೇಶ ಚತುರ್ಥಿ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಣೇಶ ಮೂರ್ತಿಗಳನ್ನು ತಯಾರು ಮಾಡುತ್ತಾರೆ. ಮೊಹಮ್ಮದ್ ಅಲಿ ಅವರು ಆರು ಇಂಚಿನಿಂದ ಮೂರು ಅಡಿಯವರೆಗೆ ಎತ್ತರದಷ್ಟು ಗಣೇಶ ಮೂರ್ತಿಗಳನ್ನು ತಯಾರು ಮಾಡುತ್ತಾರೆ. ಈ ಮೊಹಮ್ಮದ್ ಅಲಿ ತಯಾರಿಸುವ ಗಣೇಶ ಮೂರ್ತಿಗಳನ್ನು ನೋಡಿ ಜನ ಫುಲ್ ಫಿದಾ ಆಗಿದ್ದಾರೆ.

ಮಣ್ಣಿನಿಂದ ಅಲ್ಲದೆ ಥರ್ಮಕೋಲ್ ನಿಂದಲೂ ತಯಾರಿಸುತ್ತಾರೆ‌‌

ಮಹಮದ್ ಅಲಿ ಅವರು ಕೇವಲ ಮಣ್ಣಿನಿಂದ ಮೂರ್ತಿಗಳನ್ನು ಮಾತ್ರ ತಯಾರಿಸುವುದಿಲ್ಲ ಬದಲಿಗೆ ಚಿತ್ರಕಲೆ ಮತ್ತು ಥರ್ಮಕೋಲ್‌ನಿಂದ ಆಕೃತಿಗಳನ್ನು ಮಾಡುತ್ತಾರೆ ಚಿತ್ರಕಲೆಯಲ್ಲಿಯೂ ಆಸಕ್ತಿ ಹೊಂದಿರುವ ಕಾರಣ ಅತ್ಯುತ್ತಮವಾಗಿ ಗಣೇಶ ಸೇರಿದಂತೆ ಬೇರೆ ಬೇರೆ ದೇವರುಗಳ ಆಕೃತಿಗಳನ್ನು ತಯಾರಿಸುತ್ತಾರೆ ಈ ಮಹಮ್ಮದ್ ಅಲಿ.

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ