AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಚಿಕ್ಕನಹಳ್ಳಿಯಲ್ಲಿ ಕಳೆದ 3 ದಿನಗಳಲ್ಲಿ 36 ಜನರಿಗೆ‌ ವಾಂತಿ ಭೇದಿ

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುವ ಘಟನೆಗಳು ಯಾದಗಿರಿ ಜಿಲ್ಲೆಯಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಿದೆ. ಇತ್ತೀ​ಚೆ​ಗೆ ಗುರುಮಠಕಲ್‌ ತಾಲೂಕಿನ ಅನಪುರ, ಶಿವಪುರ, ಮಾರ​ಲ​ಭಾವಿ, ಗಾಜರಕೋಟ್‌ನಲ್ಲಿ ಕಲುಷಿತ ನೀರು ಸೇವನೆಯಿಂದಾದ ಅನಾಹುತಗಳು ಮಾಸುವ ಮುನ್ನವೇ, ಇದೀಗ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಕಳೆದ ಮೂರು‌‌ ದಿನಗಳಲ್ಲಿ 25 ಜನ ಶಾಲಾ ಮಕ್ಕಳು ಸೇರಿದಂತೆ 36 ಜನರಲ್ಲಿ‌ ವಾಂತಿ, ಭೇದಿ ಕಾಣಿಸಿಕೊಂಡಿದೆ.

ಯಾದಗಿರಿ: ಚಿಕ್ಕನಹಳ್ಳಿಯಲ್ಲಿ ಕಳೆದ 3 ದಿನಗಳಲ್ಲಿ 36 ಜನರಿಗೆ‌ ವಾಂತಿ ಭೇದಿ
ಆರೋಗ್ಯ ವಿಚಾರಿಸಿದ ಶಾಸಕ ರಾಜಾ ವೆಂಕಟಪ್ಪ ನಾಯಕ
ಅಮೀನ್​ ಸಾಬ್​
| Edited By: |

Updated on: Aug 29, 2023 | 10:18 AM

Share

ಯಾದಗಿರಿ: ಜಿಲ್ಲೆಯ ಸುರಪುರ (Surapur) ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕಲುಷಿತ ನೀರು (Commuted Water) ಸೇವಿಸಿ ಜೊತೆಗೆ ಫುಡ್ ಪಾಯಿಸನ್​​ನಿಂದ ಕಳೆದ ಮೂರು‌‌ ದಿನಗಳಲ್ಲಿ 25 ಜನ ಶಾಲಾ ಮಕ್ಕಳು ಸೇರಿದಂತೆ 36 ಜನರಲ್ಲಿ‌ ವಾಂತಿ, ಭೇದಿ ಕಾಣಿಸಿಕೊಂಡಿದೆ. ಐವರು ವಿದ್ಯಾರ್ಥಿಗಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿಕ್ಕನಹಳ್ಳಿ ಗ್ರಾಮಕ್ಕೆ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಭೇಟಿ ನೀಡಿದ್ದು, ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

ನಿನ್ನೆ (ಆ.28) ರಂದು ಒಂದೇ ದಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಹಾಗೂ ಫುಡ್ ಪಾಯಿಸನ್ ನಿಂದ 24 ಜನರಿಗೆ ವಾಂತಿ ಭೇದಿಯಾಗಿತ್ತು. ಕೊಳವೆ ಬಾವಿಯ ನೀರು ಸೇವಿಸಿದ 16 ಮಕ್ಕಳಿಗೆ ವಾಂತಿ ಭೇದಿಯಾಗಿದ್ದು ಮಕ್ಕಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತು ಫುಡ್ ಪಾಯಿಸನ್​ನಿಂದ ಪಶ್ಚಿಮ ಬಂಗಾಳ ಮೂಲದ 8 ಕಾರ್ಮಿಕರಿಗೆ ವಾಂತಿ ಭೇದಿಯಾಗಿತ್ತು. ಇವರನ್ನು ಸರಿಯಾಗಿ ಬೇಯಿಸದೆ ಮೀನು ಆಹಾರ ಸೇವಿಸಿದ ಹಿನ್ನೆಲೆ ಕಾರ್ಮಿಕರಿಗೆ ವಾಂತಿ ಭೇದಿಯಾಗಿದೆ ಎನ್ನಲಾಗುತ್ತು. ಕಾರ್ಮಿಕರನ್ನು ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರ ಸಾವು ಪ್ರಕರಣ; ಗಂಜಿ ಕೇಂದ್ರದ ಆಹಾರದಲ್ಲೂ ಜಿರಳೆ ಪತ್ತೆ

ಕಳೆದ ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ​ಲ​ಭಾವಿ ಗ್ರಾಮ​ದಲ್ಲಿ ಕಲುಷಿತ ನೀರು ಸೇವನೆಯಿಂದ 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಮಾರಲಭಾವಿ ಗ್ರಾಮದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ವಸ್ತು ಸೇರಿದ್ದು, ಇದನ್ನು ಸೇವಿಸಿದವರಿಗೆ ವಾಂತಿಬೇಧಿ ಉಂಟಾಗಿತ್ತು.

ಮಕ್ಕಳು, ಯುವಕರು ಹಾಗೂ ವಯೋವೃದ್ಧರು ಸೇರಿದಂತೆ 10ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಗ್ರಾಮಕ್ಕೆ ಕುಡಿಯುವ ನೀರಿನ ಮೂಲವಾಗಿದ್ದ ಬಾವಿಯಲ್ಲಿ ಕೆಲವು ದಿನಗಳ ಹಿಂದೆ ಹಂದಿ ಸತ್ತು ಬಿದ್ದಿತ್ತಂತೆ, ಇದರ ಸ್ವಚ್ಛತೆಗೆ ಕ್ರಮ ಕೈಗೊಂಡಿರಲಿಲ್ಲ. ಈ ವಿಚಾರ ತಿಳಿಯದ ಕೆಲವರು ನೀರು ಸೇವಿಸಿ ಅಸ್ವಸ್ಥಗೊಂಡಿದ್ದರು ಎಂಬ ಮಾತು ಕೇಳಿ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್