AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಶಿಥಿಲಾವಸ್ಥೆಗೆ ತಲುಪಿದೆ ಶಾಲೆ, ಯೋಗ್ಯವಿಲ್ಲದ ಕೊಠಡಿ; 6-9ನೇ ತರಗತಿ ವಿದ್ಯಾರ್ಥಿಗಳಿಗೆ ಅನಧಿಕೃತ ರಜೆ ಘೋಷಣೆ

ಯಾದಗಿರಿ ಜಿಲ್ಲೆಯ ಸುರಪುರ ನಗರದ ತಿಮ್ಮಾಪುರ ಬಡಾವಣೆಯಲ್ಲಿರುವ ಸರ್ಕಾರಿ ಶಾಲೆ‌ಯ ಕೊಠಡಿಗಳು ಮಕ್ಕಳು ಕುಳಿತು ಓದುವ ಸ್ಥಿತಿಯಲ್ಲಿಲ್ಲ. ಒಮ್ಮೆ ಜೋರು ಮಳೆ ಬಂದರೆ ಕ್ಷಣದಲ್ಲೇ ಬಿದ್ದು ಹೋಗುವಂತಿದೆ ಶಾಲೆ ಕಟ್ಟಡ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಿನಕ್ಕೆ ಒಂದು ತರಗತಿ ಎಂಬಂತೆ ಪಾಠ ಮಾಡುತ್ತಿದ್ದಾರೆ.

ಅಮೀನ್​ ಸಾಬ್​
| Edited By: |

Updated on: Jun 13, 2024 | 8:54 AM

Share

ಯಾದಗಿರಿ, ಜೂನ್.13: ಶೈಕ್ಷಣಿಕ ವರ್ಷದ ತರಗತಿ ಆರಂಭವಾದರೂ ಮಕ್ಕಳಿಗಿಲ್ಲ ಪಾಠ ಕೇಳುವ ಭಾಗ್ಯ (Government School). ಶೈಕ್ಷಣಿಕ ವರ್ಷದ ತರಗತಿ ಆರಂಭವಾಗಿ ಹದಿನೈದು ದಿನ‌ಗಳು ಕಳೆದಿವೆ. ಆದರೆ ಇಲ್ಲೊಂದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅನಧಿಕೃತ ರಜೆ (Holiday) ಘೋಷಣೆ ಮಾಡಲಾಗಿದೆ. ಕೊಠಡಿಗಳು ಇಲ್ಲದಿರುವ ಕಾರಣಕ್ಕೆ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅನಧಿಕೃತ ರಜೆ ಘೋಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಸುರಪುರ ನಗರದ ತಿಮ್ಮಾಪುರ ಬಡಾವಣೆಯಲ್ಲಿರುವ ಸರ್ಕಾರಿ ಶಾಲೆ‌ಯ ಪರಿಸ್ಥಿತಿ ಹೇಳತೀರದ್ದು ಅಲ್ಪಸಂಖ್ಯಾತರ ಇಲಾಖೆಗೆ ಒಳಪಡುವ ಮೌಲಾನಾ ಆಜಾದ್ ಮಾದರಿ ಶಾಲೆ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಈ ಸರ್ಕಾರಿ ಶಾಲೆಯ ಕೊಠಡಿಗಳಂತೋ ಅವಘಡದ ಮುನ್ಸೂಚನೆಯಂತೆ ತೋರುತ್ತಿವೆ. ಈ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಿ ಪಾಠ ಮಾಡಲು ಕೊಠಡಿಗಳ ಕೊರತೆ ಹೆಚ್ಚಿದೆ. ಹೀಗಾಗಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅನಧಿಕೃತ ರಜೆ ಘೋಷಣೆ ಮಾಡಲಾಗಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪಾಠ ಬೋಧನೆ ಮಾಡಲಾಗುತ್ತಿದೆ.

ನೂರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಈ ಶಾಲೆಯಲ್ಲಿ ಒಬ್ಬರೇ ಒಬ್ಬರು ಖಾಯಂ ಶಿಕ್ಷಕರು ಮಾತ್ರ ಇದ್ದಾರೆ. ಶಿಥಿಲಾವಸ್ಥೆಗೆ ತಲುಪಿದ ಕಟ್ಟಡದಲ್ಲೇ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲಾಗುತ್ತಿದೆ. ಅಥಿತಿ ಶಿಕ್ಷಕರು ಒಂದೇ ಕೊಠಡಿಯಲ್ಲಿ ಪಾಠ ಮಾಡ್ತಿದ್ದಾರೆ. ಉಳಿದೆಲ್ಲಾ ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿವೆ. ಸ್ವಲ್ಪ ಮಳೆಯಾದರೂ ಶಾಲೆಗೆ ಬೀಗ ಹಾಕಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. 9ನೇ ತರಗತಿ ವಿದ್ಯಾರ್ಥಿಗಳು ಕ್ಲಾಸ್ ಗೆ ಹಾಜರಾದ್ದರೇ, ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗುತ್ತಿದೆ. 10ನೇ ತರಗತಿ ವಿದ್ಯಾರ್ಥಿಗಳು ಕ್ಲಾಸ್​ಗೆ ಬಂದರೆ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​