AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ

ಯಾದಗಿರಿ(Yadgiri) ನಗರದ ಲಕ್ಷ್ಮೀ ಬಡಾವಣೆಯಲ್ಲಿ ಹಿಂದೂ ಮನೆಗಳಿಗೆ ತೆರಳಿ ಹಿಂದೂ ದೇವರ ಬಗ್ಗೆಯೇ ಕೇವಲವಾಗಿ ಮಾತನಾಡಿ, ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ(convert)ಕ್ಕೆ ಯತ್ನಿಸಿದ ಘಟನೆ ನಡೆದಿದೆ. ಈ ಕುರಿತು ಇಬ್ಬರು ಮಹಿಳೆಯರನ್ನ ಜನರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ
ಯಾದಗಿರಿಯಲ್ಲಿ ಹಿಂದೂ ಮನೆಗಳಿಗೆ ತೆರಳಿ ಮತಾಂತರಕ್ಕೆ ಯತ್ನ; ಇಬ್ಬರು ಮಹಿಳೆಯರನ್ನ ಪೊಲೀಸರಿಗೆ ಒಪ್ಪಿಸಿದ ಜನ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 4:41 PM

Share

ಯಾದಗಿರಿ, ಆ.20: ಹಿಂದೂ ಮನೆಗೆ ತೆರಳಿ ಬಲವಂತವಾಗಿ ಕ್ರೈಸ್ತ ಧರ್ಮದ ಕರಪತ್ರ ಹಂಚಿ ಮತಾಂತರ(convert)ಕ್ಕೆ ಯತ್ನಿಸಿದ ಆರೋಪ ಯಾದಗಿರಿ(Yadgiri) ನಗರದ ಲಕ್ಷ್ಮೀ ಬಡಾವಣೆಯಲ್ಲಿ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಜನ, ಮತಾಂತರಕ್ಕೆ ಮುಂದಾದ ಇಬ್ಬರು ಕ್ರಿಶ್ಚಿಯನ್ ಮಹಿಳೆಯರನ್ನು ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಮಹಿಳೆಯರಾದ ರೇಚಲ್ ರಾಬರ್ಟ್ ಹಾಗೂ ಕರುಣಾ ಅವರು, ಮತಾಂತರಕ್ಕೆ ಮುಂದಾಗಿದ್ದರು. ಇನ್ನೀಬ್ಬರು ಮಹಿಳೆಯರು ಪರಾರಿಯಾಗಿದ್ದಾರೆ.

ಹಿಂದೂ ದೇವರ ಬಗ್ಗೆ ಕೇವಲವಾಗಿ ಮಾತನಾಡಿರೋ ಮಹಿಳೆಯರು

ಈ ಇಬ್ಬರು ಕ್ರಿಶ್ಚಿಯನ್ ಮಹಿಳೆಯರು ಹಿಂದು ಮನೆಗಳಿಗೆ ತೆರಳಿ ಹಿಂದೂ ದೇವರ ಬಗ್ಗೆ ಕೇವಲವಾಗಿ ಮಾತನಾಡಿದ್ದಾರಂತೆ. ‘ ಭೂಮಿ ಮೇಲೆ ದೇವರು ಅಂತ ಇದ್ದರೆ ಯೇಸುಕ್ರಿಸ್ತ ಒಬ್ಬನೆ. ನಿಮ್ಮ ದೇವರುಗಳು ನಿಮಗೆ ರಕ್ಷಣೆ ನೀಡುವುದಿಲ್ಲ. ನಿಮ್ಮ ಹಿಂದೂ ಧರ್ಮ ತ್ಯಜಿಸಿ, ಕ್ರೈಸ್ತ ಧರ್ಮಕ್ಕೆ ಬನ್ನಿ. ನಿಜವಾದ ದೇವರು ಯೇಸುಕ್ರಿಸ್ತನನ್ನು ಅನುಸರಿಸಲು ಹಿಂದು ಧರ್ಮ ತ್ಯಜಿಸಿ ಮತಾಂತರಗೊಳ್ಳಿ. ಹೀಗೆ ನಮ್ಮ ಮನೆಗೆ ಬಂದು ನಮ್ಮನ್ನು ಬಲವಂತವಾಗಿ ಮತಾಂತರ ಮಾಡುವುದಕ್ಕೆ ಪ್ರಚೋದನೆ ಮಾಡಿದ್ದಾರೆ. ಇಂತಹ ಕೃತ್ಯ ಎಸಗಿದ ಇಬ್ಬರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಯಾದಗಿರಿ ನಗರ ಠಾಣೆಗೆ ಜನರು ದೂರು ನೀಡಿದ್ದಾರೆ.

ಇದನ್ನೂ ಓದಿ:ಕಲಘಟಗಿ: ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲು

ಕಳೆದ ಜುಲೈ 22 ರಂದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರನ್ನು ಮತಾಂತರಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿತ್ತು. ಈ ಕುರಿತು ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಇದೀಗ ಯಾದಗಿರಿಯಲ್ಲಿ ಇಂತಹುದೇ ಘಟನೆ ಬೆಳಕಿಗೆ ಬಂದಿದ್ದು, ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ?
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ಅಮೆರಿಕದಲ್ಲಿ ಹೇಗಿದೆ ‘ಟಾಕ್ಸಿಕ್’ ಸಿನಿಮಾ ಅಬ್ಬರ: ವಿಡಿಯೋ ನೋಡಿ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ನಕಲಿ ಸೌಂದರ್ಯವರ್ಧಕಗಳ ವಿರುದ್ಧ FDA ಸಮರ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಮಂತ್ರಾಲಯದಲ್ಲಿ ಸಂಭ್ರಮ: 335ನೇ ಆರಾಧನಾ ಮಹೋತ್ಸವಕ್ಕೆ ಸಕಲ ಸಿದ್ಧತೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಲಖನೌದಿಂದ ಕೆಐಎಬಿಗೆ ಬಂದಿದ್ದ ವಿಮಾನಕ್ಕೆ ಬಾಂಬ್​​ ಬೆದರಿಕೆ
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?
ಅಭಿಮನ್ಯುಗೆ ವಿಶ್ರಾಂತಿ; ಈ ಬಾರಿ ಅಂಬಾರಿ ಹೊರುವ ಆನೆ ಯಾವುದು?