AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ

ಕಳೆದ 15 ತಿಂಗಳುಗಳಿಂದ ಪ್ರಾಥಮಿಕ ಶಾಲೆಗಳನ್ನು ಕೊರೊನಾದಿಂದಾಗೆ ಬೀಗ ಹಾಕಲಾಗಿದೆ. ಇದರಿಂದ ಖಾಸಗಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ, ನಗರದ ಭೀಮೇಶ್ ಮತ್ತು ಅರುಣ್ ಎಂಬವವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ
ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ
TV9 Web
| Updated By: ಸಾಧು ಶ್ರೀನಾಥ್​|

Updated on:Sep 07, 2021 | 5:11 PM

Share

ಯಾದಗಿರಿ: ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ. ಇಬ್ಬರು ಶಿಕ್ಷಕರು ಈಗ ಗಣೇಶನ ಮೂರ್ತಿ ತಯಾರಕರಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಕೊರೊನಾದಿಂದ ಪ್ರಾಥಮಿಕ ಶಾಲೆಗಳು ಬಾಗಿಲು ತೆರೆದಿಲ್ಲ. ಇದೇ ಕಾರಣದಿಂದ ಕೆಲಸನೂ ಇಲ್ಲ ಸಂಬಂಳನೂ ಇಲ್ಲದ ಸಂಕಷ್ಟದಲ್ಲಿದ್ದ ಶಿಕ್ಷಕರು ಈಗ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮಾರಾಟಕ್ಕೆ ಮುಂದಾಗಿದ್ದಾರೆ. ಸ್ವಂತ ಕಲೆಯನ್ನು ಬಳಸಿಕೊಂಡು ಬಣ್ಣ ಬಣ್ಣದ ಗಣೇಶನ ವಿಗೃಹಗಳನ್ನು ಮಾಡಿದ್ದಾರೆ.

ಯಾದಗಿರಿ ನಗರದ ಖಾಸಗಿ ಶಾಲೆಯ ಇಬ್ಬರು ಕಲಾ ಶಿಕ್ಷಕರು ಇದೆ ಮೊದಲ ಬಾರಿಗೆ ಯಾದಗಿರಿ ಮಾರುಕಟ್ಟೆಗೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ತರುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಳೆದ 15 ತಿಂಗಳುಗಳಿಂದ ಪ್ರಾಥಮಿಕ ಶಾಲೆಗಳನ್ನು ಕೊರೊನಾದಿಂದಾಗೆ ಬೀಗ ಹಾಕಲಾಗಿದೆ. ಇದರಿಂದ ಖಾಸಗಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ, ನಗರದ ಭೀಮೇಶ್ ಮತ್ತು ಅರುಣ್ ಎಂಬವವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೆಲಸ ಇಲ್ಲದೆ ಮನೆಯಲ್ಲಿ ಕುಳಿತ್ತಿದ್ದ ಇಬ್ಬರು ಶಿಕ್ಷಕರು ಈ ಬಾರಿ ಯಾದಗಿರಿ ಜನರಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಬೇಕು ಎಂದು ಯೋಜನೆ ಮಾಡಿದ್ದಾರೆ. ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ. ಈ ಇಬ್ಬರು ತಮ್ಮ ಬಳಿಯೇ ಕಲೆ ಇದ್ದ ಕಾರಣಕ್ಕೆ ಬೆಂಗಳೂರು ಸೇರಿದಂತೆ ಬೇರೆ ಕಡೆಯಿಂದ ಕಚ್ಚಾ ಮಣ್ಣು ತರಿಸಿಕೊಂಡಿದ್ದಾರೆ.

ದೊಡ್ಡ ದೊಡ್ಡ ಗಣೇಶ ವಿಗೃಹಗಳ ಅಳತೆ (ಸಾಚಾ)ಗಳನ್ನು ಬಳಸಿಕೊಂಡು ಮೂರ್ತಿ ತಯಾರು ಮಾಡಿದ್ದಾರೆ. ಮಣ್ಣಿನಿಂದ ಈಗಾಗಲೇ ನೂರಾರು ಗಣೇಶನ ವಿಗೃಹಗಳನ್ನು ತಯಾರು ಮಾಡಿದ್ದಾರೆ. ಇನ್ನು ಸಣ್ಣ ಸಣ್ಣ ಗಣೇಶನ ವಿಗೃಹಗಳನ್ನು ಖುದ್ದು ಈ ಇಬ್ಬರು ಶಿಕ್ಷಕರೇ ತಯಾರು ಮಾಡಿದ್ದಾರೆ. ಇನ್ನು ಶಾಲೆಗಳು ಬಂದ್ ಆಗಿದ್ದರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಖರೀದಿ ಮಾಡಿ ನಮ್ಮ ಕೈಹಿಡಿಯಬೇಕು ಎಂದು ಕಲಾ ಶಿಕ್ಷಕ ಭೀಮೇಶ್ ಮನವಿ ಮಾಡಿದ್ದಾರೆ.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾಡಿ ಮಾರಾಟ ಮಾಡಿದರೆ ತಾತ್ಕಾಲಿಕವಾಗಿ ಜೀವನ ನಡೆಸಲು ಸಹಕಾರ ಆಗುತ್ತೆ ಎನ್ನುವ ಕಾರಣಕ್ಕೆ ಇಬ್ಬರು ಸ್ನೇಹಿತರು ಸೇರಿ ಇನ್ನೊಬ್ಬರ ಗೋಡೌನ್​ನಲ್ಲಿ ಜಾಗ ಪಡೆದು ಕಳೆದ 15 ದಿನಗಳಿಂದ ನಿರಂತರವಾಗಿ ಗಣೇಶನ ಮೂರ್ತಿ ತಯಾರು ಮಾಡುವ ಕೆಲಸ ಮಾಡುತ್ತಿದ್ದಾರೆ. ಇನ್ನು ಗಣೇಶ ಮೂರ್ತಿಗಳನ್ನು ತಯಾರು ಮಾಡಲು ಮತ್ತೊಂದು ಕಾರಣವೆಂದರೆ ಈ ಬಾರಿ ಜನ ಇಂತಹ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನೇ ಖರೀದಿ ಮಾಡಲಿ ಎಂಬುವುದು ಆಗಿದೆ.

ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಂದ ನೀರು ಮಾಲಿನ್ಯ ಆಗಲ್ಲ, ಪರಿಸರಕ್ಕೂ ಸಹ ಯಾವುದು ಹಾನಿ ಇಲ್ಲ. ಹೀಗಾಗಿ ಜನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಖರೀದಿ ಮಾಡಿ ಗಣೇಶ ಉತ್ಸವವನ್ನು ಆಚರಿಸಿ ಎಂದು ಕಲಾ ಶಿಕ್ಷಕ ಅರುಣ್ ಕುಮಾರ್ ತಿಳಿಸಿದ್ದಾರೆ.

ಒಟ್ಟಿನಲ್ಲಿ ಕೊರೊನಾದಿಂದ ಇಂತಹ ಸಾವಿರಾರು ಮಂದಿ ಖಾಸಗಿ ಶಾಲೆಯ ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಆದರೆ ಯಾದಗಿರಿಯಲ್ಲಿ ಶಿಕ್ಷಕರು ತಮ್ಮ ಕಲೆಯನ್ನು ಬಳಸಿಕೊಂಡು ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ತಯಾರು ಮಾಡುತ್ತಿದ್ದು, ನಿಜಕ್ಕೂ ಇತರರಿಗೆ ಮಾದರಿಯಾಗಿದ್ದಾರೆ.

ವರದಿ: ಅಮೀನ್ ಹೊಸುರ್

ಇದನ್ನೂ ಓದಿ: ಎರಡು ವರ್ಷದಿಂದ ಕೊರೊನಾ ಕರಿನೆರಳು; ಗಣೇಶ ಮೂರ್ತಿ ತಯಾರಕರು ಕಂಗಾಲು

ಬೆಳಗಾವಿ: ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತ ಮೊಹಮ್ಮದ್ ಜಮಾದಾರ್ ತಯಾರಿಸುವ ಗಣಪತಿ

Published On - 1:28 pm, Sun, 5 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ