AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ

ಯಾದಗಿರಿ(Yadgiri) ನಗರದ ಲಕ್ಷ್ಮೀ ಬಡಾವಣೆಯಲ್ಲಿ ಹಿಂದೂ ಮನೆಗಳಿಗೆ ತೆರಳಿ ಹಿಂದೂ ದೇವರ ಬಗ್ಗೆಯೇ ಕೇವಲವಾಗಿ ಮಾತನಾಡಿ, ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ(convert)ಕ್ಕೆ ಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಇಬ್ಬರು ಮಹಿಳೆಯರನ್ನ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ
ಯಾದಗಿರಿಯಲ್ಲಿ ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 4:41 PM

Share

ಯಾದಗಿರಿ, ಆ.20: ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ(convert)ಕ್ಕೆ ಯತ್ನಿಸಿದ ಆರೋಪ ಯಾದಗಿರಿ(Yadgiri) ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ ಮುಂದಾಗಿದ್ದರು. ಇನ್ನೀಬ್ಬರು ಮಹಿಳೆಯರು ಪರಾರಿಯಾಗಿದ್ದಾರೆ.

ಹಿಂದೂ ದೇವರ ಬಗ್ಗೆ ಕೇವಲವಾಗಿ ಮಾತನಾಡಿರೋ ಮಹಿಳೆಯರು

ಈ ಇಬ್ಬರು ಕ್ರಿಶ್ಚಿಯನ್ ಮಹಿಳೆಯರು ಹಿಂದು ಮನೆಗಳಿಗೆ ತೆರಳಿ ಹಿಂದೂ ದೇವರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರಂತೆ. ‘ ಭೂಮಿ ಮೇಲೆ ದೇವರು ಅಂತ ಇದ್ದರೆ ಯೇಸುಕ್ರಿಸ್ತ ಒಬ್ಬನೆ. ನಿಮ್ಮ ದೇವರುಗಳು ನಿಮಗೆ ರಕ್ಷಣೆ ನೀಡುವುದಿಲ್ಲ. ನಿಮ್ಮ ಹಿಂದೂ ಧರ್ಮ ತ್ಯಜಿಸಿ, ಕ್ರೈಸ್ತ ಧರ್ಮಕ್ಕೆ ಬನ್ನಿ. ನಿಜವಾದ ದೇವರು ಯೇಸುಕ್ರಿಸ್ತನನ್ನು ಅನುಸರಿಸಲು ಹಿಂದು ಧರ್ಮ ತ್ಯಜಿಸಿ ಮತಾಂತರಗೊಳ್ಳಿ. ಹೀಗೆ ನಮ್ಮ ಮನೆಗೆ ಬಂದು ನಮ್ಮನ್ನು ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರಚೋದನೆ ಮಾಡಿದ್ದಾರೆ. ಇಂತಹ ಕೃತ್ಯ ಎಸಗಿದ ಇಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಯಾದಗಿರಿ ನಗರ ಠಾಣೆಗೆ ಜನರು ದೂರು ನೀಡಿದ್ದಾರೆ.

ಇದನ್ನೂ ಓದಿ:ಕಲಘಟಗಿ: ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲು

ಕಳೆದ ಜುಲೈ 22 ರಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರನ್ನು ಮತಾಂತರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿತ್ತು. ಈ ಕುರಿತು ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಯಾದಗಿರಿಯಲ್ಲಿ ಇಂತಹುದೇ ಘಟನೆ ಬೆಳಕಿಗೆ ಬಂದಿದ್ದು, ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ