AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yadagiri News: ವೈದ್ಯರು, ಸಿಬ್ಬಂದಿ ಇಲ್ಲದಿದ್ದಕ್ಕೆ ರಾತ್ರಿ ವೇಳೆ ಆಸ್ಪತ್ರೆಗೆ ಬೀಗ; ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಮುಂದೆ ನರಳಾಡಿದ ಯುವಕ

ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ಸಿಬ್ಬಂದಿ ಇಲ್ಲದ ಕಾರಣ, ರಾತ್ರಿ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗುತ್ತಿದ್ದು, ನಿನ್ನೆ ರಾತ್ರಿ ಬೈಕ್​ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಆಸ್ಪತ್ರೆ ಮುಂದೆಯೇ ಚಿಕಿತ್ಸೆ ದೊರಕದೆ ನರಳಾಡಿದ್ದಾನೆ.

Yadagiri News: ವೈದ್ಯರು, ಸಿಬ್ಬಂದಿ ಇಲ್ಲದಿದ್ದಕ್ಕೆ ರಾತ್ರಿ ವೇಳೆ ಆಸ್ಪತ್ರೆಗೆ ಬೀಗ; ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಮುಂದೆ ನರಳಾಡಿದ ಯುವಕ
ಯಾದಗಿರಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 02, 2023 | 9:19 AM

Share

ಯಾದಗಿರಿ: ಜಿಲ್ಲೆಯ ವಡಗೇರಾ(Wadgera) ತಾಲೂಕಿನ ಬೆಂಡೆಬೆಂಬಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ಸಿಬ್ಬಂದಿ ಇಲ್ಲದ ಕಾರಣ, ರಾತ್ರಿ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗುತ್ತಿದೆ. ಅದರಂತೆ ನಿನ್ನೆ ರಾತ್ರಿ ವೇಳೆ ರಾಯಚೂರು(Raichur)ಜಿಲ್ಲೆಯ ದೇವದುರ್ಗ ಮೂಲದ ಸವಾರ ರವಿಚಂದ್ರ ಎಂಬಾತ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ. ಕೂಡಲೇ ಸ್ಥಳೀಯರು ಯುವಕನನ್ನ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ ಆಸ್ಪತ್ರೆಗೆ ಬೀಗ ಹಾಕಿದ ಕಾರಣ ಅಪಘಾತಕ್ಕೊಳಗಾದ ಯುವಕ ಆಸ್ಪತ್ರೆ ಬಳಿಯೇ ಒಂದು ಗಂಟೆಯ ಕಾಲ ನರಳಾಡಲು ಶುರು ಮಾಡಿದ್ದಾನೆ. ಕೊನೆಗೆ ಆ್ಯಂಬುಲೆನ್ಸ್​​ ಮೂಲಕ ಬೇರೆ ಆಸ್ಪತ್ರೆಗೆ ಗಾಯಾಳುವನ್ನ ರವಾನೆ ಮಾಡಲಾಗಿದೆ.

ಮದ್ಯಸೇವಿಸಿ ಆಪರೇಷನ್ ಮಾಡಲು ಬಂದ ಡಾಕ್ಟರ್, ಶಸ್ತ್ರಚಿಕಿತ್ಸೆ ಸಿದ್ಧತೆ ಮಾಡಿಕೊಳ್ಳುವ ವೇಳೆ ಕುಸಿದು ಬಿದ್ದಿದ್ದ

ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯ, ಸಿಬ್ಬಂದಿ ಕೊರತೆ ರಾಜ್ಯದಲ್ಲಿ ಇದೆ ಮೊದಲಲ್ಲ. ಮೇ.31 ರಂದು ಆಪರೇಷನ್ ಮಾಡಲು ಬಂದ ವೈದ್ಯ, ಮದ್ಯಸೇವಿಸಿದ ಆರೋಪ ಕಳಸ ತಾಲೂಕು ಆಸ್ಪತ್ರೆಯಲ್ಲಿ ಕೇಳಿಬಂದಿತ್ತು. ಶಸ್ತ್ರಚಿಕಿತ್ಸೆಯ ವೇಳೆ ಫುಲ್ ಟೈಟಾಗಿ ವೈದ್ಯ ಬಾಲಕೃಷ್ಣ ಎಂಬುವವರು ಕುಸಿದು ಬಿದ್ದಿದ್ದರು. ಈ ವೇಳೆ ಸಂತಾನ‌ಹರಣ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ, ಅನಸ್ತೇಷಿಯಾ ಇಂಜೆಕ್ಷನ್ ಪಡೆದಿದ್ದ 9‌ ಮಹಿಳೆಯರ ಪರದಾಟ ಹೇಳತೀರದು. ಈ ಕುರಿತು ರೋಗಿಗಳ ಸಂಬಂಧಿಕರಿಂದ ಆಸ್ಪತ್ರೆಯಲ್ಲೇ ವೈದ್ಯನಿಂದ ಮಧ್ಯಪಾನ ಮಾಡಿರುವ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ:ಕಿದ್ವಾಯಿ ಆಸ್ಪತ್ರೆಯಲ್ಲಿ ಒಂದಲ್ಲಾ ಎರಡಲ್ಲಾ ಸಮಸ್ಯೆ: ಅಧಿಕಾರಿಗಳ‌ ನಿರ್ಲಕ್ಷಕ್ಕೆ ಅಸುನೀಗುತ್ತಿವೆ ಬಡ ಜೀವಗಳು

ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೇಳೆ ಅಸ್ವಸ್ಥರಾಗಿದ್ದ ವೈದ್ಯ ಬಾಲಕೃಷ್ಣ

ಶಸ್ತ್ರ ಚಿಕಿತ್ಸೆಗೆ‌ ಎಲ್ಲಾ ಸಿದ್ದತೆ ಮಾಡಿಕೊಳ್ಳುವ ವೇಳೆ ಆಪರೇಷನ್ ಥಿಯೇಟರ್​ನಲ್ಲಿ ವೈದ್ಯ ಬಾಲಕೃಷ್ಣ ಕುಸಿದು ಬಿದ್ದಿದ್ದ. ಅಸ್ವಸ್ಥಗೊಂಡ ವೈದ್ಯನನ್ನ ಸಿಬ್ಬಂದಿಗಳು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಇತ ಬೆಳಗ್ಗೆ 8 ಗಂಟೆಗೆ ಅನಸ್ತೇಷಿಯಾ ನೀಡಿ ಮಧ್ಯಾಹ್ನ 2 ಗಂಟೆಯಾದರೂ ಆಪರೇಷನ್ ಮಾಡಿರಲಿಲ್ಲ. ಹೋಗಿ ನೋಡಿದಾಗ ಬೆಳಗ್ಗೆಯಿಂದ ಆಪರೇಷನ್ ಥಿಯೇಟರ್​ನಲ್ಲೆ ವೈದ್ಯ ನಿದ್ರೆ ಮಾಡಿದ್ದ. ಶಸ್ತ್ರ ಚಿಕಿತ್ಸೆಗೆ ವೈದ್ಯರಿಲ್ಲದೆ ಅನಸ್ತೇಷಿಯಾ ಪಡೆದ ಮಹಿಳೆಯರ ಪರದಾಡುತ್ತಿದ್ದರು. ಬಳಿಕ ವೈದ್ಯ ಬಾಲಕೃಷ್ಣ ವಿರುದ್ಧ ಶಿಸ್ತು ಕ್ರಮಕ್ಕೆ‌ ರೋಗಿಗಳ ಸಂಬಂಧಿಕರು ಆಗ್ರಹಿಸಿದ್ದರು. ಬಳಿಕ ಆತನನ್ನ ವಜಾಗೊಳಿಸಲಾಯಿತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ